AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಓ ದೀದಿ ಎಂದು ಕರೆದ ಮೋದಿಯನ್ನೇಕೆ ಅನರ್ಹ ಮಾಡಿಲ್ಲ?, ಅವರಿಗೇನು ಬೇರೆ ಕಾನೂನು ಇದೆಯೇ?: ಟಿಎಂಸಿ

ದೀದಿ ಓ ದೀದಿ ಎಂದು ಸಿಎಂ ಅವರು ಕರೆದು ಮಹಿಳೆಯರನ್ನು ಅವಮಾನಿಸಿದ ಭಾರತದ ಪ್ರಧಾನಿಯ ಸದಸ್ಯತ್ವವನ್ನು ರದ್ದುಗೊಳಿಸಿಲ್ಲ, ಅವರ ಸದಸ್ಯತ್ವವನ್ನು ಏಕೆ ರದ್ದುಗೊಳಿಸಬಾರದು? ಅವರು ಎಲ್ಲಾ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ದೀದಿ ಓ ದೀದಿ ಎಂದು ಕರೆದ ಮೋದಿಯನ್ನೇಕೆ ಅನರ್ಹ ಮಾಡಿಲ್ಲ?, ಅವರಿಗೇನು ಬೇರೆ ಕಾನೂನು ಇದೆಯೇ?: ಟಿಎಂಸಿ
ಅಭಿಷೇಕ್ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 29, 2023 | 7:55 PM

Share

ಮುಖ್ಯಾಂಶಗಳು

  • ಪರಿಶಿಷ್ಟ ಜಾತಿಗೆ ಸೇರಿದ ಸಚಿವರ ವಿರುದ್ಧ ಮಾಡಿದ ಹೇಳಿಕೆಗಾಗಿ ಸುವೇಂದು ಅಧಿಕಾರಿ ವಿರುದ್ಧ ಒಂದು ತಿಂಗಳೊಳಗೆ ಪ್ರಕರಣ ದಾಖಲಿಸುತ್ತೇವೆ ಎಂದ ಟಿಎಂಸಿ
  • ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ದೀದಿ ಓ ದೀದಿ ಲೇವಡಿ ಕೂಗು ಮೂಲಕ ಪ್ರಧಾನಿ ಮೋದಿ ಎಲ್ಲಾ ಮಹಿಳೆಯರನ್ನು ಅವಮಾನಿಸಿದ್ದಾರೆ
  • ನಿಮಗೇನು ಪ್ರತ್ಯೇಕ ಕಾನೂನು ಇದೆಯೇ? ನಾನು ತೃಣಮೂಲ ಕಾಂಗ್ರೆಸ್ ಆಗಿರುವುದರಿಂದ ಕಾನೂನು ನನಗೆ ಬೇರೆ, ನೀವು ಬಿಜೆಪಿಯೊಂದಿಗೆ ಇರುವುದರಿಂದ ನಿಮಗೆ ಬೇರೆ ಇದೆಯೇ?

ಕೋಲ್ಕತ್ತಾ: ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC), ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ದೀದಿ ಓ ದೀದಿ ಎಂಬ ಹೇಳಿಕೆ ಟೀಕಿಸಿದ್ದು ಕಾನೂನಿನಲ್ಲಿ ಈ ರೀತಿ ತಾರತಮ್ಯ ಯಾಕೆ ಎಂದು ಪ್ರಶ್ನಿಸಿದೆ. ಪ್ರಧಾನಿ ಮೋದಿಯವರ ಉಪನಾಮದ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಗೆ(Rahul Gandhi) ಸೂರತ್ ನ್ಯಾಯಾಲಯದ ತೀರ್ಪನ್ನು ಪೂರ್ವನಿದರ್ಶನವಾಗಿ ತೆಗೆದುಕೊಂಡರೆ, ರಾಜ್ಯದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧವೂ ಮೊಕದ್ದಮೆ ಹೂಡಬೇಕು, ಶಿಕ್ಷೆ ವಿಧಿಸಬೇಕು ಮತ್ತು ಅನರ್ಹಗೊಳಿಸಬೇಕು ಎಂದು ಟಿಎಂಸಿ ಹೇಳಿದೆ.

ಪರಿಶಿಷ್ಟ ಜಾತಿಗೆ ಸೇರಿದ ಸಚಿವರ ವಿರುದ್ಧ ಮಾಡಿದ ಹೇಳಿಕೆಗಾಗಿ ಸುವೇಂದು ಅಧಿಕಾರಿ ವಿರುದ್ಧ ಒಂದು ತಿಂಗಳೊಳಗೆ ಪ್ರಕರಣ ದಾಖಲಿಸಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ, ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ದೀದಿ ಓ ದೀದಿ ಲೇವಡಿ ಕೂಗು ಮೂಲಕ ಪ್ರಧಾನಿ ಮೋದಿ ಎಲ್ಲಾ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.

ದೀದಿ ಓ ದೀದಿ ಎಂದು ಸಿಎಂ ಅವರು ಕರೆದು ಮಹಿಳೆಯರನ್ನು ಅವಮಾನಿಸಿದ ಭಾರತದ ಪ್ರಧಾನಿಯ ಸದಸ್ಯತ್ವವನ್ನು ರದ್ದುಗೊಳಿಸಿಲ್ಲ, ಅವರ ಸದಸ್ಯತ್ವವನ್ನು ಏಕೆ ರದ್ದುಗೊಳಿಸಬಾರದು? ಅವರು ಎಲ್ಲಾ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಕಳೆದ ವರ್ಷ ಪರಿಶಿಷ್ಟ ಜಾತಿಗೆ ಸೇರಿದ ತೃಣಮೂಲ ಶಾಸಕರೊಬ್ಬರ ಬಗ್ಗೆ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯವರ ಹೇಳಿಕೆಯನ್ನು ಬ್ಯಾನರ್ಜಿ ಬಿಜೆಪಿಗೆ ನೆನಪಿಸಿದ್ದಾರೆ.

ಇದನ್ನೂ ಓದಿ:Mamata Banerjee: ರಾಷ್ಟ್ರಗೀತೆಗೆ ಅಗೌರವ ಪ್ರಕರಣ: ಹೈಕೋರ್ಟ್​ನಲ್ಲಿ ಮಮತಾಗಿಲ್ಲ ರಿಲೀಫ್

ನವೆಂಬರ್‌ನಲ್ಲಿ ಟಿಎಂಸಿ ಈ ಬಗ್ಗೆ ವಿಡಿಯೊ ಟ್ವೀಟ್ ಮಾಡಿದ್ದು. ಅದರಲ್ಲಿ ಸುವೇಂದು ಅಧಿಕಾರಿ ತೃಣಮೂಲ ಶಾಸಕ ದೇಬನಾಥ್ ಹನ್ಸ್ಡಾ ಮತ್ತು ಸಚಿವ ಬಿರ್ಬಹಾ ಹನ್ಸ್ಡಾ ಅವರು ತಮ್ಮ ಬೂಟುಗಳ ಕೆಳಗೆ ಉಳಿದಿರುವ ಮಕ್ಕಳು ಎಂದು ಹೇಳಿದ್ದರು.

‘ಮೋದಿ ಓ ಮೋದಿ’ ಒಬಿಸಿ ಭಾವನೆಗಳಿಗೆ ಧಕ್ಕೆ ತಂದರೆ ಮತ್ತು ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆಯಾದರೆ, ವಿರೋಧ ಪಕ್ಷದ ನಾಯಕನಿಗೆ ಯಾಕೆ ಎರಡು ವರ್ಷ ಏಕೆ ಶಿಕ್ಷೆ ವಿಧಿಸಬಾರದು? ಎಂದು ಬ್ಯಾನರ್ಜಿ ಕೇಳಿದ್ದಾರೆ.

ನಿಮಗೇನು ಪ್ರತ್ಯೇಕ ಕಾನೂನು ಇದೆಯೇ? ನಾನು ತೃಣಮೂಲ ಕಾಂಗ್ರೆಸ್ ಆಗಿರುವುದರಿಂದ ಕಾನೂನು ನನಗೆ ಬೇರೆ, ನೀವು ಬಿಜೆಪಿಯೊಂದಿಗೆ ಇರುವುದರಿಂದ ನಿಮಗೆ ಬೇರೆ ಇದೆಯೇ? ನಾನು ನಮ್ಮ ಕಾನೂನು ಘಟಕವನ್ನು ಕೇಳಲು ಬಯಸುತ್ತೇನೆ, ವಿಶೇಷವಾಗಿ ವಕೀಲರಾಗಿರುವವರು ಈ ಸೂರತ್ ಕೋರ್ಟ್ ತೀರ್ಪನ್ನು ಅಸ್ತ್ರವಾಗಿ ಬಳಸಬೇಕೆಂದು ನಾನು ಬಯಸುತ್ತೇನೆ. ಈ ಕುರಿತು ಒಂದು ತಿಂಗಳಲ್ಲಿ ಅರ್ಜಿ ಸಲ್ಲಿಸುವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ