AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ? ಇದು ಯುವಕರ ಹಿತದೃಷ್ಟಿಯಿಂದ ತಂದಿದಲ್ಲ -ಮೋದಿ ವಿರುದ್ಧ ಮೇಘಾಲಯ ಗವರ್ನರ್ ವಾಗ್ದಾಳಿ

ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಮೇಘಾಲಯ ಗವರ್ನರ್ ಒತ್ತಾಯಿಸಿದ್ದಾರೆ. ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ. ಅಗ್ನಿಪಥ್ ಯೋಜನೆ ಎಂದಿಗೂ ದೇಶದ ಯುವಕರ ಹಿತದೃಷ್ಟಿಯಿಂದ ತಂದಿದಲ್ಲ.

ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ? ಇದು ಯುವಕರ ಹಿತದೃಷ್ಟಿಯಿಂದ ತಂದಿದಲ್ಲ -ಮೋದಿ ವಿರುದ್ಧ ಮೇಘಾಲಯ ಗವರ್ನರ್ ವಾಗ್ದಾಳಿ
ಮೇಘಾಲಯದ ಗವರ್ನರ್ ಸತ್ಯಪಾಲ್ ಮಲಿಕ್
TV9 Web
| Edited By: |

Updated on:Jun 28, 2022 | 4:03 PM

Share

ಮೇಘಾಲಯ: ಜೂನ್ 14 ರಂದು ರಕ್ಷಣಾ ಸಚಿವಾಲಯವು ಸೇನೆಯಲ್ಲಿ ಗುತ್ತಿಗೆ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯನ್ನು(Agnipath Scheme) ಪ್ರಾರಂಭಿಸಿತ್ತು. ಈ ಯೋಜನೆಯಡಿ ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಾಪಡೆಗಳಿಗೆ ನಾಲ್ಕು ವರ್ಷಗಳ ಗುತ್ತಿಗೆಯಡಿ ಯುವ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತೆ. ಆದ್ರೆ ಈ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಅನೇಕ ಕಡೆಗಳಿಂದ ವಿರೋಧ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ಇದರ ಮಧ್ಯೆ ಮೇಘಾಲಯದ ಗವರ್ನರ್ ಸತ್ಯಪಾಲ್ ಮಲಿಕ್(Meghalaya Governor Satya Pal Malik) ಅವರು ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ಬಗ್ಗೆ ಮೋದಿ ಸರ್ಕಾರ(Narendra Modi) ಹೆಚ್ಚಿನ ಅಸ್ವಸ್ಥತೆಯನ್ನು ಸೇರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಾಗೂ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ. ಅಗ್ನಿಪಥ್ ಯೋಜನೆ ಎಂದಿಗೂ ದೇಶದ ಯುವಕರ ಹಿತದೃಷ್ಟಿಯಿಂದ ತಂದಿದಲ್ಲ. ವ್ಯತಿರಿಕ್ತವಾಗಿ ಈ ಯೋಜನೆಯಿಂದ ಸರ್ಕಾರ ಮತ್ತು ಹಳ್ಳಿಯ ನಡುವಿನ ಅಂತರ ಹೆಚ್ಚಲಿದೆ. ಇದೇ ಮೊದಲ ಬಾರಿಗೆ ರಾಜ್ಯವೊಂದರ ರಾಜ್ಯಪಾಲರು ಅಗ್ನಿಪಥ್ ಯೋಜನೆಯ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತಂದಿರುವ ಯೋಜನೆ ವಿರುದ್ಧ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಹರಿಹಾಯ್ದಿವೆ. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ಕೂಡ ‘ಅಗ್ನಿಪಥ್’ ಯೋಜನೆ ವಿರುದ್ಧ ಧ್ವನಿ ಎತ್ತಿದೆ. ಇದನ್ನೂ ಓದಿ: ಆದೇಶ ಪಾಲಿಸದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್

ಜೂನ್ 14 ರಂದು, ರಕ್ಷಣಾ ಸಚಿವಾಲಯವು ಸೇನೆಯಲ್ಲಿ ಗುತ್ತಿಗೆ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯನ್ನು ಪ್ರಾರಂಭಿಸಿತ್ತು. ತದನಂತರ ದೇಶಾದ್ಯಂತ ಅಶಾಂತಿಯ ಬೆಂಕಿ ಹೊತ್ತಿಕೊಂಡಿದೆ. ಬಿಹಾರ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದು ಹಲವಾರು ರೈಲುಗಳು ಮತ್ತು ಕಾರುಗಳನ್ನು ಸುಟ್ಟುಹಾಕಲಾಗಿದೆ. ಪೊಲೀಸ್ ಗೋಲಿಬಾರ್ ನಲ್ಲಿ ಒಬ್ಬ ಪ್ರತಿಭಟನಾಕಾರ ಪ್ರಾಣ ಕಳೆದುಕೊಂಡಿದ್ದಾನೆ.

Published On - 4:01 pm, Tue, 28 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ