AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರು ಕೇವಲ ಕೊರೊನಾದಿಂದ ಸಾಯುತ್ತಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್

ಬಹುಮುಖ್ಯವಾಗಿ ಭಾರತದಲ್ಲಿ ಸಾಯುತ್ತಿರುವವರೆಲ್ಲರೂ ಕೊರೊನಾದಿಂದಲೇ ಮೃತಪಡುತ್ತಿದ್ದಾರೆ ಎಂದು ಹೇಳಲಾಗದು. ಹಲವರಿಗೆ ಸೂಕ್ತ ಸಮಯಕ್ಕೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಸಿಗದ ಕಾರಣ ಸಾವು ಸಂಭವಿಸುತ್ತಿದೆ. ಈ ಕಾರಣ ಹಾಗೂ ಕೊವಿಡ್ ಎರಡೂ ಸೇರಿದಾಗ ಸಹಜವಾಗಿಯೇ ಮರಣ ಪ್ರಮಾಣ ಹೆಚ್ಚುತ್ತದೆ.

ಭಾರತೀಯರು ಕೇವಲ ಕೊರೊನಾದಿಂದ ಸಾಯುತ್ತಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್
ಸೌಮ್ಯಾ ಸ್ವಾಮಿನಾಥನ್
Skanda
|

Updated on: May 11, 2021 | 2:36 PM

Share

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ಕಾರಣವಾಗಿರುವ ಕೊವಿಡ್​ 19 ರೂಪಾಂತರಿ ವೈರಾಣು B.1.617 ಮಾದರಿ ಆರೋಗ್ಯ ಕ್ಷೇತ್ರದ ಮೇಲೆ ಊಹೆಗೂ ನಿಲುಕದ ಮಟ್ಟಿಗೆ ಹೊಡೆತ ನೀಡಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದ್ದು, ಭಾರತದ ಪ್ರಸ್ತುತ ಸ್ಥಿತಿಗತಿಯ ಕುರಿತು ಹಲವು ತಜ್ಞರು ಕಳವಳವನ್ನೂ ವ್ಯಕ್ತಪಡಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಭಾರತದ ರೂಪಾಂತರಿ ಕೊರೊನಾ ವೈರಾಣುವನ್ನು ಚಿಂತೆಗೀಡುಮಾಡುವ ತಳಿ ಎಂದು ಕರೆಯುವ ಮೂಲಕ ಇದರ ಗಂಭೀರತೆ ಎಷ್ಟಿದೆ ಎನ್ನುವುದನ್ನು ಸಾರಿದೆ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಮುಖ್ಯ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸೌಮ್ಯಾ ಸ್ವಾಮಿನಾಥನ್ ಎಂಬುವವರು ಸಹ ದೇಶ ಎದುರಿಸುತ್ತಿರುವ ಸನ್ನಿವೇಶದ ಬಗ್ಗೆ ಮಾತನಾಡಿದ್ದು, ಭಾರತೀಯರು ಕೇವಲ ಕೊರೊನಾದಿಂದಷ್ಟೇ ಸಾಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಕಂಡುಬರುತ್ತಿರುವ ಪ್ರಕರಣಗಳ ಪ್ರಮಾಣ ಆಘಾತಕಾರಿಯಾಗಿದೆ. ವಿಶ್ವದ ಇತರ ದೇಶಗಳೂ ಇದೇ ತೆರನಾದ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗುತ್ತಿವೆ. ಇನ್ನೊಂದು ಸಂಗತಿ ಎಂದರೆ ಇದರಲ್ಲಿ ಬೆಳಕಿಗೆ ಬಾರದ ಪ್ರಕರಣಗಳೂ ಹಲವು ಇರಬಹುದು. ಹೀಗೆ ದಾಖಲೆಗೆ ಸಿಗದ ಪ್ರಕರಣಗಳನ್ನು ಪತ್ತೆ ಹಚ್ಚಲು ಯಾವುದಾದರೂ ನಿರ್ದಿಷ್ಟ ಕ್ರಮ ಕೈಗೊಳ್ಳಲು ಯೋಜನೆಯನ್ನು ರೂಪಿಸುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದ್ದಾರೆ.

ಬಹುಮುಖ್ಯವಾಗಿ ಭಾರತದಲ್ಲಿ ಸಾಯುತ್ತಿರುವವರೆಲ್ಲರೂ ಕೊರೊನಾದಿಂದಲೇ ಮೃತಪಡುತ್ತಿದ್ದಾರೆ ಎಂದು ಹೇಳಲಾಗದು. ಹಲವರಿಗೆ ಸೂಕ್ತ ಸಮಯಕ್ಕೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಸಿಗದ ಕಾರಣ ಸಾವು ಸಂಭವಿಸುತ್ತಿದೆ. ಈ ಕಾರಣ ಹಾಗೂ ಕೊವಿಡ್ ಎರಡೂ ಸೇರಿದಾಗ ಸಹಜವಾಗಿಯೇ ಮರಣ ಪ್ರಮಾಣ ಹೆಚ್ಚುತ್ತದೆ. ಸದ್ಯ ಕೊರೊನಾವನ್ನು ಮಣಿಸಬೇಕೆಂದರೆ ಸೋಂಕು ಹಬ್ಬುವಿಕೆಯನ್ನು ತಡೆಗಟ್ಟಬೇಕು. ಇದೀಗ ಕೊರೊನಾ ಲಸಿಕೆಯ ಬಗ್ಗೆ ಭರವಸೆ ಮೂಡಿದೆ. ಹೀಗಾಗಿ ಪೇಟೆಂಟ್ ಅಥವಾ ಲಾಭದ ಬಗ್ಗೆ ಯೋಚನೆ ಮಾಡದೇ ವಿಶ್ವದೆಲ್ಲೆಡೆ ಕೊರೊನಾ ಲಸಿಕೆ ಸಿಗುವಂತೆ ಮಾಡುವತ್ತ ಹೆಜ್ಜೆ ಹಾಕಬೇಕು. ವಿಶ್ವ ಆರೋಗ್ಯ ಸಂಸ್ಥೆಯೂ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲಿದೆ ಎಂದಿದ್ದಾರೆ.

ಜತೆಗೆ, ಲಸಿಕೆ ತೆಗೆದುಕೊಂಡ ಮಾತ್ರಕ್ಕೆ ಕೊರೊನಾದಿಂದ ಬರುವುದಿಲ್ಲ ಎಂಬ ಹುಂಬತನ ಬೇಡ ಎಂಬ ಎಚ್ಚರಿಕೆ ನೀಡಿರುವ ಅವರು, ಲಸಿಕೆ ನಮ್ಮನ್ನು ರಕ್ಷಿಸುವುದಕ್ಕೆ ಪ್ರಯತ್ನಿಸುತ್ತದೆ. ಅದಕ್ಕೆ ಪೂರಕವಾಗಿ ನಾವು ಸಹ ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಎಂದು ತಿಳಿಸಿದ್ದಾರೆ. ಈಗಿನ ಅಧ್ಯಯನದ ಪ್ರಕಾರ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಸಾಬೀತಾಗಿದೆ. ದಯವಿಟ್ಟು ಅರ್ಹರೆಲ್ಲರೂ ಆದಷ್ಟು ಬೇಗ ಹೋಗಿ ಲಸಿಕೆ ಪಡೆಯಿರಿ ಎಂದಿದ್ದಾರೆ.

(WHO Chief Scientist Soumya Swaminathan says People in India are not only dying of Covid but also from Lack of Health facilities)

ಇದನ್ನೂ ಓದಿ: ಭಾರತದ ರೂಪಾಂತರಿ ಕೊರೊನಾ ಚಿಂತೆಗೀಡುಮಾಡುವ ತಳಿ ಎಂದ ವಿಶ್ವ ಆರೋಗ್ಯ ಸಂಸ್ಥೆ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ