AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar: ಡೋಂಟ್​ಕೇರ್ ಅಂದ್ರೆ ಹೇಗೆ; ಬಿಜೆಪಿಯೊಂದಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಮುನಿಸಿಗಿದೆ 5 ಕಾರಣಗಳು

Amit Shash VS JDU: ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಈ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದ ಐದು ಮುಖ್ಯ ಅಂಶಗಳಿವು...

Nitish Kumar: ಡೋಂಟ್​ಕೇರ್ ಅಂದ್ರೆ ಹೇಗೆ; ಬಿಜೆಪಿಯೊಂದಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಮುನಿಸಿಗಿದೆ 5 ಕಾರಣಗಳು
ಅಮಿತ್ ಶಾ ಮತ್ತು ನಿತೀಶ್ ಕುಮಾರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 08, 2022 | 7:57 AM

Share

ದೆಹಲಿ: ಬಿಹಾರದ ಮುಖ್ಯಮಂತ್ರಿ ಮತ್ತು ಕೇಂದ್ರದ ಆಡಳಿತಾರೂಢ ಎನ್​ಡಿಎ ಮೈತ್ರಿಕೂಟದ ಪ್ರಮುಖ ಪಕ್ಷ ‘ಸಂಯುಕ್ತ ಜನತಾ ದಳ’ದ (Janata Dal United – JDU) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಮಂಗಳವಾರ ಪಕ್ಷದ ಸಭೆ ಕರೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ವಿರುದ್ಧ ಸಿಟ್ಟಿಗೆದ್ದಿರುವ ಅವರು, ಹಲವು ವೇದಿಕೆಗಳಲ್ಲಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಈ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದ ಐದು ಮುಖ್ಯ ಅಂಶಗಳಿವು…

  1. ಬಿಹಾರ ವಿಧಾನಸಭೆಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರ ಸ್ಥಾನಚ್ಯುತಿಗೆ ನಿತೀಶ್ ಕುಮಾರ್ ಆಗ್ರಹಿಸುತ್ತಿದ್ದಾರೆ. ಸಿನ್ಹಾ ಅವರ ವಿಚಾರದಲ್ಲಿ ನಿತೀಶ್ ಹಲವು ಬಾರಿ ಸಿಟ್ಟಿಗೆದ್ದಿದ್ದು ಉಂಟು. ತಮ್ಮ ಸರ್ಕಾರದ ಬಗ್ಗೆ ಪ್ರಶ್ನೆಗಳನ್ನು ಕೇಳುವ ಸಿನ್ಹಾ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆಯುತ್ತಿಲ್ಲ ಎಂದು ನಿತೀಶ್ ಹೇಳಿದ್ದಾರೆ.
  2. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ವಿಸ್ತರಿಸಿದಾಗ ತಮ್ಮ ಪಕ್ಷ ಜೆಡಿಯುಗೆ ಕೇವಲ ಒಂದೇಒಂದು ಸಂಪುಟ ಸ್ಥಾನ ನೀಡಿದ್ದು ನಿತೀಶ್ ಅವರಿಗೆ ಸಿಟ್ಟು ತರಿಸಿತ್ತು. ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಿಸಿದ ಅವರು, ತಮ್ಮ ಪಕ್ಷದ 8 ಮಂದಿಗೆ ಸಚಿವ ಸ್ಥಾನ ನೀಡಿ, ಬಿಜೆಪಿಯ ಒಬ್ಬರಿಗೆ ಮಾತ್ರ ಸಚಿವ ಸಂಪುಟದಲ್ಲಿ ಅವಕಾಶ ನೀಡಿ ಎದಿರೇಟು ಕೊಟ್ಟಿದ್ದರು.
  3. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎನ್ನುವ ಚಿಂತನೆಯನ್ನು ನಿತೀಶ್ ಕುಮಾರ್ ಒಪ್ಪುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ ಈ ವಿಚಾರವನ್ನು ವಿರೋಧ ಪಕ್ಷಗಳು ಸಹ ಒಪ್ಪಿಲ್ಲ. ಈ ವಿಚಾರದಲ್ಲಿ ಜೆಡಿಯು ವಿರೋಧ ಪಕ್ಷಗಳ ವಿಚಾರಧಾರೆಯನ್ನೇ ಪ್ರತಿಪಾದಿಸುತ್ತಿದೆ.
  4. ಬಿಹಾರ ಸಚಿವ ಸಂಪುಟದಲ್ಲಿ ಬಿಜೆಪಿಯ ಯಾರಿಗೆಲ್ಲಾ ಸಂಪುಟ ಸ್ಥಾನ ನೀಡಬೇಕು ಎನ್ನುವ ಬಗ್ಗೆ ತಮ್ಮದೇ ಅಂತಿಮ ನಿರ್ಧಾರವಾಗಬೇಕು ಎಂದು ನಿತೀಶ್​ ಕುಮಾರ್ ಬಯಸಿದ್ದಾರೆ. ಆದರೆ ಬಿಜೆಪಿಯ ಬಿಹಾರ ಘಟಕದ ಮೇಲೆ ಬಿಗಿಹಿಡಿತ ಹೊಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದಕ್ಕೆ ಅವಕಾಶ ನೀಡುತ್ತಿಲ್ಲ. ನಿತೀಶ್ ಅವರಿಗೆ ಆಪ್ತರಾಗಿರುವ ಬಿಜೆಪಿಯ ಸುಶೀಲ್ ಮೋದಿ ಅವರಿಗೆ ಬೇರೊಂದು ಜವಾಬ್ದಾರಿ ನೀಡಿ, ಬಿಹಾರದಿಂದ ಹೊರಗೆ ಕಳಿಸಲಾಗಿದೆ.
  5. ಕೇಂದ್ರ ಸಚಿವ ಸಂಪುಟಕ್ಕೆ ಜೆಡಿಯು ಸಂಸದರನ್ನು ಸೇರಿಸಿಕೊಳ್ಳುವ ವೇಳೆಯಲ್ಲಿಯೂ ನಿತೀಶ್ ಅವರ ಮಾತಿಗೆ ಬಿಜೆಪಿ ಮನ್ನಣೆ ನೀಡದಿರುವುದೂ ಸಹ ಎರಡೂ ಪಕ್ಷಗಳ ನಡುವೆ ಭಿನ್ನಮತ ಹೆಚ್ಚಾಗಲು ಮತ್ತೊಂದು ಕಾರಣ ಎನಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಆರ್​ಸಿಪಿ ಸಿಂಗ್ ಅವರು ನಿತೀಶ್ ಅವರನ್ನು ಲೆಕ್ಕಕ್ಕೆ ಇರಿಸದೇ ನೇರವಾಗಿ ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ಸಂಪರ್ಕ ಸಾಧಿಸಿದ್ದರು. ಸಿಂಗ್ ನಿನ್ನೆಯಷ್ಟೇ ಜೆಡಿಯುನಿಂದ ಹೊರನಡೆದರು. ‘ನಮ್ಮ ಪಕ್ಷವು ಕೇಂದ್ರ ಸಚಿವ ಸಂಪುಟಕ್ಕೆ ಏಕೆ ಸೇರಬೇಕು. ನಾವು ಸೇರುವುದಿಲ್ಲ ಎಂದು 2019ರಲ್ಲಿಯೇ ನಿತೀಶ್ ಕುಮಾರ್ ನಿರ್ಧರಿಸಿದ್ದರು’ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಾಜನ್ ಸಿಂಗ್ ಹೇಳಿದ್ದರು.

Published On - 7:57 am, Mon, 8 August 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!