AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: “ದಿ ಕೇರಳ ಸ್ಟೋರಿ” ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ.

The Kerala Story: ದಿ ಕೇರಳ ಸ್ಟೋರಿ ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 3:55 PM

Share

ದೆಹಲಿ:ದಿ ಕೇರಳ ಸ್ಟೋರಿ(The Kerala Story) ಸಿನಿಮಾವನ್ನು ಯಾಕೆ ನಿಮ್ಮ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ ಎಂದು ಮೇ 12ರಂದು ಸುಪ್ರೀಂ ಕೋರ್ಟ್​​ ಪ್ರಶ್ನೆ ಮಾಡಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ನೋಟಿಸ್​​ ನೀಡಲಾಗಿತ್ತು. ಇದೀಗ ಈ ನೋಟಿಸ್​​ಗೆ ಉತ್ತರಿಸಿದ ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ. ಮಲ್ಟಿಪ್ಲೆಕ್ಸ್​​​ ಮಾಲೀಕರು ಮೇ7 ರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇದಕ್ಕೆ ಕಾರಣ ಪ್ರಸಿದ್ಧ ನಟರ ಕೊರತೆ, ಕಳಪೆ ಪ್ರದರ್ಶನ ಮತ್ತು ಹೆಚ್ಚಾಗಿ ಈ ಚಿತ್ರವನ್ನು ನೋಡು ಜನರೇ ಇರಲಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉತ್ತರಿಸಿದೆ. ಜತೆಗೆ ಇದು ಹಿಂದಿ ಭಾಷೆಯಲ್ಲಿ ಮೇ 5ರಂದು 19 ಮಲ್ಟಿಪ್ಲೆಕ್ಸ್​​​ಗಳಲ್ಲಿ ​​ ಬಿಡುಗಡೆಯಾಗಿದೆ ಎಂದು ಹೇಳಿದೆ.

ಈ ಚಿತ್ರದಲ್ಲಿ ಯಾವುದೇ ಜನಪ್ರಿಯ ನಟರು ಇಲ್ಲ ಅದಕ್ಕಾಗಿ ಕಳಪೆ ಪ್ರದರ್ಶನಗೊಂಡು ಬಾಕ್ಸ್​​ ಆಫೀಸ್​​ಗೆ​​ ಭಾರೀ ತೊಂದರೆಯಾಗಿದೆ ಎಂದು ಹೇಳಿದೆ. ಇದರ ಜತೆಗೆ ಈ ಸಿನಿಮಾವನ್ನು ನೋಡಲು ಅಷ್ಟೊಂದು ಜನ ಬಂದಿಲ್ಲ ಎಂದು ಸ್ವತಃ ಚಲನಚಿತ್ರ ಪ್ರದರ್ಶಕರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇನ್ನೂ ಈ ಸಿನಿಮಾ ನೋಡು ಜನ ಬರಬೇಕು ಎಂದು ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:The Kerala Story: ದಿ ಕೇರಳ ಸ್ಟೋರಿ’ ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ

ದಿ ಕೇರಳ ಸ್ಟೋರಿಯಲ್ಲಿ ಲವ್​​ ಜಿಹಾದ್​​ ಮತ್ತು ಅವರನ್ನು ಭಯೋತ್ಪಾದನೆ ಕೃತ್ಯಕ್ಕೆ ಬಳಸಲಾಗುತ್ತಿದೆ ಎಂದು ಇದರಲ್ಲಿ ಉದ್ದೇಶಿತ ಪೂರಕವಾಗಿ ತಿಳಿಸಲಾಗುತ್ತಿದೆ. ಇದು ದುರುದ್ದೇಶಪೂರಿತ ಪ್ರಚಾರವಾಗಿದೆ. ಮುಸ್ಲಿಂ ಸಮುದಾಯದ ಮೇಲೆ ಇದು ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತಿದೆ. ಇದರಲ್ಲಿ ಮುಸ್ಲಿಂ ಯುವಕರನ್ನು ಟಾರ್ಗೆಟ್​​ ಮಾಡಲಾಗಿದೆ ಎಂದು ಅನೇಕರು ಸುಪ್ರೀಂಗೆ ಅರ್ಜಿ ಹಾಕಿದ್ದಾರೆ. ತಮಿಳುನಾಡು ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿಲ್ಲ ಆದರೆ ಥಿಯೇಟರ್ ಮಾಲೀಕರು ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಅದನ್ನು ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Tue, 16 May 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?