AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ದ್ವೇಷದ ಬೀಜವನ್ನು ಬಿತ್ತಿದ್ದು ಯಾರು? ಕಾಂಗ್ರೆಸ್ ವಿರುದ್ಧ ಅನುರಾಗ್ ಠಾಕೂರ್ ವಾಗ್ದಾಳಿ

Anurag Thakur; ‘ತುಕ್ಡೆ-ತುಕ್ಡೆ' ಗ್ಯಾಂಗ್‌ನ ಬೆಂಬಲಿಗರು ಮಾತ್ರ ‘ಭಾರತ ಮಾತೆಯನ್ನು' ವಿಭಜಿಸುವ, ಕೊಲ್ಲುವ ಬಗ್ಗೆ ಯೋಚಿಸಬಹುದು. ಅವರಿಗೆ ಮಣಿಪುರದ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ. ಸಂವಿಧಾನದ ಹತ್ಯೆ, ಭಾರತ ಮಾತೆಯ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜಸ್ಥಾನದ ಮಹಿಳೆಯರ ಬಗ್ಗೆ ಚಿಂತೆಯಿಲ್ಲ ಎಂದು ಠಾಕೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರದಲ್ಲಿ ದ್ವೇಷದ ಬೀಜವನ್ನು ಬಿತ್ತಿದ್ದು ಯಾರು? ಕಾಂಗ್ರೆಸ್ ವಿರುದ್ಧ ಅನುರಾಗ್ ಠಾಕೂರ್ ವಾಗ್ದಾಳಿ
ಅನುರಾಗ್ ಠಾಕೂರ್
Ganapathi Sharma
|

Updated on: Aug 11, 2023 | 9:49 PM

Share

ನವದೆಹಲಿ: ಮಣಿಪುರದಲ್ಲಿ ದ್ವೇಷದ ಬೀಜವನ್ನು ಬಿತ್ತಿದ್ದು ಯಾರು? ಕಾಂಗ್ರೆಸ್​​ (Congress) ಪಕ್ಷವೇ ಅಲ್ಲಿ ದ್ವೇಷವನ್ನು ಬಿತ್ತಿತ್ತು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಆಳ್ವಿಕೆಯಲ್ಲಿ ಈಶಾನ್ಯವು ಬಾಂಬ್, ಬಂದ್ ಮತ್ತು ಸ್ಫೋಟಗಳಿಗೆ ಹೆಸರುವಾಸಿಯಾಗಿತ್ತು. ಕಾಂಗ್ರೆಸ್​​ನವರ ನೀತಿ ‘ಲುಕ್ ಈಸ್ಟ್’ ಆಗಿತ್ತು. ಆದರೆ ಪ್ರಧಾನಿ ಮೋದಿ ಅವರು ‘ಆ್ಯಕ್ಟ್ ಈಸ್ಟ್’ ನೀತಿಯನ್ನು ಪ್ರಾರಂಭಿಸಿದರು. ಭಾರತ ಸರ್ಕಾರವು ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

‘ತುಕ್ಡೆ-ತುಕ್ಡೆ’ ಗ್ಯಾಂಗ್‌ನ ಬೆಂಬಲಿಗರು ಮಾತ್ರ ‘ಭಾರತ ಮಾತೆಯನ್ನು’ ವಿಭಜಿಸುವ, ಕೊಲ್ಲುವ ಬಗ್ಗೆ ಯೋಚಿಸಬಹುದು. ಅವರಿಗೆ ಮಣಿಪುರದ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ. ಸಂವಿಧಾನದ ಹತ್ಯೆ, ಭಾರತ ಮಾತೆಯ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜಸ್ಥಾನದ ಮಹಿಳೆಯರ ಬಗ್ಗೆ ಚಿಂತೆಯಿಲ್ಲ, ನೀವು (ಕಾಂಗ್ರೆಸ್​​​ನವರು) ಪಶ್ಚಿಮ ಬಂಗಾಳ, ಬಿಹಾರ, ಮಣಿಪುರದ ಮಹಿಳೆಯರಲ್ಲಿ ತಾರತಮ್ಯ ಮಾಡಿ ಎಂದು ಠಾಕೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಚರ್ಚೆಯ ಕೊನೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಭಾಷಣದ ಬಗ್ಗೆ ಕಾಂಗ್ರೆಸ್ ಸಂಸದರು ಮಾಡಿದ ಟೀಕೆಗೆ ಅನುರಾಗ್ ಠಾಕೂರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಅಸಭ್ಯ ಪದಗಳನ್ನು ಬಳಸುವುದು ಮತ್ತು ಸುಳ್ಳು ಹೇಳುವುದು ಅಭ್ಯಾಸವಾಗಿದೆ. ಅವರ ಹೆಮ್ಮೆ ಮತ್ತು ಅಹಂ ಅವರನ್ನು ‘ಘಮಂಡಿಯಾ’ ಮೈತ್ರಿಕೂಟದ ಸದಸ್ಯರನ್ನಾಗಿ ಮಾಡಿದೆ ಎಂದು ಠಾಕೂರ್ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ‘ನಕಲಿ ಸಹಿ’ ಆರೋಪ: ರಾಜ್ಯಸಭೆಯಿಂದ ಎಎಪಿ ಸಂಸದ ರಾಘವ್ ಚಡ್ಡಾ ಅಮಾನತು

ಮಣಿಪುರದಲ್ಲಿ ಭಾರತ ಮಾತೆಯನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ ಠಾಕೂರ್, ತುಕ್ಡೆ-ತುಕ್ಡೆ ಗ್ಯಾಂಗ್‌ನ ಬೆಂಬಲಿಗರು ಮಾತ್ರ ನಮ್ಮ ಭಾರತಮಾತೆಯನ್ನು ಕೊಲ್ಲುವ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ. ಅವರು (ರಾಹುಲ್ ಗಾಂಧಿ) ಮಣಿಪುರದ ಬಗ್ಗೆ ಕಾಳಜಿ ಹೊಂದಿಲ್ಲ, ಆದರೆ ಮಾಧ್ಯಮಗಳಲ್ಲಿ ತಮ್ಮ ವರ್ಚಸ್ಸಿನ ಬಗ್ಗೆ ಚಿಂತಿತರಾಗಿದ್ದಾರೆ ಎಂದು ಠಾಕೂರ್ ಹೇಳಿದ್ದಾರೆ.

ಭಾರತ ಮಾತೆಯನ್ನು ಹತ್ಯೆ ಮಾಡಲಾಗಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ ಹಾಗೂ ಇತರ ಕೆಲವು ಹೇಳಿಕೆಗಳನ್ನು ನಂತರ ಸ್ಪೀಕರ್ ಓಂ ಬಿರ್ಲಾ ಅವರು ಕಡತದಿಂದ ತೆಗೆದುಹಾಕಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ