AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯಾವ ರಾಜ್ಯವು ಮದ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡುತ್ತೆ?

ಅನೇಕ ನಗರಗಳಲ್ಲಿ ಮದ್ಯದ ಅಂಗಡಿಗಳ ಹೊರಗೆ ಉದ್ದನೆಯ ಸರತಿ ಸಾಲುಗಳು ಕಂಡುಬರುತ್ತವೆ. ಕೇರಳದಲ್ಲಿ ಜನರು ಮದ್ಯ ಖರೀದಿಸಲು ಸರತಿಯಲ್ಲಿ ನಿಂತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತದೆ, ಆದರೆ ಜನರು ಮದ್ಯಕ್ಕಾಗಿ ಹೆಚ್ಚು ಹಣವನ್ನು ಎಲ್ಲಿ ಖರ್ಚು ಮಾಡುತ್ತಾರೆ ಎಂಬುದೇ ಮುಖ್ಯ ಪ್ರಶ್ನೆ. ಮತ್ತು ಮದ್ಯಕ್ಕಾಗಿ ಕಡಿಮೆ ಹಣವನ್ನು ಖರ್ಚು ಮಾಡುವ ರಾಜ್ಯ ಯಾವುದು?. ಹಣಕಾಸು ಸಚಿವಾಲಯದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಫೈನಾನ್ಸ್ ಅಂಡ್ ಪಾಲಿಸಿಯ (ಎನ್‌ಐಪಿಎಫ್‌ಪಿ) ಅಧ್ಯಯನದ ಪ್ರಕಾರ, ಆಂಧ್ರಪ್ರದೇಶ ಮತ್ತು ತೆಲಂಗಾಣವು ದೇಶದಲ್ಲೇ ಮದ್ಯದ ಮೇಲೆ ಅತಿ ಹೆಚ್ಚು ಖರ್ಚು ಮಾಡುವ ರಾಜ್ಯಗಳು ಎಂದು ಹೇಳಲಾಗಿದೆ.

ಭಾರತದ ಯಾವ ರಾಜ್ಯವು ಮದ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡುತ್ತೆ?
ಮದ್ಯಪಾನ ಆರೋಗ್ಯಕ್ಕೆ ಹಾನಿಕರImage Credit source: Getty Images
ನಯನಾ ರಾಜೀವ್
|

Updated on:Sep 03, 2024 | 12:45 PM

Share

ಭಾರತದಲ್ಲಿ ಮದ್ಯಕ್ಕಾಗಿ ಅತಿ ಹೆಚ್ಚು ಹಣ ಖರ್ಚು ಮಾಡುವ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಫೈನಾನ್ಸ್ ಆ್ಯಂಡ್ ಪಾಲಿಸಿ (NIPFP) ಪ್ರಕಟಿಸಿದ ಆಲ್ಕೊಹಾಲ್​ಯುಕ್ತ ಪಾನೀಯಗಳಿಂದ ಬರುವ ತೆರಿಗೆ ಆದಾಯ ಸಂಗ್ರಹ ವರದಿಯಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದ ಜನರು ಮದ್ಯಕ್ಕಾಗಿ ಅತಿ ಹೆಚ್ಚು ಹಣವನ್ನು ವ್ಯಯಿಸುತ್ತಾರೆ ಎಂದು ವರದಿ ಹೇಳಿದೆ. ಜನರು ವರ್ಷಕ್ಕೆ ತಾವು ಮಾಡುವ ಖರ್ಚಿನಲ್ಲಿ ಯಾವ ಪ್ರಮಾಣದ ಹಣವನ್ನು ಮದ್ಯಕ್ಕಾಗಿ ಮೀಸಲಿಟ್ಟಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ತೆಲಂಗಾಣದ ಜನರು ಮದ್ಯಕ್ಕಾಗಿ ವರ್ಷಕ್ಕೆ ಸರಾಸರಿ 1,623 ರೂ. (2022-23) ಖರ್ಚು ಮಾಡುತ್ತಾರೆ. ಆಂಧ್ರಪ್ರದೇಶದ ಜನರು ಸರಾಸರಿ 1306 ರೂ. ವ್ಯಯಿಸುತ್ತಾರೆ. ಛತ್ತೀಸ್‌ಗಢ 1,227 ರೂ, ಪಂಜಾಬ್ 1,245 ರೂ. ಮತ್ತು ಒಡಿಶಾ 1,156 ರೂ. ಕೇರಳ ಸರಾಸರಿ 379 ರೂ. ಈ ಪಟ್ಟಿಯಲ್ಲಿ ಕೇರಳ ಒಂಬತ್ತನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೇವಿಸುವ ಒಟ್ಟು ಮದ್ಯವನ್ನು ಜನಸಂಖ್ಯೆಯಿಂದ ಭಾಗಿಸಿ ತಲಾವಾರು ಮದ್ಯ ಸೇವನೆಯನ್ನು ಲೆಕ್ಕಹಾಕಲಾಗುತ್ತದೆ.

ಮತ್ತಷ್ಟು ಓದಿ: Fatty Liver: ಮದ್ಯಪಾನ ಮಾಡದಿದ್ದರೂ ಫ್ಯಾಟಿ ಲಿವರ್ ಕಾಯಿಲೆ ಬರಲು ಕಾರಣವೇನು?

ಎನ್‌ಎಸ್‌ಎಸ್‌ಒ (ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ), ಕೇರಳ ( 486 ರೂ.), ಹಿಮಾಚಲ ಪ್ರದೇಶ (457 ರೂ.), ಪಂಜಾಬ್ (ರೂ. 453), ತಮಿಳುನಾಡು (ರೂ. 330), ರಾಜಸ್ಥಾನ (ರೂ. 308) ಸಮೀಕ್ಷೆಯ ಮಾಹಿತಿಯ ಪ್ರಕಾರ ಈ ಕೆಳಗಿನಂತಿವೆ.

ಮದ್ಯದ ಮೇಲೆ ಅತಿ ಕಡಿಮೆ ಅಬಕಾರಿ ಸುಂಕವನ್ನು ಹೇರುವ ರಾಜ್ಯ ಜಾರ್ಖಂಡ್ (67%) ಮತ್ತು ಅತಿ ಹೆಚ್ಚು ಗೋವಾ (722%). 2014 15ನೇ ಹಣಕಾಸು ವರ್ಷದಲ್ಲಿ ತೆಲಂಗಾಣದ ತಲಾವಾರು ವೆಚ್ಚವು ಆಲ್ಕೊಹಾಲ್ಯುಕ್ತ ಪಾನೀಯಗಳ ಮೇಲೆ 745 ರೂ. ಆದರೆ, 2022-23ರಲ್ಲಿ 1,623 ರೂ. 2014-15ರಲ್ಲಿ ಕೇರಳದಲ್ಲಿ ಮದ್ಯಕ್ಕೆ 1020 ರೂಪಾಯಿ ಖರ್ಚು ಮಾಡಿದ್ದು, 2022-23ರಲ್ಲಿ 379 ರೂಪಾಯಿಗೆ ಇಳಿಕೆಯಾಗಿದೆ ಎಂಬುದು ಗಮನಿಸಬೇಕಾದ ಸಂಗತಿ.

ಅಬಕಾರಿ ಸುಂಕ ಸಂಗ್ರಹದಲ್ಲಿ ತೆಲಂಗಾಣವೂ ಮುಂದಿದೆ. ಎಲ್ಲಾ ರಾಜ್ಯಗಳು ಆಲ್ಕೊಹಾಲ್ಯುಕ್ತ ಪಾನೀಯಗಳ ಮೇಲೆ ರಾಜ್ಯ ಅಬಕಾರಿ ಮತ್ತು ಮಾರಾಟ ತೆರಿಗೆಯನ್ನು ಹೊಂದಿವೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ, ಒಟ್ಟು ತೆರಿಗೆ ಸಂಗ್ರಹದ ಶೇ.78 ಕ್ಕಿಂತ ಹೆಚ್ಚು ಮಾರಾಟ ತೆರಿಗೆ ಅಥವಾ ಹೆಚ್ಚುವರಿ ಅಬಕಾರಿ ಸುಂಕದಿಂದ ಬರುತ್ತದೆ, ಆದರೆ ಅಸ್ಸಾಂ, ಮಹಾರಾಷ್ಟ್ರ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳಕ್ಕೆ, ಸಂಯೋಜಿತ ತೆರಿಗೆ ಸಂಗ್ರಹದಲ್ಲಿ ಮಾರಾಟ ತೆರಿಗೆಯ ಸರಾಸರಿ ಪಾಲು ಇದೆ.

2014-15ನೇ ಸಾಲಿನಲ್ಲಿ ಯಾವ ರಾಜ್ಯದಲ್ಲಿ ಮದ್ಯ ಖರೀದಿ ಪ್ರಮಾಣ ಹೆಚ್ಚಿತ್ತೋ ಆ ಭಾಗಗಳಲ್ಲಿ 2022-23ನೇ ಸಾಲಿನಲ್ಲಿ ಕಡಿಮೆಯಾಗಿದೆ. ಹಾಗೆಯೇ ಯಾವ ಭಾಗದಲ್ಲಿ ಮದ್ಯ ಖರೀದಿ ಪ್ರಮಾಣ ಕಡಿಮೆ ಇತ್ತೋ ಅದೀಗ ಹೆಚ್ಚಾಗಿರುವುದು ಗಮನಾರ್ಹ ಸಂಗತಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Tue, 3 September 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!