AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ರೈಲ್ವೆ ಟಿಕೆಟ್ ದರದಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ಏಕಿಲ್ಲ? ಸಚಿವ ಅಶ್ವಿನಿ ವೃಷ್ಣವ್ ಹೇಳಿದ್ದೇನು?

ಹಿರಿಯ ನಾಗರಿಕರಿಗೆ ರೈಲು ದರದಲ್ಲಿ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮರು ಆರಂಭಿಸುವ ಆಲೋಚನೆಯಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು,

ಭಾರತೀಯ ರೈಲ್ವೆ ಟಿಕೆಟ್ ದರದಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ಏಕಿಲ್ಲ?  ಸಚಿವ ಅಶ್ವಿನಿ ವೃಷ್ಣವ್ ಹೇಳಿದ್ದೇನು?
Ashwini VaishnavImage Credit source: Zee Business
TV9 Web
| Edited By: |

Updated on:Jul 23, 2022 | 6:41 PM

Share

ಹಿರಿಯ ನಾಗರಿಕರಿಗೆ ರೈಲು ದರದಲ್ಲಿ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮರು ಆರಂಭಿಸುವ ಆಲೋಚನೆಯಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು, ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ಮಹೇಶ್ ಉತ್ತರ ನೀಡಿದ್ದಾರೆ. ಭಾರತೀಯ ರೈಲ್ವೆಯು ಪ್ರಯಾಣಿಕರ ದರಗಳು ಮತ್ತು ಅಗತ್ಯ ಸರಕುಗಳಿಗೆ ಹೆಚ್ಚು ರಿಯಾಯಿತಿ ನೀಡುತ್ತದೆ. 2019-20ರಲ್ಲಿ ಸಬ್ಸಿಡಿಯಿಂದ ರೈಲ್ವೇ ಒಟ್ಟು 64,523 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ ಎಂದರು.

ವೆಚ್ಚಕ್ಕಿಂತ ಕಡಿಮೆ ದರದ ದರಗಳು ಮತ್ತು ಇತರ ಸಾಮಾಜಿಕ ಸೇವಾ ಜವಾಬ್ದಾರಿಗಳಿಂದಾಗಿ ರೂ 45,000 ಕೋಟಿ ನಷ್ಟ ಉಂಟಾಗಿದೆ. ಸಬರ್ಬನ್ ಸೇವೆಗಳ ಕಡಿಮೆ ಬೆಲೆಯಿಂದಾಗಿ ರೂ 7,000 ಕೋಟಿ ರೂ ನಷ್ಟವಾಗಿದೆ. (ಪ್ರತಿ ಪ್ರಯಾಣಿಕರಿಗೆ 19 ಪೈಸೆ) -ಪ್ರಯಾಣಿಕರ ದರದಲ್ಲಿ ವಿವಿಧ ರಿಯಾಯಿತಿಯಿಂದಾಗಿ 2000 ಕೋಟಿ ರೂ ನಷ್ಟುಂಟಾಗಿದೆ.

– ಪಾರ್ಸೆಲ್, ಲಗೇಜ್, ಪೋಸ್ಟಲ್ ಮತ್ತು ಕೇಟರಿಂಗ್ ಸೇವೆಗಳಲ್ಲಿನ ನಷ್ಟದಿಂದಾಗಿ 5800 ಕೋಟಿ ರೂ. ನಷ್ಟ ಅನುಭವಿಸಿದೆ. ಈಗಾಗಲೇ ಸಾಕಷ್ಟು ರಿಯಾಯಿತಿ ಇರುವುದರಿಂದ ಇದೀಗ ಮತ್ತೆ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಿದರೆ ಇಲಾಖೆ ಮತ್ತಷ್ಟು ಪೆಟ್ಟು ತಿನ್ನಲಿದೆ ಎಂದು ಮನದಟ್ಟು ಮಾಡಿಕೊಟ್ಟರು.

ಮಾರ್ಚ್​ 2020ರಲ್ಲಿ ಕೋವಿಡ್ ಸಂದರ್ಭದಲ್ಲಿ ಹೇರಲಾಗಿದ್ದ ಲಾಕ್​ಡೌನ್​ಗೆ ಮುಂಚಿತವಾಗಿ ಹಿರಿಯ ನಾಗರಿಕರಿಗೆ ರೈಲು ದರಗಳಲ್ಲಿ ನೀಡಲಾಗುತ್ತಿದ್ದ ಶೇ.50ರಷ್ಟು ರಿಯಾಯಿತಿಯನ್ನು ಭಾರತೀಯ ರೈಲ್ವೆ ಅಂತ್ಯಗೊಳಿಸಿತ್ತು.

ಕಡಿಮೆ ಪ್ರಯಾಣ ದರ, ರಿಯಾಯಿತಿಗಳ ಕಾರಣ ಇಲಾಖೆ ಈಗಾಗಲೇ ಬಹಳಷ್ಟು ನಷ್ಟ ಅನುಭವಿಸಿದೆ. ವಿವಿಧ ದರ್ಜಗಳಲ್ಲಿನ ಪ್ರಯಾಣದರಗಳು ಕಡಿಮೆ ಇದೆ ಎಂದು ಸಚಿವರು ವಿವರಣೆ ನೀಡಿದರು.  ಕೋವಿಡ್ ಪರಿಸ್ಥಿತಿ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಟಿಕೆಟ್‌ಗಳ ಆದಾಯ ಕಡಿಮೆಯಾಗಿದೆ.

ಕೊರೊನಾ ಸೋಂಕು ಹಿರಿಯ ನಾಗರಿಕರಿಗೆ ಸುಲಭವಾಗಿ ತಗುಲಬಹುದಾದ್ದರಿಂದ ಅವರನ್ನು ಪ್ರಯಾಣದಿಂದ ನಿರುತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು.

2019-20ಕ್ಕೆ ಹೋಲಿಕೆ ಮಾಡಿದರೆ ಆರ್ಥಿಕ ನಷ್ಟವಾಗುತ್ತಿದೆ. ರಿಯಾಯಿತಿ ನೀಡುವುದರಿಂದ ಹೆಚ್ಚಿನ ಹೊರೆಯಾಗಲಿದೆ ಎಂದು ಸಚಿವರು ತಿಳಿಸಿದರು.

Published On - 6:39 pm, Sat, 23 July 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ