AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: “ದಿ ಕೇರಳ ಸ್ಟೋರಿ” ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ.

The Kerala Story: ದಿ ಕೇರಳ ಸ್ಟೋರಿ ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 3:55 PM

Share

ದೆಹಲಿ:ದಿ ಕೇರಳ ಸ್ಟೋರಿ(The Kerala Story) ಸಿನಿಮಾವನ್ನು ಯಾಕೆ ನಿಮ್ಮ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ ಎಂದು ಮೇ 12ರಂದು ಸುಪ್ರೀಂ ಕೋರ್ಟ್​​ ಪ್ರಶ್ನೆ ಮಾಡಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ನೋಟಿಸ್​​ ನೀಡಲಾಗಿತ್ತು. ಇದೀಗ ಈ ನೋಟಿಸ್​​ಗೆ ಉತ್ತರಿಸಿದ ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ. ಮಲ್ಟಿಪ್ಲೆಕ್ಸ್​​​ ಮಾಲೀಕರು ಮೇ7 ರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇದಕ್ಕೆ ಕಾರಣ ಪ್ರಸಿದ್ಧ ನಟರ ಕೊರತೆ, ಕಳಪೆ ಪ್ರದರ್ಶನ ಮತ್ತು ಹೆಚ್ಚಾಗಿ ಈ ಚಿತ್ರವನ್ನು ನೋಡು ಜನರೇ ಇರಲಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉತ್ತರಿಸಿದೆ. ಜತೆಗೆ ಇದು ಹಿಂದಿ ಭಾಷೆಯಲ್ಲಿ ಮೇ 5ರಂದು 19 ಮಲ್ಟಿಪ್ಲೆಕ್ಸ್​​​ಗಳಲ್ಲಿ ​​ ಬಿಡುಗಡೆಯಾಗಿದೆ ಎಂದು ಹೇಳಿದೆ.

ಈ ಚಿತ್ರದಲ್ಲಿ ಯಾವುದೇ ಜನಪ್ರಿಯ ನಟರು ಇಲ್ಲ ಅದಕ್ಕಾಗಿ ಕಳಪೆ ಪ್ರದರ್ಶನಗೊಂಡು ಬಾಕ್ಸ್​​ ಆಫೀಸ್​​ಗೆ​​ ಭಾರೀ ತೊಂದರೆಯಾಗಿದೆ ಎಂದು ಹೇಳಿದೆ. ಇದರ ಜತೆಗೆ ಈ ಸಿನಿಮಾವನ್ನು ನೋಡಲು ಅಷ್ಟೊಂದು ಜನ ಬಂದಿಲ್ಲ ಎಂದು ಸ್ವತಃ ಚಲನಚಿತ್ರ ಪ್ರದರ್ಶಕರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇನ್ನೂ ಈ ಸಿನಿಮಾ ನೋಡು ಜನ ಬರಬೇಕು ಎಂದು ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:The Kerala Story: ದಿ ಕೇರಳ ಸ್ಟೋರಿ’ ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ

ದಿ ಕೇರಳ ಸ್ಟೋರಿಯಲ್ಲಿ ಲವ್​​ ಜಿಹಾದ್​​ ಮತ್ತು ಅವರನ್ನು ಭಯೋತ್ಪಾದನೆ ಕೃತ್ಯಕ್ಕೆ ಬಳಸಲಾಗುತ್ತಿದೆ ಎಂದು ಇದರಲ್ಲಿ ಉದ್ದೇಶಿತ ಪೂರಕವಾಗಿ ತಿಳಿಸಲಾಗುತ್ತಿದೆ. ಇದು ದುರುದ್ದೇಶಪೂರಿತ ಪ್ರಚಾರವಾಗಿದೆ. ಮುಸ್ಲಿಂ ಸಮುದಾಯದ ಮೇಲೆ ಇದು ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತಿದೆ. ಇದರಲ್ಲಿ ಮುಸ್ಲಿಂ ಯುವಕರನ್ನು ಟಾರ್ಗೆಟ್​​ ಮಾಡಲಾಗಿದೆ ಎಂದು ಅನೇಕರು ಸುಪ್ರೀಂಗೆ ಅರ್ಜಿ ಹಾಕಿದ್ದಾರೆ. ತಮಿಳುನಾಡು ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿಲ್ಲ ಆದರೆ ಥಿಯೇಟರ್ ಮಾಲೀಕರು ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಅದನ್ನು ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Tue, 16 May 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ