AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?

Charanjit Singh Channi: ಹಲವು ರಾಜಕೀಯ ಲೆಕ್ಕಾಚಾರಗಳ ಬಳಿಕ ಇದೀಗ ಕಾಂಗ್ರೆಸ್  ದಲಿತ ನಾಯಕ ಚರಣ್​ಜಿತ್ ಸಿಂಗ್ ಛನ್ನಿ ಅವರನ್ನು ಪಂಜಾಬ್​ನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?
ಚರಣ್​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on:Sep 19, 2021 | 7:39 PM

Share

ದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಆಮೇಲಿನ, ಹಲವು ರಾಜಕೀಯ ಲೆಕ್ಕಾಚಾರಗಳ ಬಳಿಕ ಇದೀಗ ಕಾಂಗ್ರೆಸ್  ದಲಿತ ನಾಯಕ ಚರಣ್​ಜಿತ್ ಸಿಂಗ್ ಛನ್ನಿ ಅವರನ್ನು ಪಂಜಾಬ್​ನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಚರಣ್​ಜಿತ್ ಸಿಂಗ್ ಛನ್ನಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಳಿಕ ಪಂಜಾಬ್​ನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿದ್ದಾರೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ರಂಧಾವಾ ಅವರ ಹೆಸರು ಮುಂಚೂಣಿಯಲ್ಲಿತ್ತು. ಸಿಧು ಬಣದಲ್ಲಿ ಗುರುತಿಸಿಕೊಂಡಿದ್ದ ಸುಖ್ಜಿಂದರ್‌ ರಂಧಾವಾ ಬದಲು ದಲಿತ ನಾಯಕ ಚರಣ್​ಜಿತ್​ ಸಿಂಗ್​ಗೆ ಕಾಂಗ್ರೆಸ್​ ಹೈಕಮಾಂಡ್ ಅವಕಾಶ ಕಲ್ಪಿಸಿದೆ. ಕೆಲವೇ ಕ್ಷಣಗಳಲ್ಲಿ ಚರಣ್​ಜಿತ್ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

ಚರಣ್​ಜಿತ್ ಸಿಂಗ್ ಛನ್ನಿ ಯಾರು?

  • 48 ವರ್ಷ ವಯಸ್ಸಿನ ಚರಣ್​ಜಿತ್ ಸಿಂಗ್ ಛನ್ನಿ, ಚಾಮ್​ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಗಿದ್ದಾರೆ
  • ಛನ್ನಿ, ದಲಿತ ಸಮುದಾಯಕ್ಕೆ ಸೇರಿದವರು. ದಲಿತ ಸಮುದಾಯದ ಜನಸಂಖ್ಯೆ ಪಂಜಾಬ್​ನಲ್ಲಿ ಒಟ್ಟು ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಇದೆ
  • ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದ ಛನ್ನಿ, ಪಂಜಾಬ್​ ಕಾಂಗ್ರೆಸ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿ ಸಚಿವರಾಗಿದ್ದರು
  • ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಧ್ವನಿ ಎತ್ತಿದ್ದ ಪಂಜಾಬ್ ಕಾಂಗ್ರೆಸ್ ನಾಯಕರಲ್ಲಿ ಚರಣ್​ಜಿತ್ ಸಿಂಗ್ ಛನ್ನಿ ಕೂಡ ಒಬ್ಬರಾಗಿದ್ದಾರೆ
  • ಛನ್ನಿ, ಮೂರು ಬಾರಿ ಮುನ್ಸಿಪಾಲ್ ಕೌನ್ಸೆಲರ್ ಆಗಿ ಕಾರ್ಯನಿರ್ವಹಿಸಿದ್ದರು. ಖರಾರ್​ ಎಂಬಲ್ಲಿ ಮುನ್ಸಿಪಾಲಿಟಿ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದರು. ಆ ಬಳಿಕ, 2007 ರಲ್ಲಿ ಮೊದಲ ಬಾರಿಗೆ ಅವರು ಪಂಜಾಬ್ ವಿಧಾನಸಭೆಗೆ ಆಯ್ಕೆ ಆಗಿದ್ದರು
  • ಛನ್ನಿ ತಮ್ಮ ಬಾಲ್ಯದ ದಿನಗಳನ್ನು ಬಡತನದಲ್ಲಿ ಕಳೆದಿದ್ದರು. ಆ ಬಳಿಕ, ಪಂಜಾಬ್​ನ ಖರಾರ್ ಎಂಬಲ್ಲಿ ಅವರು ಟೆಂಟ್ ಹೌಸ್ ಉದ್ಯಮ ಆರಂಭಿಸಿದ್ದರು. ಅಲ್ಲಿ ಅವರು ಟೆಂಟ್ ಬಾಯ್ ಆಗಿಯೂ ಕೆಲಸ ಮಾಡಿದ್ದರು
  • ಚರಣ್​ಜಿತ್ ಸಿಂಗ್ ಛನ್ನಿ ಗಾಂಧಿ ಕುಟುಂಬಕ್ಕೆ ಆಪ್ತರು ಎಂದು ಹೇಳಲಾಗಿದೆ. ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನವಜೋತ್ ಸಿಂಗ್ ಸಿಧು ಮತ್ತು ಸುಖ್​ಜಿಂದರ್ ಸಿಂಗ್ ರಂಧಾವಾ ಹೆಸರು ಕೇಳಿಬಂದಿತ್ತು. ಸುನಿಲ್ ಜಾಖರ್ ಮತ್ತು ಪ್ರತಾಪ್ ಸಿಂಗ್ ಬಜ್ವಾ ಹೆಸರು ಕೂಡ ಸುಳಿದಾಡಿತ್ತು. ಬಳಿಕ, ಭಾನುವಾರ ಬೆಳಗ್ಗೆ ಅಂಬಿಕಾ ಸೋನಿ ಹೆಸರು ಕೂಡ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಚರಣ್​ಜಿತ್ ಸಿಂಗ್ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ

ಇದನ್ನೂ ಓದಿ: Punjab CM: ಚರಣ್‌ಜಿತ್ ಸಿಂಗ್ ಛನ್ನಿ ಪಂಜಾಬ್‌ನ ನೂತನ ಮುಖ್ಯಮಂತ್ರಿ

ಇದನ್ನೂ ಓದಿ: Punjab Politics ಸಿಖ್ ನಾಯಕರೇ ಪಂಜಾಬ್ ಸಿಎಂ ಆಗಬೇಕು; ಮುಖ್ಯಮಂತ್ರಿ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ

Published On - 7:28 pm, Sun, 19 September 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’