AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ ಕಲಶ ಯಾತ್ರೆಯ ವಿಶೇಷತೆಯೇನು?; ಈ ರೈಲುಗಳ ಮಾರ್ಗವೇನು?

ಅಮೃತ್ ಕಲಶ ಯಾತ್ರೆಯು ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ರಾಷ್ಟ್ರೀಯ ವೀರರಿಗೆ ನೀಡುವ ಗೌರವವಾಗಿದೆ. 'ಮೇರಿ ಮಾಟಿ ಮೇರಾ ದೇಶ್' ಅಭಿಯಾನವು ತಮ್ಮ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಭಾರತೀಯ ಸೇನೆಯ ಸೈನಿಕರಿಗೆ ಗೌರವವಾಗಿದೆ.

ಅಮೃತ ಕಲಶ ಯಾತ್ರೆಯ ವಿಶೇಷತೆಯೇನು?; ಈ ರೈಲುಗಳ ಮಾರ್ಗವೇನು?
ಅಮೃತ್ ಕಲಶ ಯಾತ್ರೆImage Credit source: Live Mint
ಸುಷ್ಮಾ ಚಕ್ರೆ
|

Updated on:Oct 27, 2023 | 11:37 AM

Share

‘ಮೇರಿ ಮಾಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ಭಾಗವಹಿಸುವವರಿಗೆ ನವದೆಹಲಿಗೆ ಆಗಮಿಸಲು ಹಲವಾರು ಅಮೃತ ಕಲಶ ವಿಶೇಷ ರೈಲುಗಳನ್ನು ದೇಶಾದ್ಯಂತ ವ್ಯವಸ್ಥೆ ಮಾಡಲಾಗಿದೆ. ಈ ರೈಲುಗಳು ಇಂದಿನಿಂದ ಅಕ್ಟೋಬರ್ 27ರಿಂದ ನವದೆಹಲಿಗೆ ಸಂಚರಿಸಲಿವೆ. ದಕ್ಷಿಣ ಮಧ್ಯ ರೈಲ್ವೆ (SCR) ಅಕ್ಟೋಬರ್ 28ರಂದು ‘ಅಮೃತ್ ಕಲಶ ಯಾತ್ರಾ’ ಎಂಬ ವಿಶೇಷ ರೈಲು ಸಂಚಾರವನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದ್ದು, ಅದು ವಿಜಯವಾಡದಿಂದ ನವದೆಹಲಿಗೆ ಚಲಿಸಲಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ “ಮೇರಿ ಮಾಟಿ ಮೇರಾ ದೇಶ್” ಅಭಿಯಾನದ ಭಾಗವಾಗಿ ಅಕ್ಟೋಬರ್ 25ರಂದು ರಾಜ್ ನಿವಾಸ್‌ನಿಂದ “ಅಮೃತ್ ಕಲಶ ಯಾತ್ರೆ”ಗೆ ಚಾಲನೆ ನೀಡಿದ್ದಾರೆ. ಮೇರಿ ಮಾತಿ ಮೇರಾ ದೇಶ್ (MMMD) ಅಭಿಯಾನವು ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೇನಾ ಯೋಧರಿಗೆ ಗೌರವ ಸಲ್ಲಿಸುವುದಾಗಿದೆ. ಇದರ ಭಾಗವಾಗಿ ರಾಷ್ಟ್ರದಾದ್ಯಂತದ ಮನೆಗಳಿಂದ ಮಣ್ಣು ಮತ್ತು ಅಕ್ಕಿಯನ್ನು ಸಂಗ್ರಹಿಸಿ ಅಮೃತ ಕಲಶ ಪಾತ್ರೆಗಳಲ್ಲಿ ಇರಿಸಲಾಗುವುದು. ನವದೆಹಲಿಯ ಇಂಡಿಯಾ ಗೇಟ್ ಬಳಿಯ ಕರ್ತವ್ಯಪಥ್‌ನಲ್ಲಿ ‘ಅಮೃತ್ ವಾಟಿಕಾ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಸ್ಮಾರಕಗಳ ರಚನೆಯಲ್ಲಿ ಈ ವಸ್ತುಗಳು ಪ್ರಮುಖ ಪಾತ್ರ ವಹಿಸುತ್ತವೆ.

ಇದನ್ನೂ ಓದಿ: ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ; ಬಿಎಸ್​ಎಫ್ ಯೋಧರು ಸೇರಿ ಐವರಿಗೆ ಗಾಯ

ಇಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುವಾಹಟಿಯಿಂದ ಅಮೃತ ಕಲಶ ಯಾತ್ರೆಗೆ ಚಾಲನೆ ನೀಡಿದರು. ಮಣ್ಣು ತುಂಬಿದ ಒಟ್ಟು 270 ಕಲಶಗಳನ್ನು ಸಾಗಿಸುವ ದೆಹಲಿಗೆ ಹೋಗುವ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಅವರು ಚಾಲನೆ ನೀಡಿದರು. ಈ ವರ್ಷ ಸೆಪ್ಟೆಂಬರ್ 20ರಂದು ಅಸ್ಸಾಂನಲ್ಲಿ ಅಮೃತ ಕಲಶ ಯಾತ್ರೆ ಪ್ರಾರಂಭವಾಗಿತ್ತು. ಈ ಯಾತ್ರೆಯ ಭಾಗವಾಗಿ, ಅಸ್ಸಾಂನ ಎಲ್ಲಾ ಗ್ರಾಮಗಳು ಮತ್ತು ಮುನ್ಸಿಪಲ್ ವಾರ್ಡ್‌ಗಳ ಮನೆಗಳಿಂದ ಮಣ್ಣನ್ನು ಸಂಗ್ರಹಿಸಿ ಗುವಾಹಟಿಯಲ್ಲಿ ಒಟ್ಟಿಗೆ ಮಿಶ್ರಣ ಮಾಡಿ ಮಡಕೆಗಳಿಗೆ ಹಾಕಲಾಯಿತು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ

ಈ ವಿಶೇಷ ರೈಲು ಅಕ್ಟೋಬರ್ 28ರ ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯವಾಡದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ತ್ರಿಪುರಾ ಮತ್ತು ಮೇಘಾಲಯದ ರೈಲು ಇಂದು ದೆಹಲಿಗೆ ತಲುಪಲಿದ್ದು, ಅಸ್ಸಾಂ ಮತ್ತು ಸಿಕ್ಕಿಂ ರೈಲುಗಳು ಅಕ್ಟೋಬರ್ 28ರಂದು ತಲುಪಲಿವೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

ಅಮೃತ್ ಕಲಶ ಯಾತ್ರೆಯು ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ರಾಷ್ಟ್ರೀಯ ವೀರರಿಗೆ ನೀಡುವ ಗೌರವವಾಗಿದೆ. ‘ಮೇರಿ ಮಾಟಿ ಮೇರಾ ದೇಶ್’ (MMMD) ಅಭಿಯಾನವು ತಮ್ಮ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಭಾರತೀಯ ಸೇನೆಯ ಸೈನಿಕರಿಗೆ ಗೌರವವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Fri, 27 October 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ