Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ. ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ […]

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 20, 2021 | 6:47 PM

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ.

ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ ಕೊವಿಡ್​ 19 ಚಿಕಿತ್ಸಾ ಪಟ್ಟಿಯಿಂದ ತೆಗೆದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ ಎಂದೂ ಹೇಳಿದೆ. ನಿನ್ನೆ ಅಂದರೆ ಮಂಗಳವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್​ ರಾಣಾ ಈ ಬಗ್ಗೆ ಸುಳಿವು ನೀಡಿದ್ದರು. ಶೀಘ್ರದಲ್ಲೇ ರೆಮ್​ಡಿಸಿವಿರ್​​ನ್ನು ಕೊವಿಡ್​ 19 ಚಿಕಿತ್ಸೆ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಕೊವಿಡ್​ ಸೋಂಕಿತರಿಗೆ ಇದು ಪರಿಣಾಮಕಾರಿ ಎಂಬುದಕ್ಕೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಹೇಳಿದ್ದರು.

ಕೊರೊನಾ ವಿರುದ್ಧ ಪ್ರಾಯೋಗಿಕವಾಗಿ ಬಳಸಲಾಗಿದ್ದ ಎಲ್ಲ ಔಷಧಿಗಳನ್ನೂ..ಪ್ಲಾಸ್ಮಾ ಥೆರಪಿಯನ್ನೂ ಸೇರಿ ಎಲ್ಲವನ್ನೂ ಚಿಕಿತ್ಸೆಯಿಂದ ಕೈಬಿಡಲಾಗಿದೆ. ಹಾಗೇ ಈ ರೆಮ್​ಡಿಸಿವಿರ್​ನ್ನು ಕೂಡ ಶೀಘ್ರದಲ್ಲೇ ಚಿಕಿತ್ಸಾ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಸದ್ಯದ ಮಟ್ಟಿಗೆ ಕೇವಲ ಮೂರು ರೀತಿಯ ಔಷಧಿಗಳು ಮಾತ್ರ ಕೊವಿಡ್​ 19 ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ನಾವು ಇನ್ನೂ ಗಮನಿಸುತ್ತಿದ್ದೇವೆ..ಅಧ್ಯಯನ ನಡೆಯುತ್ತಿದೆ ಎಂದೂ ಡಾ. ಡಿ.ಎಸ್.ರಾಣಾ ಹೇಳಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ