AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ

ಜನರು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಗಳನ್ನು ಡಾ. ಸೌಮ್ಯಾ ಸ್ವಾಮಿನಾಥನ್ ಪಟ್ಟಿ ಮಾಡಿದ್ದಾರೆ. ವಯಸ್ಸಾದವರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಾಸ್ಕ್ ಹಾಕಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ
ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್Image Credit source: AFP
ಗಣಪತಿ ಶರ್ಮಾ
|

Updated on:Dec 21, 2023 | 9:45 AM

Share

ನವದೆಹಲಿ, ಡಿಸೆಂಬರ್ 21: ಕೊರೊನಾ ವೈರಸ್​​ನ (Coronavirus) ಒಮಿಕ್ರಾನ್ ಉಪತಳಿ ಜೆಎನ್​​1 (JN.1) ಪರಿಣಾಮ ದೇಶದಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುವ ಆತಂಕದ ನಡುವೆಯೇ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಳವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾಜಿ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ (Soumya Swaminathan) ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆಲ್ಲ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಕೋವಿಡ್ ಸೋಂಕನ್ನು ಸಾಮಾನ್ಯ ಶೀತ ಎಂದು ನಿರ್ಲಕ್ಷ್ಯ ವಹಿಸದಂತೆ ಡಾ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ ನೀಡಿದ್ದಾರೆ. ಕೋವಿಡ್​​ನಿಂದ ಹೆಚ್ಚು ಪ್ರಮಾಣದ ಸಾವು ಸಂಭವಿಸುವುದಿಲ್ಲ, ಹೆಚ್ಚಿನವರಲ್ಲಿ ತೀವ್ರ ಅನಾರೋಗ್ಯ ಉಂಟಾಗದು ಎಂದ ಮಾತ್ರಕ್ಕೆ ಅದರ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ. ಕೋವಿಡ್​ನಿಂದ ಹೃದಯಾಘಾತ, ಪಾರ್ಶ್ವವಾಯು ಮತ್ತು ಮಾನಸಿಕ ಆರೋಗ್ಯ ಸಮಸ್ಯೆ ಅಪಾಯವೂ ಒಳಗೊಂಡಂತೆ ದೀರ್ಘಕಾಲೀನ ಅನೇಕ ಪರಿಣಾಮಗಳು ಇವೆ ಎಂದು ಅವರು ‘ಎನ್​ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಜನರು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಗಳನ್ನು ಡಾ. ಸೌಮ್ಯಾ ಸ್ವಾಮಿನಾಥನ್ ಪಟ್ಟಿ ಮಾಡಿದ್ದಾರೆ. ವಯಸ್ಸಾದವರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಾಸ್ಕ್ ಹಾಕಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಕೇರಳದ ಕೊಚ್ಚಿ ಪ್ರದೇಶದಲ್ಲಿ ಸುಮಾರು 24 ಗಂಟೆಗಳ ಅವಧಿಯಲ್ಲಿ ಇನ್​ಫ್ಲುಯೆಂಜಾ ತರದ ಕಾಯಿಲೆಗಳನ್ನು ಹೊಂದಿರುವ ರೋಗಿಗಳಲ್ಲಿ ಶೇ 30 ರಷ್ಟು ಜನರು ಕೋವಿಡ್ ಪಾಸಿಟಿವ್ ಎಂಬುದು ತಿಳಿದುಬಂದಿದೆ. ಕೋವಿಡ್ ಪ್ರಕರಣಗಳು ಸಮುದಾಯಕ್ಕೆ ಹರಡಿವೆ ಮತ್ತು ಅವರ ನೆರೆಹೊರೆಯವರಲ್ಲಿ ಸಹ ಪಾಸಿಟಿವ್ ಬಂದಿದೆ ಎಂದು ನ್ಯಾಷನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕೋವಿಡ್ ಟಾಸ್ಕ್ ಫೋರ್ಸ್​ನ ಅಧ್ಯಕ್ಷ ಡಾ. ರಾಜೀವ್ ಜಯದೇವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಪೋಷಕರಲ್ಲಿ ಕೊರೊನಾ ಆತಂಕ, ಖಾಸಗಿ ಶಾಲೆಗಳು ಹೈ ಅಲರ್ಟ್; ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಈ ಮಧ್ಯೆ, ಕರ್ನಾಟಕದಲ್ಲಿ ಸಹ ಕೋವಿಡ್ ಹರಡುವಿಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಒಂದೇ ವಾರ ಕೊವಿಡ್​ನಿಂದಾಗಿ ಮೂವರು ಮೃತಪಟ್ಟಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 21 December 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ