AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ. ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ […]

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 20, 2021 | 6:47 PM

Share

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ.

ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ ಕೊವಿಡ್​ 19 ಚಿಕಿತ್ಸಾ ಪಟ್ಟಿಯಿಂದ ತೆಗೆದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ ಎಂದೂ ಹೇಳಿದೆ. ನಿನ್ನೆ ಅಂದರೆ ಮಂಗಳವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್​ ರಾಣಾ ಈ ಬಗ್ಗೆ ಸುಳಿವು ನೀಡಿದ್ದರು. ಶೀಘ್ರದಲ್ಲೇ ರೆಮ್​ಡಿಸಿವಿರ್​​ನ್ನು ಕೊವಿಡ್​ 19 ಚಿಕಿತ್ಸೆ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಕೊವಿಡ್​ ಸೋಂಕಿತರಿಗೆ ಇದು ಪರಿಣಾಮಕಾರಿ ಎಂಬುದಕ್ಕೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಹೇಳಿದ್ದರು.

ಕೊರೊನಾ ವಿರುದ್ಧ ಪ್ರಾಯೋಗಿಕವಾಗಿ ಬಳಸಲಾಗಿದ್ದ ಎಲ್ಲ ಔಷಧಿಗಳನ್ನೂ..ಪ್ಲಾಸ್ಮಾ ಥೆರಪಿಯನ್ನೂ ಸೇರಿ ಎಲ್ಲವನ್ನೂ ಚಿಕಿತ್ಸೆಯಿಂದ ಕೈಬಿಡಲಾಗಿದೆ. ಹಾಗೇ ಈ ರೆಮ್​ಡಿಸಿವಿರ್​ನ್ನು ಕೂಡ ಶೀಘ್ರದಲ್ಲೇ ಚಿಕಿತ್ಸಾ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಸದ್ಯದ ಮಟ್ಟಿಗೆ ಕೇವಲ ಮೂರು ರೀತಿಯ ಔಷಧಿಗಳು ಮಾತ್ರ ಕೊವಿಡ್​ 19 ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ನಾವು ಇನ್ನೂ ಗಮನಿಸುತ್ತಿದ್ದೇವೆ..ಅಧ್ಯಯನ ನಡೆಯುತ್ತಿದೆ ಎಂದೂ ಡಾ. ಡಿ.ಎಸ್.ರಾಣಾ ಹೇಳಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು