AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejas Crash: ದುಬೈನಲ್ಲಿ ಪತನಗೊಂಡ ತೇಜಸ್ ವಿಮಾನದ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಯಾರು?

Wing Commander Namansh Syal: ಇಂದು ದುಬೈ ವೈಮಾನಿಕ ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ಯುದ್ಧವಿಮಾನ ತೇಜಸ್ ಜೆಟ್ ಅಪಘಾತಕ್ಕೀಡಾಗಿದೆ. ಇದರಲ್ಲಿದ್ದ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಕೂಡ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಐಎಎಫ್ ಪೈಲಟ್ ನಮಾಂಶ್ ಹಿಮಾಚಲ ಪ್ರದೇಶದವರು. ವಿಂಗ್ ಕಮಾಂಡರ್ ಸ್ಯಾಲ್ ಅವರ ನಿಧನದ ಸುದ್ದಿ ಹರಡುತ್ತಿದ್ದಂತೆ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ದುಃಖ ವ್ಯಕ್ತಪಡಿಸಿದ್ದಾರೆ.

Tejas Crash: ದುಬೈನಲ್ಲಿ ಪತನಗೊಂಡ ತೇಜಸ್ ವಿಮಾನದ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಯಾರು?
Namansh Syal
ಸುಷ್ಮಾ ಚಕ್ರೆ
|

Updated on:Nov 21, 2025 | 11:01 PM

Share

ನವದೆಹಲಿ, ನವೆಂಬರ್ 21: ದುಬೈನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಅಪಘಾತಕ್ಕೀಡಾಗಿದೆ (Tejas Fighter Jet Crash) ಎಂದು ಐಎಎಫ್ ತಿಳಿಸಿತ್ತು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಎಕ್ಸ್‌ನಲ್ಲಿ ಈ ದುರಂತ ಅಪಘಾತದ ಸುದ್ದಿ ಕಾಂಗ್ರಾ ಜಿಲ್ಲೆಯ ಧೈರ್ಯಶಾಲಿ ಪುತ್ರನ ಅಕಾಲಿಕ ಮರಣಕ್ಕೆ ಕಾರಣವಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಇಂದು ದುಬೈ ವಾಯು ಪ್ರದರ್ಶನದ ಸಮಯದಲ್ಲಿ ತೇಜಸ್ ಫೈಟರ್ ಜೆಟ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ ಆಗಿದ್ದಾರೆ. ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನಿವಾಸಿಯಾಗಿದ್ದರು.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿದ್ದು, ದುರಂತ ತೇಜಸ್ ವಿಮಾನ ಅಪಘಾತದ ಸುದ್ದಿ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧೈರ್ಯಶಾಲಿ ಪುತ್ರನ ಅಕಾಲಿಕ ಮರಣಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. “ಈ ಸುದ್ದಿ ತುಂಬ ದುಃಖಕರ ಮತ್ತು ಹೃದಯವಿದ್ರಾವಕವಾಗಿದೆ. ಭಾರತ ಧೈರ್ಯಶಾಲಿ, ಕರ್ತವ್ಯನಿಷ್ಠ ಮತ್ತು ಧೀರ ಪೈಲಟ್ ಅನ್ನು ಕಳೆದುಕೊಂಡಿದೆ. ಮೃತರ ಕುಟುಂಬಕ್ಕೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಧೀರ ಪುತ್ರ ನಮಾಂಶ್ ಸ್ಯಾಲ್ ಅವರ ಅದಮ್ಯ ಶೌರ್ಯ, ಸಮರ್ಪಣೆ ಮತ್ತು ರಾಷ್ಟ್ರೀಯ ಸೇವೆಗೆ ಬದ್ಧತೆಗೆ ನಾನು ಹೃತ್ಪೂರ್ವಕ ಗೌರವದಿಂದ ನಮಸ್ಕರಿಸುತ್ತೇನೆ” ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಬರೆದಿದ್ದಾರೆ.

ಇದನ್ನೂ ಓದಿ: Tejas Fighter Jet Crash: ದುಬೈ ವಾಯು ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನ

ನಮಾಂಶ್ ಸ್ಯಾಲ್ ಯಾರು?:

ನಮಾಂಶ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯವರಾಗಿದ್ದು, ಕಾಕ್‌ಪಿಟ್‌ನಲ್ಲಿ ವೃತ್ತಿಪರತೆ ಮತ್ತು ಶಾಂತ ನಿಖರತೆಗೆ ಹೆಸರುವಾಸಿಯಾಗಿದ್ದ ಯುವ ಅಧಿಕಾರಿಯಾಗಿದ್ದರು. ಭಾರತದ ಸ್ಥಳೀಯವಾಗಿ ನಿರ್ಮಿಸಲಾದ ತೇಜಸ್ ಅನ್ನು ಉನ್ನತ ಮಟ್ಟದ ಏರೋಬ್ಯಾಟಿಕ್ ಪ್ರದರ್ಶನದ ಸಮಯದಲ್ಲಿ ಹಾರಿಸುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ತೇಜಸ್ ಫೈಟರ್ ಜೆಟ್ ಕೆಳಗೆ ಬೀಳುವಾಗ ಅವರಿಗೆ ಹೊರಗೆ ಹಾರಿಕೊಳ್ಳಲು ಸಾಧ್ಯವಾಗಿಲ್ಲ. ವಿಮಾನದ ಜೊತೆ ಅವರೂ ಕೂಡ ಬೆಂಕಿಗಾಹುತಿಯಾಗಿದ್ದಾರೆ.

ಇದನ್ನೂ ಓದಿ: Tejas Fighter Jet Crash: ತೇಜಸ್ ಜೆಟ್ ಪತನವಾಗಿ ಪೈಲಟ್ ನಿಧನ; ಭಾರತೀಯ ವಾಯುಪಡೆಯಿಂದ ತನಿಖೆಗೆ ಆದೇಶ

ಕಾಂಗ್ರಾದ ನಾಗ್ರೋಟಾ ಬಾಗ್ವಾನ್ ನಿವಾಸಿಯಾದ 34 ವರ್ಷದ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್, ಮಿಗ್ -21ರಲ್ಲಿ ತರಬೇತಿ ಪಡೆದಿದ್ದರು ಮತ್ತು ಸುಖೋಯ್ ಸು -30 ಎಂಕೆಐಗಳನ್ನು ಹಾರಿಸಿದ ಅನುಭವವನ್ನು ಸಹ ಹೊಂದಿದ್ದರು. ಇತ್ತೀಚೆಗೆ, ಅವರು ತೇಜಸ್ ಅನ್ನು ಹಾರಿಸುತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Fri, 21 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್