AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ? ಇದು ಯುವಕರ ಹಿತದೃಷ್ಟಿಯಿಂದ ತಂದಿದಲ್ಲ -ಮೋದಿ ವಿರುದ್ಧ ಮೇಘಾಲಯ ಗವರ್ನರ್ ವಾಗ್ದಾಳಿ

ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಮೇಘಾಲಯ ಗವರ್ನರ್ ಒತ್ತಾಯಿಸಿದ್ದಾರೆ. ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ. ಅಗ್ನಿಪಥ್ ಯೋಜನೆ ಎಂದಿಗೂ ದೇಶದ ಯುವಕರ ಹಿತದೃಷ್ಟಿಯಿಂದ ತಂದಿದಲ್ಲ.

ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ? ಇದು ಯುವಕರ ಹಿತದೃಷ್ಟಿಯಿಂದ ತಂದಿದಲ್ಲ -ಮೋದಿ ವಿರುದ್ಧ ಮೇಘಾಲಯ ಗವರ್ನರ್ ವಾಗ್ದಾಳಿ
ಮೇಘಾಲಯದ ಗವರ್ನರ್ ಸತ್ಯಪಾಲ್ ಮಲಿಕ್
TV9 Web
| Edited By: |

Updated on:Jun 28, 2022 | 4:03 PM

Share

ಮೇಘಾಲಯ: ಜೂನ್ 14 ರಂದು ರಕ್ಷಣಾ ಸಚಿವಾಲಯವು ಸೇನೆಯಲ್ಲಿ ಗುತ್ತಿಗೆ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯನ್ನು(Agnipath Scheme) ಪ್ರಾರಂಭಿಸಿತ್ತು. ಈ ಯೋಜನೆಯಡಿ ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಾಪಡೆಗಳಿಗೆ ನಾಲ್ಕು ವರ್ಷಗಳ ಗುತ್ತಿಗೆಯಡಿ ಯುವ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತೆ. ಆದ್ರೆ ಈ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಅನೇಕ ಕಡೆಗಳಿಂದ ವಿರೋಧ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ಇದರ ಮಧ್ಯೆ ಮೇಘಾಲಯದ ಗವರ್ನರ್ ಸತ್ಯಪಾಲ್ ಮಲಿಕ್(Meghalaya Governor Satya Pal Malik) ಅವರು ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ಬಗ್ಗೆ ಮೋದಿ ಸರ್ಕಾರ(Narendra Modi) ಹೆಚ್ಚಿನ ಅಸ್ವಸ್ಥತೆಯನ್ನು ಸೇರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಾಗೂ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಪಿಂಚಣಿಯಿಲ್ಲದೆ ನಿವೃತ್ತಿಯಾದರೆ ಅಗ್ನಿವೀರರನ್ನು ಯಾರು ಮದುವೆಯಾಗುತ್ತಾರೆ. ಅಗ್ನಿಪಥ್ ಯೋಜನೆ ಎಂದಿಗೂ ದೇಶದ ಯುವಕರ ಹಿತದೃಷ್ಟಿಯಿಂದ ತಂದಿದಲ್ಲ. ವ್ಯತಿರಿಕ್ತವಾಗಿ ಈ ಯೋಜನೆಯಿಂದ ಸರ್ಕಾರ ಮತ್ತು ಹಳ್ಳಿಯ ನಡುವಿನ ಅಂತರ ಹೆಚ್ಚಲಿದೆ. ಇದೇ ಮೊದಲ ಬಾರಿಗೆ ರಾಜ್ಯವೊಂದರ ರಾಜ್ಯಪಾಲರು ಅಗ್ನಿಪಥ್ ಯೋಜನೆಯ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತಂದಿರುವ ಯೋಜನೆ ವಿರುದ್ಧ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಹರಿಹಾಯ್ದಿವೆ. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ಕೂಡ ‘ಅಗ್ನಿಪಥ್’ ಯೋಜನೆ ವಿರುದ್ಧ ಧ್ವನಿ ಎತ್ತಿದೆ. ಇದನ್ನೂ ಓದಿ: ಆದೇಶ ಪಾಲಿಸದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್

ಜೂನ್ 14 ರಂದು, ರಕ್ಷಣಾ ಸಚಿವಾಲಯವು ಸೇನೆಯಲ್ಲಿ ಗುತ್ತಿಗೆ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯನ್ನು ಪ್ರಾರಂಭಿಸಿತ್ತು. ತದನಂತರ ದೇಶಾದ್ಯಂತ ಅಶಾಂತಿಯ ಬೆಂಕಿ ಹೊತ್ತಿಕೊಂಡಿದೆ. ಬಿಹಾರ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದು ಹಲವಾರು ರೈಲುಗಳು ಮತ್ತು ಕಾರುಗಳನ್ನು ಸುಟ್ಟುಹಾಕಲಾಗಿದೆ. ಪೊಲೀಸ್ ಗೋಲಿಬಾರ್ ನಲ್ಲಿ ಒಬ್ಬ ಪ್ರತಿಭಟನಾಕಾರ ಪ್ರಾಣ ಕಳೆದುಕೊಂಡಿದ್ದಾನೆ.

Published On - 4:01 pm, Tue, 28 June 22

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!