AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ. ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ […]

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 20, 2021 | 6:47 PM

Share

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ.

ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ ಕೊವಿಡ್​ 19 ಚಿಕಿತ್ಸಾ ಪಟ್ಟಿಯಿಂದ ತೆಗೆದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ ಎಂದೂ ಹೇಳಿದೆ. ನಿನ್ನೆ ಅಂದರೆ ಮಂಗಳವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್​ ರಾಣಾ ಈ ಬಗ್ಗೆ ಸುಳಿವು ನೀಡಿದ್ದರು. ಶೀಘ್ರದಲ್ಲೇ ರೆಮ್​ಡಿಸಿವಿರ್​​ನ್ನು ಕೊವಿಡ್​ 19 ಚಿಕಿತ್ಸೆ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಕೊವಿಡ್​ ಸೋಂಕಿತರಿಗೆ ಇದು ಪರಿಣಾಮಕಾರಿ ಎಂಬುದಕ್ಕೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಹೇಳಿದ್ದರು.

ಕೊರೊನಾ ವಿರುದ್ಧ ಪ್ರಾಯೋಗಿಕವಾಗಿ ಬಳಸಲಾಗಿದ್ದ ಎಲ್ಲ ಔಷಧಿಗಳನ್ನೂ..ಪ್ಲಾಸ್ಮಾ ಥೆರಪಿಯನ್ನೂ ಸೇರಿ ಎಲ್ಲವನ್ನೂ ಚಿಕಿತ್ಸೆಯಿಂದ ಕೈಬಿಡಲಾಗಿದೆ. ಹಾಗೇ ಈ ರೆಮ್​ಡಿಸಿವಿರ್​ನ್ನು ಕೂಡ ಶೀಘ್ರದಲ್ಲೇ ಚಿಕಿತ್ಸಾ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಸದ್ಯದ ಮಟ್ಟಿಗೆ ಕೇವಲ ಮೂರು ರೀತಿಯ ಔಷಧಿಗಳು ಮಾತ್ರ ಕೊವಿಡ್​ 19 ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ನಾವು ಇನ್ನೂ ಗಮನಿಸುತ್ತಿದ್ದೇವೆ..ಅಧ್ಯಯನ ನಡೆಯುತ್ತಿದೆ ಎಂದೂ ಡಾ. ಡಿ.ಎಸ್.ರಾಣಾ ಹೇಳಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ