AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ. ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ […]

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 20, 2021 | 6:47 PM

Share

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ.

ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ ಕೊವಿಡ್​ 19 ಚಿಕಿತ್ಸಾ ಪಟ್ಟಿಯಿಂದ ತೆಗೆದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ ಎಂದೂ ಹೇಳಿದೆ. ನಿನ್ನೆ ಅಂದರೆ ಮಂಗಳವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್​ ರಾಣಾ ಈ ಬಗ್ಗೆ ಸುಳಿವು ನೀಡಿದ್ದರು. ಶೀಘ್ರದಲ್ಲೇ ರೆಮ್​ಡಿಸಿವಿರ್​​ನ್ನು ಕೊವಿಡ್​ 19 ಚಿಕಿತ್ಸೆ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಕೊವಿಡ್​ ಸೋಂಕಿತರಿಗೆ ಇದು ಪರಿಣಾಮಕಾರಿ ಎಂಬುದಕ್ಕೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಹೇಳಿದ್ದರು.

ಕೊರೊನಾ ವಿರುದ್ಧ ಪ್ರಾಯೋಗಿಕವಾಗಿ ಬಳಸಲಾಗಿದ್ದ ಎಲ್ಲ ಔಷಧಿಗಳನ್ನೂ..ಪ್ಲಾಸ್ಮಾ ಥೆರಪಿಯನ್ನೂ ಸೇರಿ ಎಲ್ಲವನ್ನೂ ಚಿಕಿತ್ಸೆಯಿಂದ ಕೈಬಿಡಲಾಗಿದೆ. ಹಾಗೇ ಈ ರೆಮ್​ಡಿಸಿವಿರ್​ನ್ನು ಕೂಡ ಶೀಘ್ರದಲ್ಲೇ ಚಿಕಿತ್ಸಾ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಸದ್ಯದ ಮಟ್ಟಿಗೆ ಕೇವಲ ಮೂರು ರೀತಿಯ ಔಷಧಿಗಳು ಮಾತ್ರ ಕೊವಿಡ್​ 19 ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ನಾವು ಇನ್ನೂ ಗಮನಿಸುತ್ತಿದ್ದೇವೆ..ಅಧ್ಯಯನ ನಡೆಯುತ್ತಿದೆ ಎಂದೂ ಡಾ. ಡಿ.ಎಸ್.ರಾಣಾ ಹೇಳಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್