Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?

ವಿವರಗಳಿಗೆ ಹೋಗುವುದಾದರೆ.. ಸುಮಾರು 199 ಪುರಾತನ ಚಿನ್ನದ ನಾಣ್ಯಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವಸಾರಿ ಜಿಲ್ಲೆಯ ಬಿಲಿಮೋರಾದಲ್ಲಿ ಈ ಘಟನೆ ನಡೆದಿದೆ.

ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?
ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?
Follow us
ಸಾಧು ಶ್ರೀನಾಥ್​
|

Updated on:Jan 02, 2024 | 2:57 PM

ಅನಿವಾಸಿ ಭಾರತೀಯರೊಬ್ಬರು ತಮ್ಮ ಪುರಾತನ ಕಟ್ಟಡವನ್ನು ಕೆಡವಲು ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಅದರ ಭಾಗವಾಗಿ ಗುತ್ತಿಗೆದಾರರು ಕೆಲ ಕಾರ್ಮಿಕರನ್ನು ಕರೆದುಕೊಂಡು ಆ ಸ್ಥಳಕ್ಕೆ ತೆರಳಿ ಕಟ್ಟಡವನ್ನು ಕೆಡವ ಕಾರ್ಯಕ್ಕೆ ಚಾಲನೆ ನೀಡಿದರು. ಆ ಕೆಲಸಗಳು ನಡೆಯುತ್ತಿರುವಾಗ, ಅನಿರೀಕ್ಷಿತವಾಗಿ ಇದ್ದಕ್ಕಿದ್ದಂತೆ ಒಂದು ದೃಶ್ಯ ಕಾಣಿಸಿಕೊಂಡಿತು. ಕಾರ್ಮಿಕರು ತಮ್ಮ ಕಣ್ಣುಗಳನ್ನು ತಾವೇ ನಂಬದಾದರು. ಅಲ್ಲಿರುವುದೇನೆಂದು ನೋಡಲು ಸುತ್ತಲೂ ಮಣ್ಣು ಅಗೆದರು. ಆಗ ಸಿಕ್ಕಿತು ನೋಡಿ…

ವಿವರಗಳಿಗೆ ಹೋಗುವುದಾದರೆ.. ಸುಮಾರು 199 ಪುರಾತನ ಚಿನ್ನದ ನಾಣ್ಯಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವಸಾರಿ ಜಿಲ್ಲೆಯ ಬಿಲಿಮೋರಾದಲ್ಲಿ ಈ ಘಟನೆ ನಡೆದಿದೆ. ಬ್ರಿಟನ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹವಾಬೀನ್ ಬಾಲಿಯಾ ಅವರು ಬಜಾರ್ ಸ್ಟ್ರೀಟ್‌ನಲ್ಲಿರುವ ತಮ್ಮ ಹಳೆಯ ಕಟ್ಟಡವನ್ನು ಕೆಡವಲು ಸರ್ಫ್ರಾಜ್ ಕರಾಡಿಯಾ ಎಂಬ ಗುತ್ತಿಗೆದಾರರಿಗೆ ವಹಿಸಿದ್ದರು. ಈ ಕಾರ್ಯಕ್ಕಾಗಿ ಅವರು ಮಧ್ಯಪ್ರದೇಶದ ನಾಲ್ವರು ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಮನೆ ಕೆಡವುತ್ತಿರುವಾಗ ಆ ಕಾರ್ಮಿಕರಿಗೆಲ್ಲಾ 1922ರ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ದೊರೆತಿವೆ.

Also Read:  ಮನೆ ಬುನಾದಿಯಲ್ಲಿ ಸಿಕ್ಕ ಚಿನ್ನ ಎಂದು ಉಡುಪಿ ಮೂಲಕದ ವ್ಯಕ್ತಿಗೆ 5 ಲಕ್ಷ ರೂ. ಪಂಗನಾಮ

ಸುಮಾರು 199 ಪುರಾತನ ಚಿನ್ನದ ನಾಣ್ಯಗಳು ಪತ್ತೆಯಾಗಿವೆ.. ಅವುಗಳ ಮೇಲೆ ಕಿಂಗ್ ಜಾರ್ಜ್-5 ಆಕೃತಿಯನ್ನು ಮುದ್ರಿಸಲಾಗಿತ್ತು. ಮಾಲೀಕರಿಗೆ ತಿಳಿಯದಂತೆ ಗುತ್ತಿಗೆದಾರ ಹಾಗೂ ನಾಲ್ವರು ಕಾರ್ಮಿಕರು ಈ ಚಿನ್ನದ ನಾಣ್ಯಗಳನ್ನು ಕದ್ದೊಯ್ದಿದ್ದಾರೆ. ಅವುಗಳ ಮೌಲ್ಯ ಸುಮಾರು 92 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್ 21 ರಂದು ಬಾಲಿಯಾ ಈ ವಿಷಯದ ಬಗ್ಗೆ ದೂರು ನೀಡಿದ್ದರು. ಪೊಲೀಸರು ಆರೋಪಿಗಳನ್ನು ಇತ್ತೀಚೆಗೆ ಬಂಧಿಸಿದ್ದಾರೆ. ಅಲ್ಲದೆ, ತನಿಖೆಯ ವೇಳೆ ಮಧ್ಯಪ್ರದೇಶದ ನಾಲ್ವರು ಪೊಲೀಸರು ತಮ್ಮಿಂದ ಕೆಲವು ನಾಣ್ಯಗಳನ್ನು ತೆಗೆದುಕೊಂಡಿದ್ದಾರೆ ಎಂದೂ ಕಾರ್ಮಿಕರೊಬ್ಬರು ದೂರಿದಾಗ, ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 2 January 24

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ