AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ವಿಭಜನೆಯ ವಿಷ ಉಣಿಸಬೇಡಿ, ಪೂರ್ವಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು: ಹಿಜಾಬ್ ವಿವಾದ ಬಗ್ಗೆ ಸದ್ಗುರು ಹೇಳಿದ್ದೇನು?

ಹಿಜಾಬ್ ವಿವಾದದಲ್ಲಿ ರಾಜಕೀಯ ತೊಡಗಿಸಿಕೊಂಡಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು “ನೀವು ಶಾಲೆಗಳಲ್ಲಿದ್ದಾಗ ನಿಮ್ಮನ್ನು ಮಗು ಎಂದು ಪರಿಗಣಿಸಲಾಗುತ್ತದೆ. ಮಗುವಿಗೆ ವಿಭಜನೆಯ ವಿಷವನ್ನುಣಿಸಬಾರದು. ನೀವು ಮುಕ್ತವಾಗಿ ಬೆಳೆಯಲು ಬಿಡಬೇಕು.

ಮಕ್ಕಳಿಗೆ ವಿಭಜನೆಯ ವಿಷ ಉಣಿಸಬೇಡಿ, ಪೂರ್ವಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು: ಹಿಜಾಬ್ ವಿವಾದ ಬಗ್ಗೆ ಸದ್ಗುರು ಹೇಳಿದ್ದೇನು?
ಸದ್ಗುರು ಜಗ್ಗಿ ವಾಸುದೇವ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 22, 2022 | 2:54 PM

Share

ದೆಹಲಿ: ನಮ್ಮನ್ನು ಒಟ್ಟಿಗೆ ಸೇರಿಸುವ ಜೀವನದ ಅಂಶಗಳನ್ನು ನೋಡುವ ಬದಲು ನಾವು ನಿರಂತರವಾಗಿ ನಮ್ಮನ್ನು ವಿಭಜಿಸುವ ಅಂಶಗಳನ್ನು ನೋಡುತ್ತಿದ್ದೇವೆ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಹೇಳಿದ್ದಾರೆ. ಟೈಮ್ಸ್ ನೆಟ್‌ವರ್ಕ್ ಗ್ರೂಪ್ ಎಡಿಟರ್ ಮತ್ತು ಟೈಮ್ಸ್ ನೌ ನವಭಾರತದ ಪ್ರಧಾನ ಸಂಪಾದಕರಾದ ನವಿಕಾ ಕುಮಾರ್ ಅವರೊಂದಿಗೆ ಸೋಮವಾರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್ ಹಿಜಾಬ್ ವಿವಾದದ (hijab controversy) ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿ ಡ್ರೆಸ್ ಕೋಡ್‌ನಲ್ಲಿ ಏಕರೂಪತೆ ಇರಬೇಕೇ ಎಂಬ ಪ್ರಶ್ನೆಗೆ “ನೀವು ಹಿಜಾಬ್, ಬುರ್ಖಾ, ಸೀರೆ ಅಥವಾ ನೀವು ತಿನ್ನುವ ಯಾವುದೇ ವಸ್ತು, ಅದು ಖಿಚಡಿ ಅಥವಾ ಬಿರಿಯಾನಿ … ಎಲ್ಲವೂ ಮಣ್ಣಿನಿಂದ ಬರುತ್ತದೆ. ಆದ್ದರಿಂದ ಮಣ್ಣು ಅದ್ಭುತವಾಗಿ ಒಂದುಗೂಡಿಸುವ ಶಕ್ತಿಯಾಗಿದೆ ಎಂದಿದ್ದಾರೆ.  “ನಮ್ಮನ್ನು ಒಟ್ಟಿಗೆ ಸೇರಿಸುವ ಜೀವನದ ಅಂಶಗಳನ್ನು ನೋಡುವ ಬದಲು, ನಾವು ನಿರಂತರವಾಗಿ ನಮ್ಮನ್ನು ವಿಭಜಿಸುವ ಅಂಶಗಳನ್ನು ನೋಡುತ್ತಿದ್ದೇವೆ. ಮಣ್ಣು ಸಾರ್ವತ್ರಿಕ ವಸ್ತುವಾಗಿದೆ. ನೀವು ಯಾರು, ಯಾವ ಧರ್ಮ, ಜನಾಂಗ, ರಾಷ್ಟ್ರೀಯತೆಗೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಮಣ್ಣಿನಿಂದ ಬಂದವರು ನೀವು ಮರಳಿ ಮಣ್ಣಿಗೆ ಹೋಗುತ್ತೀರಿ, ಆದ್ದರಿಂದ ಇದು ಒಂದು ಪ್ರಮುಖ ಒಗ್ಗೂಡಿಸುವ ಮೂಲವಾಗಬಹುದು ”ಎಂದು ಇಶಾ ಫೌಂಡೇಶನ್ ಸಂಸ್ಥಾಪಕರು ಹೇಳಿದರು.

ಹಿಂದಿನ ಪೀಳಿಗೆಯವರು ಬದುಕಿದ ಪೂರ್ವಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು ಎಂದು ಸದ್ಗುರು ಒತ್ತಿ ಹೇಳಿದ್ದಾರೆ.

ಹಿಜಾಬ್ ವಿವಾದದಲ್ಲಿ ರಾಜಕೀಯ ತೊಡಗಿಸಿಕೊಂಡಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು “ನೀವು ಶಾಲೆಗಳಲ್ಲಿದ್ದಾಗ ನಿಮ್ಮನ್ನು ಮಗು ಎಂದು ಪರಿಗಣಿಸಲಾಗುತ್ತದೆ. ಮಗುವಿಗೆ ವಿಭಜನೆಯ ವಿಷವನ್ನುಣಿಸಬಾರದು. ನೀವು ಮುಕ್ತವಾಗಿ ಬೆಳೆಯಲು ಬಿಡಬೇಕು.

ಹಿಂದಿನ ಪೀಳಿಗೆಯ ಜನರದ್ದೇ ಮಾದರಿಯಲ್ಲಿ ಮಕ್ಕಳು ಬೆಳೆಯಬೇಕಾಗಿಲ್ಲ ಎಂಬುದು ಬಹಳ ಮುಖ್ಯ. ನಮ್ಮಲ್ಲಿ ಯಾವುದೇ ಪೂರ್ವಗ್ರಹಗಳು, ಸಮಸ್ಯೆಗಳು, ದ್ವೇಷ ಅಥವಾ ಪ್ರೀತಿ ಇರಲಿ, ಇದನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ಮುಂದಿನ ಪೀಳಿಗೆಗೆ ನಾವು ಸೀಮಿತವಾಗಿರಬಾರದು ಮತ್ತು ಮಕ್ಕಳು ನೀವು ಬದುಕಿದ ಪೂರ್ವಾಗ್ರಹಗಳೊಂದಿಗೆ ಬೆಳೆಯಬಾರದು ಎಂದು ಸಂದರ್ಶನದಲ್ಲಿ ಸದ್ಗುರು ಹೇಳಿದ್ದಾರೆ.

ಇದನ್ನೂ ಓದಿಎಲ್ಲಾ ಧರ್ಮದ ಜನರು ಶಾಲಾ ಸಮವಸ್ತ್ರವನ್ನು ಒಪ್ಪಿಕೊಳ್ಳಬೇಕು: ಗೃಹ ಸಚಿವ ಅಮಿತ್ ಶಾ

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ