AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR in India: ಮುಂದಿನ ವರ್ಷವೇ ಚುನಾವಣೆಯಿದ್ದರೂ ಅಸ್ಸಾಂನಲ್ಲಿ ಏಕೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸುತ್ತಿಲ್ಲ?

ಬಿಹಾರದ ಬಳಿಕ ಇದೀಗ 2ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯನ್ನು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ. 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಈ ಹಂತದ ಎಸ್​ಐಆರ್​ ನಡೆಯಲಿದೆ. ಆದರೆ, ಮುಂದಿನ ವರ್ಷವೇ ಚುನಾವಣೆ ನಡೆಯಲಿರುವ ಅಸ್ಸಾಂ ರಾಜ್ಯವನ್ನು ಈ ಮತದಾರರ ಪಟ್ಟಿ ಪರಿಷ್ಕರಣೆಯಿಂದ ಹೊರಗಿಡಲಾಗಿದೆ. ಇದಕ್ಕೆ ಕಾರಣವೇನೆಂಬುದರ ಬಗ್ಗೆ ವಿವರ ಇಲ್ಲಿದೆ.

SIR in India: ಮುಂದಿನ ವರ್ಷವೇ ಚುನಾವಣೆಯಿದ್ದರೂ ಅಸ್ಸಾಂನಲ್ಲಿ ಏಕೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸುತ್ತಿಲ್ಲ?
Eci Press Conference
ಸುಷ್ಮಾ ಚಕ್ರೆ
|

Updated on: Oct 27, 2025 | 5:44 PM

Share

ನವದೆಹಲಿ, ಅಕ್ಟೋಬರ್ 27: ಭಾರತೀಯ ಚುನಾವಣಾ ಆಯೋಗ (ECI) 2ನೇ ಹಂತದ ಮತದಾರರ ಪಟ್ಟಿಗಳ ಪ್ಯಾನ್-ಇಂಡಿಯಾ ವಿಶೇಷ ಪರಿಷ್ಕರಣೆ (SIR) ಅನ್ನು ಇಂದು ಘೋಷಿಸಿದೆ. ಎಸ್​ಐಆರ್​ 2ನೇ ಹಂತವು ನಾಳೆಯಿಂದ (ಅಕ್ಟೋಬರ್ 28)ರಿಂದ 12 ರಾಜ್ಯಗಳಲ್ಲಿ ಪ್ರಾರಂಭವಾಗಲಿದೆ. ಈ 12 ರಾಜ್ಯಗಳಲ್ಲಿ ಬಹುತೇಕ ಕಡೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಆದರೆ, ಅಸ್ಸಾಂನಲ್ಲಿ ಕೂಡ ಮುಂದಿನ ವರ್ಷವೇ ಚುನಾವಣೆ (Assam Assembly Elections) ಘೋಷಣೆಯಾಗಿದೆ. ಹೀಗಿದ್ದರೂ ಚುನಾವಣಾ ಆಯೋಗ ಅಸ್ಸಾಂ ರಾಜ್ಯವನ್ನು ಈ ಹಂತದ ಎಸ್​ಐಆರ್​​ನಲ್ಲಿ ಘೋಷಿಸಿಲ್ಲ. ಇದಕ್ಕೆ ಕಾರಣವೇನಿರಬಹುದು? ಎಂಬ ಕುತೂಹಲ ಮೂಡುವುದು ಸಹಜ. ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೀಡಿರುವ ಸ್ಪಷ್ಟನೆ ಇಲ್ಲಿದೆ.

ಅಸ್ಸಾಂನಲ್ಲಿ ಪೌರತ್ವ ವಿಷಯವು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿದೆ. ಹೀಗಾಗಿ, ಅಸ್ಸಾಂನಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಪ್ರತ್ಯೇಕವಾಗಿ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. “ಪೌರತ್ವ ಕಾಯ್ದೆಯಡಿ ಅಸ್ಸಾಂಗೆ ಪ್ರತ್ಯೇಕ ನಿಬಂಧನೆಗಳಿವೆ. ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಅಲ್ಲಿನ ಪೌರತ್ವ ಪರಿಶೀಲನೆ ಪೂರ್ಣಗೊಳ್ಳಲಿದೆ. ಜೂನ್ 24ರ SIR ಆದೇಶವು ಇಡೀ ದೇಶಕ್ಕೆ ಅನ್ವಯಿಸಿತ್ತು. ಆಗ ಇದು ಅಸ್ಸಾಂಗೆ ಅನ್ವಯಿಸಿರಲಿಲ್ಲ” ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: SIR in India: 12 ರಾಜ್ಯಗಳಲ್ಲಿ 2ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ; ಚುನಾವಣಾ ಆಯೋಗ ಘೋಷಣೆ

ಚುನಾವಣಾ ಆಯೋಗವು ಇಂದು ಎರಡನೇ ಹಂತದ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (SIR) ಮತದಾರರ ಪಟ್ಟಿಗಳನ್ನು ಘೋಷಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಪುದುಚೇರಿ, ಛತ್ತೀಸ್‌ಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಲಕ್ಷದ್ವೀಪದಲ್ಲಿ ನಾಳೆಯಿಂದಲೇ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಾರಂಭವಾಗಲಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ SIRನ ಎರಡನೇ ಹಂತವು 51 ಕೋಟಿ ಮತದಾರರನ್ನು ಒಳಗೊಳ್ಳಲಿದ್ದು, ಎಣಿಕೆ ಪ್ರಕ್ರಿಯೆಯು ನವೆಂಬರ್ 4ರಂದು ಪ್ರಾರಂಭವಾಗುತ್ತದೆ. ಚುನಾವಣಾ ಆಯೋಗದ ಪ್ರಕಾರ, ಮುದ್ರಣ ಮತ್ತು ತರಬೇತಿ ಹಂತವು ಅಕ್ಟೋಬರ್ 28ರಿಂದ ನವೆಂಬರ್ 3ರವರೆಗೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ