Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar: ಡೋಂಟ್​ಕೇರ್ ಅಂದ್ರೆ ಹೇಗೆ; ಬಿಜೆಪಿಯೊಂದಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಮುನಿಸಿಗಿದೆ 5 ಕಾರಣಗಳು

Amit Shash VS JDU: ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಈ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದ ಐದು ಮುಖ್ಯ ಅಂಶಗಳಿವು...

Nitish Kumar: ಡೋಂಟ್​ಕೇರ್ ಅಂದ್ರೆ ಹೇಗೆ; ಬಿಜೆಪಿಯೊಂದಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಮುನಿಸಿಗಿದೆ 5 ಕಾರಣಗಳು
ಅಮಿತ್ ಶಾ ಮತ್ತು ನಿತೀಶ್ ಕುಮಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 08, 2022 | 7:57 AM

ದೆಹಲಿ: ಬಿಹಾರದ ಮುಖ್ಯಮಂತ್ರಿ ಮತ್ತು ಕೇಂದ್ರದ ಆಡಳಿತಾರೂಢ ಎನ್​ಡಿಎ ಮೈತ್ರಿಕೂಟದ ಪ್ರಮುಖ ಪಕ್ಷ ‘ಸಂಯುಕ್ತ ಜನತಾ ದಳ’ದ (Janata Dal United – JDU) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಮಂಗಳವಾರ ಪಕ್ಷದ ಸಭೆ ಕರೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ವಿರುದ್ಧ ಸಿಟ್ಟಿಗೆದ್ದಿರುವ ಅವರು, ಹಲವು ವೇದಿಕೆಗಳಲ್ಲಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಈ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದ ಐದು ಮುಖ್ಯ ಅಂಶಗಳಿವು…

  1. ಬಿಹಾರ ವಿಧಾನಸಭೆಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರ ಸ್ಥಾನಚ್ಯುತಿಗೆ ನಿತೀಶ್ ಕುಮಾರ್ ಆಗ್ರಹಿಸುತ್ತಿದ್ದಾರೆ. ಸಿನ್ಹಾ ಅವರ ವಿಚಾರದಲ್ಲಿ ನಿತೀಶ್ ಹಲವು ಬಾರಿ ಸಿಟ್ಟಿಗೆದ್ದಿದ್ದು ಉಂಟು. ತಮ್ಮ ಸರ್ಕಾರದ ಬಗ್ಗೆ ಪ್ರಶ್ನೆಗಳನ್ನು ಕೇಳುವ ಸಿನ್ಹಾ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆಯುತ್ತಿಲ್ಲ ಎಂದು ನಿತೀಶ್ ಹೇಳಿದ್ದಾರೆ.
  2. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ವಿಸ್ತರಿಸಿದಾಗ ತಮ್ಮ ಪಕ್ಷ ಜೆಡಿಯುಗೆ ಕೇವಲ ಒಂದೇಒಂದು ಸಂಪುಟ ಸ್ಥಾನ ನೀಡಿದ್ದು ನಿತೀಶ್ ಅವರಿಗೆ ಸಿಟ್ಟು ತರಿಸಿತ್ತು. ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಿಸಿದ ಅವರು, ತಮ್ಮ ಪಕ್ಷದ 8 ಮಂದಿಗೆ ಸಚಿವ ಸ್ಥಾನ ನೀಡಿ, ಬಿಜೆಪಿಯ ಒಬ್ಬರಿಗೆ ಮಾತ್ರ ಸಚಿವ ಸಂಪುಟದಲ್ಲಿ ಅವಕಾಶ ನೀಡಿ ಎದಿರೇಟು ಕೊಟ್ಟಿದ್ದರು.
  3. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎನ್ನುವ ಚಿಂತನೆಯನ್ನು ನಿತೀಶ್ ಕುಮಾರ್ ಒಪ್ಪುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ ಈ ವಿಚಾರವನ್ನು ವಿರೋಧ ಪಕ್ಷಗಳು ಸಹ ಒಪ್ಪಿಲ್ಲ. ಈ ವಿಚಾರದಲ್ಲಿ ಜೆಡಿಯು ವಿರೋಧ ಪಕ್ಷಗಳ ವಿಚಾರಧಾರೆಯನ್ನೇ ಪ್ರತಿಪಾದಿಸುತ್ತಿದೆ.
  4. ಬಿಹಾರ ಸಚಿವ ಸಂಪುಟದಲ್ಲಿ ಬಿಜೆಪಿಯ ಯಾರಿಗೆಲ್ಲಾ ಸಂಪುಟ ಸ್ಥಾನ ನೀಡಬೇಕು ಎನ್ನುವ ಬಗ್ಗೆ ತಮ್ಮದೇ ಅಂತಿಮ ನಿರ್ಧಾರವಾಗಬೇಕು ಎಂದು ನಿತೀಶ್​ ಕುಮಾರ್ ಬಯಸಿದ್ದಾರೆ. ಆದರೆ ಬಿಜೆಪಿಯ ಬಿಹಾರ ಘಟಕದ ಮೇಲೆ ಬಿಗಿಹಿಡಿತ ಹೊಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದಕ್ಕೆ ಅವಕಾಶ ನೀಡುತ್ತಿಲ್ಲ. ನಿತೀಶ್ ಅವರಿಗೆ ಆಪ್ತರಾಗಿರುವ ಬಿಜೆಪಿಯ ಸುಶೀಲ್ ಮೋದಿ ಅವರಿಗೆ ಬೇರೊಂದು ಜವಾಬ್ದಾರಿ ನೀಡಿ, ಬಿಹಾರದಿಂದ ಹೊರಗೆ ಕಳಿಸಲಾಗಿದೆ.
  5. ಕೇಂದ್ರ ಸಚಿವ ಸಂಪುಟಕ್ಕೆ ಜೆಡಿಯು ಸಂಸದರನ್ನು ಸೇರಿಸಿಕೊಳ್ಳುವ ವೇಳೆಯಲ್ಲಿಯೂ ನಿತೀಶ್ ಅವರ ಮಾತಿಗೆ ಬಿಜೆಪಿ ಮನ್ನಣೆ ನೀಡದಿರುವುದೂ ಸಹ ಎರಡೂ ಪಕ್ಷಗಳ ನಡುವೆ ಭಿನ್ನಮತ ಹೆಚ್ಚಾಗಲು ಮತ್ತೊಂದು ಕಾರಣ ಎನಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಆರ್​ಸಿಪಿ ಸಿಂಗ್ ಅವರು ನಿತೀಶ್ ಅವರನ್ನು ಲೆಕ್ಕಕ್ಕೆ ಇರಿಸದೇ ನೇರವಾಗಿ ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ಸಂಪರ್ಕ ಸಾಧಿಸಿದ್ದರು. ಸಿಂಗ್ ನಿನ್ನೆಯಷ್ಟೇ ಜೆಡಿಯುನಿಂದ ಹೊರನಡೆದರು. ‘ನಮ್ಮ ಪಕ್ಷವು ಕೇಂದ್ರ ಸಚಿವ ಸಂಪುಟಕ್ಕೆ ಏಕೆ ಸೇರಬೇಕು. ನಾವು ಸೇರುವುದಿಲ್ಲ ಎಂದು 2019ರಲ್ಲಿಯೇ ನಿತೀಶ್ ಕುಮಾರ್ ನಿರ್ಧರಿಸಿದ್ದರು’ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಾಜನ್ ಸಿಂಗ್ ಹೇಳಿದ್ದರು.

Published On - 7:57 am, Mon, 8 August 22

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ