AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ

ಜನರು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಗಳನ್ನು ಡಾ. ಸೌಮ್ಯಾ ಸ್ವಾಮಿನಾಥನ್ ಪಟ್ಟಿ ಮಾಡಿದ್ದಾರೆ. ವಯಸ್ಸಾದವರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಾಸ್ಕ್ ಹಾಕಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ
ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್Image Credit source: AFP
Follow us
Ganapathi Sharma
|

Updated on:Dec 21, 2023 | 9:45 AM

ನವದೆಹಲಿ, ಡಿಸೆಂಬರ್ 21: ಕೊರೊನಾ ವೈರಸ್​​ನ (Coronavirus) ಒಮಿಕ್ರಾನ್ ಉಪತಳಿ ಜೆಎನ್​​1 (JN.1) ಪರಿಣಾಮ ದೇಶದಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುವ ಆತಂಕದ ನಡುವೆಯೇ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಳವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾಜಿ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ (Soumya Swaminathan) ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆಲ್ಲ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಕೋವಿಡ್ ಸೋಂಕನ್ನು ಸಾಮಾನ್ಯ ಶೀತ ಎಂದು ನಿರ್ಲಕ್ಷ್ಯ ವಹಿಸದಂತೆ ಡಾ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ ನೀಡಿದ್ದಾರೆ. ಕೋವಿಡ್​​ನಿಂದ ಹೆಚ್ಚು ಪ್ರಮಾಣದ ಸಾವು ಸಂಭವಿಸುವುದಿಲ್ಲ, ಹೆಚ್ಚಿನವರಲ್ಲಿ ತೀವ್ರ ಅನಾರೋಗ್ಯ ಉಂಟಾಗದು ಎಂದ ಮಾತ್ರಕ್ಕೆ ಅದರ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ. ಕೋವಿಡ್​ನಿಂದ ಹೃದಯಾಘಾತ, ಪಾರ್ಶ್ವವಾಯು ಮತ್ತು ಮಾನಸಿಕ ಆರೋಗ್ಯ ಸಮಸ್ಯೆ ಅಪಾಯವೂ ಒಳಗೊಂಡಂತೆ ದೀರ್ಘಕಾಲೀನ ಅನೇಕ ಪರಿಣಾಮಗಳು ಇವೆ ಎಂದು ಅವರು ‘ಎನ್​ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಜನರು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಗಳನ್ನು ಡಾ. ಸೌಮ್ಯಾ ಸ್ವಾಮಿನಾಥನ್ ಪಟ್ಟಿ ಮಾಡಿದ್ದಾರೆ. ವಯಸ್ಸಾದವರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಾಸ್ಕ್ ಹಾಕಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಕೇರಳದ ಕೊಚ್ಚಿ ಪ್ರದೇಶದಲ್ಲಿ ಸುಮಾರು 24 ಗಂಟೆಗಳ ಅವಧಿಯಲ್ಲಿ ಇನ್​ಫ್ಲುಯೆಂಜಾ ತರದ ಕಾಯಿಲೆಗಳನ್ನು ಹೊಂದಿರುವ ರೋಗಿಗಳಲ್ಲಿ ಶೇ 30 ರಷ್ಟು ಜನರು ಕೋವಿಡ್ ಪಾಸಿಟಿವ್ ಎಂಬುದು ತಿಳಿದುಬಂದಿದೆ. ಕೋವಿಡ್ ಪ್ರಕರಣಗಳು ಸಮುದಾಯಕ್ಕೆ ಹರಡಿವೆ ಮತ್ತು ಅವರ ನೆರೆಹೊರೆಯವರಲ್ಲಿ ಸಹ ಪಾಸಿಟಿವ್ ಬಂದಿದೆ ಎಂದು ನ್ಯಾಷನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕೋವಿಡ್ ಟಾಸ್ಕ್ ಫೋರ್ಸ್​ನ ಅಧ್ಯಕ್ಷ ಡಾ. ರಾಜೀವ್ ಜಯದೇವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಪೋಷಕರಲ್ಲಿ ಕೊರೊನಾ ಆತಂಕ, ಖಾಸಗಿ ಶಾಲೆಗಳು ಹೈ ಅಲರ್ಟ್; ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಈ ಮಧ್ಯೆ, ಕರ್ನಾಟಕದಲ್ಲಿ ಸಹ ಕೋವಿಡ್ ಹರಡುವಿಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಒಂದೇ ವಾರ ಕೊವಿಡ್​ನಿಂದಾಗಿ ಮೂವರು ಮೃತಪಟ್ಟಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 21 December 23

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್