AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?

ವಿವರಗಳಿಗೆ ಹೋಗುವುದಾದರೆ.. ಸುಮಾರು 199 ಪುರಾತನ ಚಿನ್ನದ ನಾಣ್ಯಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವಸಾರಿ ಜಿಲ್ಲೆಯ ಬಿಲಿಮೋರಾದಲ್ಲಿ ಈ ಘಟನೆ ನಡೆದಿದೆ.

ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?
ಗುಜರಾತಿನಲ್ಲಿ ಪುರಾತನ ಕಟ್ಟಡ ಕೆಡವಿದಾಗ ಏನು ಸಿಕ್ಕಿತು ಗೊತ್ತಾ!?
ಸಾಧು ಶ್ರೀನಾಥ್​
|

Updated on:Jan 02, 2024 | 2:57 PM

Share

ಅನಿವಾಸಿ ಭಾರತೀಯರೊಬ್ಬರು ತಮ್ಮ ಪುರಾತನ ಕಟ್ಟಡವನ್ನು ಕೆಡವಲು ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಅದರ ಭಾಗವಾಗಿ ಗುತ್ತಿಗೆದಾರರು ಕೆಲ ಕಾರ್ಮಿಕರನ್ನು ಕರೆದುಕೊಂಡು ಆ ಸ್ಥಳಕ್ಕೆ ತೆರಳಿ ಕಟ್ಟಡವನ್ನು ಕೆಡವ ಕಾರ್ಯಕ್ಕೆ ಚಾಲನೆ ನೀಡಿದರು. ಆ ಕೆಲಸಗಳು ನಡೆಯುತ್ತಿರುವಾಗ, ಅನಿರೀಕ್ಷಿತವಾಗಿ ಇದ್ದಕ್ಕಿದ್ದಂತೆ ಒಂದು ದೃಶ್ಯ ಕಾಣಿಸಿಕೊಂಡಿತು. ಕಾರ್ಮಿಕರು ತಮ್ಮ ಕಣ್ಣುಗಳನ್ನು ತಾವೇ ನಂಬದಾದರು. ಅಲ್ಲಿರುವುದೇನೆಂದು ನೋಡಲು ಸುತ್ತಲೂ ಮಣ್ಣು ಅಗೆದರು. ಆಗ ಸಿಕ್ಕಿತು ನೋಡಿ…

ವಿವರಗಳಿಗೆ ಹೋಗುವುದಾದರೆ.. ಸುಮಾರು 199 ಪುರಾತನ ಚಿನ್ನದ ನಾಣ್ಯಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವಸಾರಿ ಜಿಲ್ಲೆಯ ಬಿಲಿಮೋರಾದಲ್ಲಿ ಈ ಘಟನೆ ನಡೆದಿದೆ. ಬ್ರಿಟನ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹವಾಬೀನ್ ಬಾಲಿಯಾ ಅವರು ಬಜಾರ್ ಸ್ಟ್ರೀಟ್‌ನಲ್ಲಿರುವ ತಮ್ಮ ಹಳೆಯ ಕಟ್ಟಡವನ್ನು ಕೆಡವಲು ಸರ್ಫ್ರಾಜ್ ಕರಾಡಿಯಾ ಎಂಬ ಗುತ್ತಿಗೆದಾರರಿಗೆ ವಹಿಸಿದ್ದರು. ಈ ಕಾರ್ಯಕ್ಕಾಗಿ ಅವರು ಮಧ್ಯಪ್ರದೇಶದ ನಾಲ್ವರು ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಮನೆ ಕೆಡವುತ್ತಿರುವಾಗ ಆ ಕಾರ್ಮಿಕರಿಗೆಲ್ಲಾ 1922ರ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ದೊರೆತಿವೆ.

Also Read:  ಮನೆ ಬುನಾದಿಯಲ್ಲಿ ಸಿಕ್ಕ ಚಿನ್ನ ಎಂದು ಉಡುಪಿ ಮೂಲಕದ ವ್ಯಕ್ತಿಗೆ 5 ಲಕ್ಷ ರೂ. ಪಂಗನಾಮ

ಸುಮಾರು 199 ಪುರಾತನ ಚಿನ್ನದ ನಾಣ್ಯಗಳು ಪತ್ತೆಯಾಗಿವೆ.. ಅವುಗಳ ಮೇಲೆ ಕಿಂಗ್ ಜಾರ್ಜ್-5 ಆಕೃತಿಯನ್ನು ಮುದ್ರಿಸಲಾಗಿತ್ತು. ಮಾಲೀಕರಿಗೆ ತಿಳಿಯದಂತೆ ಗುತ್ತಿಗೆದಾರ ಹಾಗೂ ನಾಲ್ವರು ಕಾರ್ಮಿಕರು ಈ ಚಿನ್ನದ ನಾಣ್ಯಗಳನ್ನು ಕದ್ದೊಯ್ದಿದ್ದಾರೆ. ಅವುಗಳ ಮೌಲ್ಯ ಸುಮಾರು 92 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್ 21 ರಂದು ಬಾಲಿಯಾ ಈ ವಿಷಯದ ಬಗ್ಗೆ ದೂರು ನೀಡಿದ್ದರು. ಪೊಲೀಸರು ಆರೋಪಿಗಳನ್ನು ಇತ್ತೀಚೆಗೆ ಬಂಧಿಸಿದ್ದಾರೆ. ಅಲ್ಲದೆ, ತನಿಖೆಯ ವೇಳೆ ಮಧ್ಯಪ್ರದೇಶದ ನಾಲ್ವರು ಪೊಲೀಸರು ತಮ್ಮಿಂದ ಕೆಲವು ನಾಣ್ಯಗಳನ್ನು ತೆಗೆದುಕೊಂಡಿದ್ದಾರೆ ಎಂದೂ ಕಾರ್ಮಿಕರೊಬ್ಬರು ದೂರಿದಾಗ, ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 2 January 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ