AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಗಾಗಿ ಕೆಲಸ ಮಾಡುವವರು ಈಗ ಗವರ್ನರ್; ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ನೇಮಕಕ್ಕೆ ಕಾಂಗ್ರೆಸ್ ಟೀಕೆ

Andhra Pradesh Governor "ಮೋದಿ ಅದಾನಿಗಾಗಿ ಕೆಲಸ ಮಾಡುತ್ತಾರೆ... ಮೋದಿಗಾಗಿ ಕೆಲಸ ಮಾಡುವವರು ಈಗ ರಾಜ್ಯಪಾಲರು. ಆಗ ಜನರಿಗಾಗಿ ಕೆಲಸ ಮಾಡುವವರು ಯಾರು? ಭಾರತ್ ಮಾತಾ ಕಿ ಜೈ" ಎಂದು ಕಾಂಗ್ರೆಸ್ ಸಂಸದರು ಟ್ವೀಟ್ ಮಾಡಿದ್ದಾರೆ.

ಮೋದಿಗಾಗಿ ಕೆಲಸ ಮಾಡುವವರು ಈಗ ಗವರ್ನರ್; ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ನೇಮಕಕ್ಕೆ ಕಾಂಗ್ರೆಸ್ ಟೀಕೆ
ನ್ಯಾಯಮೂರ್ತಿ ಅಬ್ದುಲ್ ನಜೀರ್
ರಶ್ಮಿ ಕಲ್ಲಕಟ್ಟ
|

Updated on:Feb 12, 2023 | 3:54 PM

Share

ಸರ್ಕಾರ ಭಾನುವಾರ ಆರು ಹೊಸಬರನ್ನು ಗವರ್ನರ್‌ಗಳಾಗಿ (governors) ನೇಮಕ ಮತ್ತು ಏಳು ಮಂದಿಯನ್ನು ಪುನರ್ರಚಿಸಿದ ನಂತರ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ಶುರುವಾಗಿದೆ. 2019ರ ಅಯೋಧ್ಯೆ ತೀರ್ಪಿನ (2019 Ayodhya verdict)ಭಾಗವಾಗಿದ್ದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ (S Abdul Nazeer) ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಮಾಡಿದ್ದರಿಂದ, ಮೋದಿ ಪರ ಕೆಲಸ ಮಾಡುವವರು ಈಗ ರಾಜ್ಯಪಾಲರಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಹೇಳಿದ್ದಾರೆ. “ಮೋದಿ ಅದಾನಿಗಾಗಿ ಕೆಲಸ ಮಾಡುತ್ತಾರೆ… ಮೋದಿಗಾಗಿ ಕೆಲಸ ಮಾಡುವವರು ಈಗ ರಾಜ್ಯಪಾಲರು. ಆಗ ಜನರಿಗಾಗಿ ಕೆಲಸ ಮಾಡುವವರು ಯಾರು? ಭಾರತ್ ಮಾತಾ ಕಿ ಜೈ” ಎಂದು ಕಾಂಗ್ರೆಸ್ ಸಂಸದರು ಟ್ವೀಟ್ ಮಾಡಿದ್ದಾರೆ.

ನೇಮಕಾತಿಗಳನ್ನು ಉಲ್ಲೇಖಿಸದೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದಿವಂಗತ ಅರುಣ್ ಜೇಟ್ಲಿ ಅವರ ವಿಡಿಯೊವನ್ನು ಹೊಂದಿರುವ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ. “ನಿವೃತ್ತಿ ಪೂರ್ವ ನಿರ್ಧಾರಗಳು ನಿವೃತ್ತಿಯ ನಂತರದ ಉದ್ಯೋಗಗಳಿಂದ ಪ್ರಭಾವಿತವಾಗಿವೆ” ಎಂದು ಜೇಟ್ಲಿ 2012 ರಲ್ಲಿ ಹೇಳಿದ್ದು ವಿಡಿಯೊದಲ್ಲಿದೆ. “ಕಳೆದ 3-4 ವರ್ಷಗಳಲ್ಲಿ ಇದಕ್ಕೆ ಸಾಕಷ್ಟು ಪುರಾವೆಗಳ ಸಿಕ್ಕಿವೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ನ್ಯಾಯಮೂರ್ತಿ ಸೈಯದ್ ಅಬ್ದುಲ್ ನಜೀರ್ ಅವರು ಭಾರತದ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿದ್ದು ಜನವರಿ 4, 2023 ರಂದು ನಿವೃತ್ತರಾಗಿದ್ದರು. ಅವರು ಛತ್ತೀಸ್‌ಗಢದ ರಾಜ್ಯಪಾಲರಾಗಿ ವರ್ಗಾವಣೆಗೊಂಡ ಬಿಸ್ವ ಭೂಷಣ ಹರಿಚಂದನ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.

ಅಯೋಧ್ಯೆ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ಸರ್ವಾನುಮತದ ತೀರ್ಪು ನೀಡಿದ ಸಂವಿಧಾನ ಪೀಠದ ಏಕೈಕ ಮುಸ್ಲಿಂ ನ್ಯಾಯಾಧೀಶರಾಗಿದ್ದಾರೆ ನಜೀರ್.

ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರು ‘ಕಾಂಗ್ರೆಸ್-ಎಡಪಂಥೀಯ’ ಪರಿಸರ ವ್ಯವಸ್ಥೆಯನ್ನು ಟೀಕಿಸಿದ್ದಾರೆ. ಇದು ‘ನಾನು ಹೇಳಿದಂತೆ ಮಾಡು’ ಬ್ರಿಗೇಡ್. “ಈಗಿನ ದಿನಗಳಲ್ಲಿ ಕಾಂಗಿ-ಎಡ ಪರಿಸರ ವ್ಯವಸ್ಥೆಯು ಆಂಧ್ರಪ್ರದೇಶದ ಗವರ್ನರ್ ಆಗಿ ಜಸ್ಟಿಸ್ (ನಿವೃತ್ತ) ಅಬ್ದುಲ್ ನಜೀರ್ ಅವರ ನೇಮಕಾತಿಯನ್ನು ವಿರೋಧಿಸುತ್ತದೆ. ಪರಿಸರ ವ್ಯವಸ್ಥೆಗೆ ಅವರ ದೊಡ್ಡ ಪಾಪದ ಅಪರಾಧವೆಂದರೆ ಶ್ರೀ ರಾಮ ಜನ್ಮ ಭೂಮಿ ತೀರ್ಪು . ನಾನು ಹೇಳಿದಂತೆ ಮಾಡಿ, ಬ್ರಿಗೇಡ್ ಕಾರ್ಯದಲ್ಲಿರುವಂತೆ ಅಲ್ಲ” ಎಂದು ಬಿಜೆಪಿ ನಾಯಕ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Delhi Mayor Election: ಫೆ.16ರಂದು ದೆಹಲಿ ಮೇಯರ್ ಚುನಾವಣೆ

ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು 2016 ರ ನೋಟು ಅಮಾನ್ಯೀಕರಣ ಪ್ರಕ್ರಿಯೆಯನ್ನು ಎತ್ತಿ ಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Sun, 12 February 23

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ