AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಪ್ರಮಾಣವಚನ ಸಮಾರಂಭದಿಂದ ಮಾಜಿ ಸಚಿವ ಹರ್ಷವರ್ಧನ್ ಹೊರ ನಡೆದಿದ್ದೇಕೆ?

ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕೃತ ನಿವಾಸ ರಾಜ್ ನಿವಾಸದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಿತು. "ಏನಾಯ್ತು ಸಾರ್?" ಎಂದು ವ್ಯಕ್ತಿಯೊಬ್ಬರು ಕೇಳುತ್ತಿರುವುದು ವಿಡಿಯೊದಲ್ಲಿ ಕೇಳಿಸುತ್ತದೆ. ಅದಕ್ಕೆ ಹರ್ಷವರ್ಧನ್ ಅವರು ಸಂಸತ್ತಿನ ಸದಸ್ಯರಿಗೆ ಆಸನಗಳನ್ನು ಮೀಸಲು ಇರಿಸಿರಲಿಲ್ಲ...

ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಪ್ರಮಾಣವಚನ ಸಮಾರಂಭದಿಂದ ಮಾಜಿ ಸಚಿವ ಹರ್ಷವರ್ಧನ್ ಹೊರ ನಡೆದಿದ್ದೇಕೆ?
ಸಮಾರಂಭದಿಂದ ಹೊರಹೋಗುತ್ತಿರುವ ಮಾಜಿ ಸಚಿವ ಹರ್ಷವರ್ಧನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 26, 2022 | 4:38 PM

ದೆಹಲಿ: ದೆಹಲಿಯ  ನೂತನ ಲೆಫ್ಟಿನೆಂಟ್ ಗವರ್ನರ್ (lieutenant governor) ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರದ ಮಾಜಿ ಸಚಿವ ಡಾ.ಹರ್ಷವರ್ಧನ್ (Dr. Harshvardhan) ಅವರು ಸಂಸದರಿಗೆ ಸ್ಥಾನಗಳನ್ನು ಮೀಸಲಿಟ್ಟಿಲ್ಲ ಎಂದು ದೂರಿ ಕಾರ್ಯಕ್ರಮದಿಂದ ಹೊರನಡೆದಿರುವ ಘಟನೆ ನಡೆದಿದೆ. “ದೇಶದ ಗೋದಿ ಮೀಡಿಯಾಗಳಿಗೆ ಈ ವಿಡಿಯೊವನ್ನು ಅಪ್‌ಲೋಡ್ ಮಾಡಲು ಧೈರ್ಯವಿದೆಯೇ? ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ಸಂಸದ ಡಾ ಹರ್ಷವರ್ಧನ್ ಅವರಿಗೆ ಕುಳಿತುಕೊಳ್ಳಲು ಸೀಟು ಸಿಗದಿದ್ದಕ್ಕಾಗಿ ಅವರು ತೀವ್ರ ಕೋಪಗೊಂಡಿರುವಂತೆ ತೋರುತ್ತಿದೆ. ಬಿಜೆಪಿಯ ಮಾಜಿ ಸಚಿವರು ಮತ್ತು ಹಿರಿಯ ನಾಯಕರಿಗೆ ಆದ ಅವಸ್ಥೆ ಇದು ಎಂದು ಎಂದು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಉಸ್ತುವಾರಿ ರೋಹನ್ ಗುಪ್ತಾ ಟ್ವೀಟ್ ಮಾಡಿದ್ದಾರೆ. ಗುಪ್ತಾ ಅವರು ಮಾಜಿ ಕೇಂದ್ರ ಆರೋಗ್ಯ ಸಚಿವರು ಸ್ಥಳದಿಂದ ನಿರ್ಗಮಿಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.  ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕೃತ ನಿವಾಸ ರಾಜ್ ನಿವಾಸದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಿತು. “ಏನಾಯ್ತು ಸಾರ್?” ಎಂದು ವ್ಯಕ್ತಿಯೊಬ್ಬರು ಕೇಳುತ್ತಿರುವುದು ವಿಡಿಯೊದಲ್ಲಿ ಕೇಳಿಸುತ್ತದೆ. ಅದಕ್ಕೆ ಹರ್ಷವರ್ಧನ್ ಅವರು ಸಂಸತ್ತಿನ ಸದಸ್ಯರಿಗೆ ಆಸನಗಳನ್ನು ಮೀಸಲು ಇರಿಸಿರಲಿಲ್ಲ ಎಂದು ಹಿಂದಿಯಲ್ಲಿ ಹೇಳುತ್ತಿರುವುದು ಕೇಳಿಸುತ್ತದೆ.

ಈ ವಿಡಿಯೊ ಟ್ವಿಟರ್​​ನಲ್ಲಿ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿದೆ. ವಿನಯ್ ಕುಮಾರ್ ಸಕ್ಸೇನಾ ಅವರನ್ನು ಸೋಮವಾರ ದೆಹಲಿಯ 22 ನೇ ಲೆಫ್ಟಿನೆಂಟ್ ಜನರಲ್ ಆಗಿ ನೇಮಿಸಲಾಯಿತು.

ಇದನ್ನೂ ಓದಿ
Image
ದೆಹಲಿ: ಸ್ಟೇಡಿಯಂನಿಂದ ಕ್ರೀಡಾಪಟುಗಳಿಗೆ ಹೊರಹೋಗಲು ಹೇಳಿ ಟ್ರ್ಯಾಕ್​​ನಲ್ಲಿ ನಾಯಿ ಜತೆ ಐಎಎಸ್ ಅಧಿಕಾರಿ ವಾಕಿಂಗ್; ಅಥ್ಲೀಟ್​​ಗಳ ಆಕ್ರೋಶ
Image
Vinay Kumar Saxena ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್‌ ಕುಮಾರ್ ಸಕ್ಸೇನಾ ನೇಮಕ
Image
Delhi LG Anil Baijal ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ
Image
ತನ್ನನ್ನು ಕಡೆಗಣಿಸಿ ಕೇವಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಲೆಫ್ಟಿನೆಂಟ್ ಗವರ್ನರ್ ಬಗ್ಗೆ ದೆಹಲಿ ಸರ್ಕಾರಕ್ಕೆ ತೀವ್ರ ಅಸಮಾಧಾನ

ದೆಹಲಿಯ ಚಾಂದಿನಿ ಚೌಕ್ ಕ್ಷೇತ್ರದ ಸಂಸದರಾಗಿರುವ ಡಾ ಹರ್ಷವರ್ಧನ್ ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಅವರ ನಂತರ ಹಾಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅಧಿಕಾರ ವಹಿಸಿಕೊಂಡರು.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Thu, 26 May 22

ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ