AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?

Charanjit Singh Channi: ಹಲವು ರಾಜಕೀಯ ಲೆಕ್ಕಾಚಾರಗಳ ಬಳಿಕ ಇದೀಗ ಕಾಂಗ್ರೆಸ್  ದಲಿತ ನಾಯಕ ಚರಣ್​ಜಿತ್ ಸಿಂಗ್ ಛನ್ನಿ ಅವರನ್ನು ಪಂಜಾಬ್​ನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?
ಚರಣ್​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on:Sep 19, 2021 | 7:39 PM

Share

ದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಆಮೇಲಿನ, ಹಲವು ರಾಜಕೀಯ ಲೆಕ್ಕಾಚಾರಗಳ ಬಳಿಕ ಇದೀಗ ಕಾಂಗ್ರೆಸ್  ದಲಿತ ನಾಯಕ ಚರಣ್​ಜಿತ್ ಸಿಂಗ್ ಛನ್ನಿ ಅವರನ್ನು ಪಂಜಾಬ್​ನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಚರಣ್​ಜಿತ್ ಸಿಂಗ್ ಛನ್ನಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಳಿಕ ಪಂಜಾಬ್​ನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿದ್ದಾರೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ರಂಧಾವಾ ಅವರ ಹೆಸರು ಮುಂಚೂಣಿಯಲ್ಲಿತ್ತು. ಸಿಧು ಬಣದಲ್ಲಿ ಗುರುತಿಸಿಕೊಂಡಿದ್ದ ಸುಖ್ಜಿಂದರ್‌ ರಂಧಾವಾ ಬದಲು ದಲಿತ ನಾಯಕ ಚರಣ್​ಜಿತ್​ ಸಿಂಗ್​ಗೆ ಕಾಂಗ್ರೆಸ್​ ಹೈಕಮಾಂಡ್ ಅವಕಾಶ ಕಲ್ಪಿಸಿದೆ. ಕೆಲವೇ ಕ್ಷಣಗಳಲ್ಲಿ ಚರಣ್​ಜಿತ್ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

ಚರಣ್​ಜಿತ್ ಸಿಂಗ್ ಛನ್ನಿ ಯಾರು?

  • 48 ವರ್ಷ ವಯಸ್ಸಿನ ಚರಣ್​ಜಿತ್ ಸಿಂಗ್ ಛನ್ನಿ, ಚಾಮ್​ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಗಿದ್ದಾರೆ
  • ಛನ್ನಿ, ದಲಿತ ಸಮುದಾಯಕ್ಕೆ ಸೇರಿದವರು. ದಲಿತ ಸಮುದಾಯದ ಜನಸಂಖ್ಯೆ ಪಂಜಾಬ್​ನಲ್ಲಿ ಒಟ್ಟು ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಇದೆ
  • ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದ ಛನ್ನಿ, ಪಂಜಾಬ್​ ಕಾಂಗ್ರೆಸ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿ ಸಚಿವರಾಗಿದ್ದರು
  • ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಧ್ವನಿ ಎತ್ತಿದ್ದ ಪಂಜಾಬ್ ಕಾಂಗ್ರೆಸ್ ನಾಯಕರಲ್ಲಿ ಚರಣ್​ಜಿತ್ ಸಿಂಗ್ ಛನ್ನಿ ಕೂಡ ಒಬ್ಬರಾಗಿದ್ದಾರೆ
  • ಛನ್ನಿ, ಮೂರು ಬಾರಿ ಮುನ್ಸಿಪಾಲ್ ಕೌನ್ಸೆಲರ್ ಆಗಿ ಕಾರ್ಯನಿರ್ವಹಿಸಿದ್ದರು. ಖರಾರ್​ ಎಂಬಲ್ಲಿ ಮುನ್ಸಿಪಾಲಿಟಿ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದರು. ಆ ಬಳಿಕ, 2007 ರಲ್ಲಿ ಮೊದಲ ಬಾರಿಗೆ ಅವರು ಪಂಜಾಬ್ ವಿಧಾನಸಭೆಗೆ ಆಯ್ಕೆ ಆಗಿದ್ದರು
  • ಛನ್ನಿ ತಮ್ಮ ಬಾಲ್ಯದ ದಿನಗಳನ್ನು ಬಡತನದಲ್ಲಿ ಕಳೆದಿದ್ದರು. ಆ ಬಳಿಕ, ಪಂಜಾಬ್​ನ ಖರಾರ್ ಎಂಬಲ್ಲಿ ಅವರು ಟೆಂಟ್ ಹೌಸ್ ಉದ್ಯಮ ಆರಂಭಿಸಿದ್ದರು. ಅಲ್ಲಿ ಅವರು ಟೆಂಟ್ ಬಾಯ್ ಆಗಿಯೂ ಕೆಲಸ ಮಾಡಿದ್ದರು
  • ಚರಣ್​ಜಿತ್ ಸಿಂಗ್ ಛನ್ನಿ ಗಾಂಧಿ ಕುಟುಂಬಕ್ಕೆ ಆಪ್ತರು ಎಂದು ಹೇಳಲಾಗಿದೆ. ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನವಜೋತ್ ಸಿಂಗ್ ಸಿಧು ಮತ್ತು ಸುಖ್​ಜಿಂದರ್ ಸಿಂಗ್ ರಂಧಾವಾ ಹೆಸರು ಕೇಳಿಬಂದಿತ್ತು. ಸುನಿಲ್ ಜಾಖರ್ ಮತ್ತು ಪ್ರತಾಪ್ ಸಿಂಗ್ ಬಜ್ವಾ ಹೆಸರು ಕೂಡ ಸುಳಿದಾಡಿತ್ತು. ಬಳಿಕ, ಭಾನುವಾರ ಬೆಳಗ್ಗೆ ಅಂಬಿಕಾ ಸೋನಿ ಹೆಸರು ಕೂಡ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಚರಣ್​ಜಿತ್ ಸಿಂಗ್ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ

ಇದನ್ನೂ ಓದಿ: Punjab CM: ಚರಣ್‌ಜಿತ್ ಸಿಂಗ್ ಛನ್ನಿ ಪಂಜಾಬ್‌ನ ನೂತನ ಮುಖ್ಯಮಂತ್ರಿ

ಇದನ್ನೂ ಓದಿ: Punjab Politics ಸಿಖ್ ನಾಯಕರೇ ಪಂಜಾಬ್ ಸಿಎಂ ಆಗಬೇಕು; ಮುಖ್ಯಮಂತ್ರಿ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ

Published On - 7:28 pm, Sun, 19 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್