2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್

ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ ಎನ್‌ಸಿಪಿ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲಿದೆಯೇ ಎಂಬ ಪ್ರಶ್ನೆಗೆ, 2024 ಏಕೆ, ನಾವು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ

2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್
ಅಜಿತ್ ಪವಾರ್
Follow us
|

Updated on:Apr 22, 2023 | 8:07 PM

ಪುಣೆ: ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಊಹಾಪೋಹಗಳ ನಡುವೆ ನ್ಯಾಷನಲ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ (Ajit Pawar) ಅವರು 2024 ರ ವಿಧಾನಸಭಾ ಚುನಾವಣೆಗೆ ಕಾಯುವ ಬದಲು ಮಹಾರಾಷ್ಟ್ರದ (Maharashtra) ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಪವಾರ್ ತಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲು 100 ಪ್ರತಿಶತ ಇಷ್ಟಪಡುತ್ತೇನೆ ಎಂದಿದ್ದಾರೆ. ಪುಣೆಯಲ್ಲಿ ಸಕಾಲ್ ಮೀಡಿಯಾ ಗ್ರೂಪ್‌ಗೆ ನೀಡಿದ ಸಂದರ್ಶನದಲ್ಲಿ, ಪವಾರ್ ಅವರು ಜೂನ್ 2022ರಲ್ಲಿ ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅತೃಪ್ತರಾಗಿದ್ದರು ಮತ್ತು ಅವರ ಮನಸ್ಸಿನಲ್ಲಿ ಏನೋ ನಡೆಯುತ್ತಿದೆ ಎಂದು ಕೇಳಿದ್ದೇನೆ ಎಂದು ಹೇಳಿದರು. 2004 ರಲ್ಲಿ ಎನ್‌ಸಿಪಿ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್‌ಗಿಂತ ಹೆಚ್ಚು ಅಸೆಂಬ್ಲಿ ಸ್ಥಾನಗಳನ್ನು ಗೆದ್ದಿದ್ದಾಗ ತನ್ನ ಸಹೋದ್ಯೋಗಿ ದಿವಂಗತ ಆರ್‌ಆರ್ ಪಾಟೀಲ್ ಮುಖ್ಯಮಂತ್ರಿಯಾಗುತ್ತಿದ್ದರು. ಆದರೆ ನಮ್ಮ ಪಕ್ಷವು ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆಯುತ್ತದೆ ಎಂಬ ಸಂದೇಶವು ದೆಹಲಿಯಿಂದ ಬಂದಿತು.

ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ ಎನ್‌ಸಿಪಿ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲಿದೆಯೇ ಎಂಬ ಪ್ರಶ್ನೆಗೆ, 2024 ಏಕೆ, ನಾವು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಈ ಹೇಳಿಕೆಯ ಬಗ್ಗೆ ಅವರು ಹೆಚ್ಚಿನ ವಿವರಣೆ ನೀಡಿಲ್ಲ.

ಪವಾರ್ ಶುಕ್ರವಾರ ತಮ್ಮ ಪಕ್ಷದ ಮುಂಬೈ ಘಟಕದ ಸಭೆಗೆ ಗೈರು ಹಾಜರಾಗಿದ್ದು ಸಾಕಷ್ಟು ಊಹಾಪೋಹಗಳನ್ನು ಹುಟ್ಟು ಹಾಕಿತ್ತು. ಅದೇ ಸಮಯದಲ್ಲಿ ನಡೆಯುತ್ತಿರುವ ಇತರ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಎನ್‌ಸಿಪಿ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪವಾರ್ ಹೇಳಿದ್ದು, ಈ ಬಗ್ಗೆ ಹೆಚ್ಚು ಊಹಿಸಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.

ಸಂದರ್ಶನದಲ್ಲಿ ಪವಾರ್ ಅವರಲ್ಲಿ ನೀವು ಮುಖ್ಯಮಂತ್ರಿಯಾಗಲು ಬಯಸುತ್ತೀರಾ ಎಂದು ಕೇಳಿದಾಗ ಹೌದು, ನಾನು 100 ಪರ್ಸೆಂಟ್ ಆಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.ಕಳೆದ 20 ವರ್ಷಗಳಲ್ಲಿ ಪಕ್ಷವು ಅನೇಕ ಸಂದರ್ಭಗಳಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆದಿರುವುದರ ಬಗ್ಗೆ ಕೇಳಿದಾಗ 2004 ರಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ್ದವು, ನಾವು ಹೆಚ್ಚು ಸ್ಥಾನ ಗೆದ್ದಿದ್ದೆವು ಎಂದಿದ್ದಾರೆ.

ನಮಗೆ 71 ಸ್ಥಾನಗಳು ಸಿಕ್ಕಿವೆ, ಕಾಂಗ್ರೆಸ್ 69 ಗೆದ್ದಿದೆ. ಕಾಂಗ್ರೆಸ್ ಸೇರಿದಂತೆ ಎಲ್ಲರೂ ಎನ್​​ಸಿಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಭಾವಿಸಿದ್ದರು. ಆದರೆ, ಉನ್ನತ ಮಟ್ಟದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಎನ್‌ಸಿಪಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂಬ ಸಂದೇಶ ದೆಹಲಿಯಿಂದ ಬಂದಿದೆ. ಹಾಗೆ ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಾಲಾಯಿತು ಎಂದು ಹೇಳಿದ್ದಾರೆ. ತಮ್ಮ ಸಹೋದ್ಯೋಗಿ ಪಾಟೀಲ್ ಅವರನ್ನು ಸದನದ ನಾಯಕರಾಗಿ ಆಯ್ಕೆ ಮಾಡಲಾಯಿತು. ಎನ್‌ಸಿಪಿಗೆ ಉನ್ನತ ಹುದ್ದೆಯನ್ನು ನೀಡಿದರೆ ಅವರು 2004 ರಲ್ಲಿ ಮುಖ್ಯಮಂತ್ರಿಯಾಗುತ್ತಿದ್ದರು ಎಂದಿದ್ದಾರೆ ಪವಾರ್.

ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ನಾನು ಯಾವುದೇ ಬೆಲೆ ತೆರಲು ಸಿದ್ಧ: ಬಂಗಲೆ ಖಾಲಿ ಮಾಡಿ ಕೀ ಹಸ್ತಾಂತರಿಸಿದ ರಾಹುಲ್ ಗಾಂಧಿ

ನಂತರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎನ್‌ಸಿಪಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿತು .ಸಹಜವಾಗಿಯೇ ಅದು ಮುಖ್ಯಮಂತ್ರಿ ಸ್ಥಾನವನ್ನು ತನ್ನಲ್ಲಿಯೇ ಇಟ್ಟುಕೊಂಡಿತು ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Sat, 22 April 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​