AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರು ಬಗ್ಗೆ ಸಾಕಷ್ಟು ಹೇಳ್ತೀರಿ, ಅವರ ಸರ್​​ನೇಮ್ ಯಾಕೆ ಬಳಸುತ್ತಿಲ್ಲ?: ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಪ್ರಶ್ನೆ

PM Narendra Modi: ಕೆಲವು ಸದಸ್ಯರ ನಡವಳಿಕೆ ಮತ್ತು ಸ್ವರ ಇಡೀ ದೇಶಕ್ಕೆ ನಿರಾಶಾದಾಯಕವಾಗಿದೆ, ಅಂತಹವರಿಗೆ ನಾನು ಹೇಳಬಯಸುವುದೇನೆಂದರೆ ಜಿತ್ನಾ ಕೀಚಡ್ ಉಚ್ಛಾಲೋಗೆ, ಕಮಲ ಉತ್ನಾ ಹೀ ಖಿಲೇಗಾ (ನೀವು ನಮ್ಮ ಮೇಲೆ ಎಷ್ಟು ಕೆಸರು ಎಸೆದರೂ, ಕಮಲ ಹೆಚ್ಚು ಅರಳುತ್ತದೆ) ಕಮಲ ಅರಳಿಸಿದ್ದಕ್ಕಾಗಿ ನಾವು ಪ್ರತಿಪಕ್ಷಗಳಿಗೆ ಧನ್ಯವಾದ ಹೇಳುತ್ತೇವೆ ಎಂದ ಪ್ರಧಾನಿ

ನೆಹರು ಬಗ್ಗೆ ಸಾಕಷ್ಟು ಹೇಳ್ತೀರಿ, ಅವರ ಸರ್​​ನೇಮ್ ಯಾಕೆ ಬಳಸುತ್ತಿಲ್ಲ?: ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಪ್ರಶ್ನೆ
ರಾಜ್ಯಸಭೆಯಲ್ಲಿ ಮೋದಿ ಭಾಷಣ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 09, 2023 | 7:06 PM

Share

ದೆಹಲಿ: ರಾಹುಲ್ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರನ್ನು ಗೌರವಿಸಲು ಅವರಲ್ಲಿ ಯಾರೂ ನೆಹರು ಹೆಸರನ್ನು ಏಕೆ ಬಳಸಲಿಲ್ಲ ಎಂದು ಕೇಳಿದ್ದಾರೆ. “ನಾವು ಎಲ್ಲಿಯಾದರೂ ನೆಹರು ಅವರನ್ನು ಉಲ್ಲೇಖಿಸುವುದನ್ನು ಬಿಟ್ಟಿದ್ದರೆ ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರು ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ಆದರೆ ಅವರ್ಯಾರೂ ನೆಹರು ಸರ್​​ನೇಮ್ ಏಕೆ ಬಳಸುವುದಿಲ್ಲ, ನೆಹರು ಹೆಸರನ್ನು ಬಳಸುವುದರಲ್ಲಿ ನಾಚಿಕೆ ಏನಿದೆ ಎಂದು  ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮೋದಿ ಈ ಮಾತನ್ನು ಹೇಳಿದ್ದಾರೆ.ಬಿಲಿಯನೇರ್ ಗೌತಮ್ ಅದಾನಿ ಅವರೊಂದಿಗಿನ ನಂಟಿನ ಬಗ್ಗೆ ಮೋದಿ ಹೇಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದ್ದು, ಸದನದಲ್ಲಿ ಗದ್ದಲದ ನಡುವೆಯೇ ಮೋದಿ ಮಾತನಾಡಿದ್ದಾರೆ.

ಕಾಂಗ್ರೆಸ್ ಮತ್ತು ಅದರ ಪ್ರಧಾನ ಮಂತ್ರಿಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಮೋದಿ, ಪಕ್ಷವು ತನ್ನ ಸರ್ಕಾರವನ್ನು ಟೀಕಿಸುವಾಗ ತನ್ನದೇ ಆದ ವಿವಾದಗಳನ್ನು ಮುಚ್ಚಿಹಾಕುತ್ತಿದೆ ಎಂದು ಆರೋಪಿಸಿದರು.”ನಾವು ರಾಜ್ಯಗಳಿಗೆ ತೊಂದರೆ ನೀಡುತ್ತೇವೆ ಎಂದು ಅವರು ಹೇಳುತ್ತಾರೆ, ಆದರೆ ಅವರು ಚುನಾಯಿತ ರಾಜ್ಯ ಸರ್ಕಾರಗಳನ್ನು 90 ಬಾರಿ ಉರುಳಿಸಿದ್ದಾರೆ. ಒಬ್ಬ ಕಾಂಗ್ರೆಸ್ ಪ್ರಧಾನಿ ಚುನಾಯಿತ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಲು 356 ನೇ ವಿಧಿಯನ್ನು ಐವತ್ತು ಬಾರಿ ಬಳಸಿದರು. ಅದು ಇಂದಿರಾ ಗಾಂಧಿ. ಅದೇ ವೇಳೆ  ಈ ದೇಶ ಯಾವುದೇ ಕುಟುಂಬದ ಆಸ್ತಿಯಲ್ಲ ಎಂದು ಮೋದಿ ಹೇಳಿದ್ದಾರೆ.

ವಿಪಕ್ಷಗಳು ನಿರಂತರ ಘೋಷಣೆ ಕೂಗುತ್ತಿದ್ದಾಗ ಪ್ರಧಾನಿ ಮೋದಿ, “ನೀವು ನಮ್ಮ ಮೇಲೆ ಎಷ್ಟೇ ಕೆಸರು ಎರಚಿದರೂ ಕಮಲ (ಬಿಜೆಪಿ ಚಿಹ್ನೆ) ಅರಳುತ್ತದೆ” ಎಂದು ಹೇಳಿದರು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಸಾಂವಿಧಾನಿಕ ನಿಬಂಧನೆಗಳನ್ನು ಹೆಚ್ಚು ದುರುಪಯೋಗಪಡಿಸಿಕೊಂಡ ಪಕ್ಷ ಕಾಂಗ್ರೆಸ್: ಮೋದಿ ವಾಗ್ದಾಳಿ

“ಕೆಲವು ಸದಸ್ಯರ ನಡವಳಿಕೆ ಮತ್ತು ಸ್ವರ ಇಡೀ ದೇಶಕ್ಕೆ ನಿರಾಶಾದಾಯಕವಾಗಿದೆ, ಅಂತಹವರಿಗೆ ನಾನು ಹೇಳಬಯಸುವುದೇನೆಂದರೆ ಜಿತ್ನಾ ಕೀಚಡ್ ಉಚ್ಛಾಲೋಗೆ, ಕಮಲ ಉತ್ನಾ ಹೀ ಖಿಲೇಗಾ (ನೀವು ನಮ್ಮ ಮೇಲೆ ಎಷ್ಟು ಕೆಸರು ಎಸೆದರೂ, ಕಮಲ ಹೆಚ್ಚು ಅರಳುತ್ತದೆ) ಕಮಲ ಅರಳಿಸಿದ್ದಕ್ಕಾಗಿ ನಾವು ಪ್ರತಿಪಕ್ಷಗಳಿಗೆ ಧನ್ಯವಾದ ಹೇಳುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮೋದಿ ಭಾಷಣದ ಮುಖ್ಯಾಂಶಗಳು

  • ಕಳೆದ 3-4 ವರ್ಷಗಳಲ್ಲಿ ಸುಮಾರು 11 ಕೋಟಿ ಮನೆಗಳು ನಲ್ಲಿ ನೀರಿನ ಸಂಪರ್ಕ ಪಡೆದಿವೆ. ನಾವು ಜನ್ ಧನ್ ಖಾತೆ ಆಂದೋಲನವನ್ನು ಪ್ರಾರಂಭಿಸಿದ್ದೇವೆ. ಕಳೆದ 9 ವರ್ಷಗಳಲ್ಲಿ ದೇಶಾದ್ಯಂತ 48 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ.
  • ಕಾಂಗ್ರೆಸ್ ‘ಗರೀಬಿ ಹಠಾವೋ’ ಎಂದು ಹೇಳುತ್ತಿದ್ದರು. ಆದರೆ ನಾಲ್ಕು ದಶಕಗಳಿಂದ ಏನನ್ನೂ ಮಾಡಲಿಲ್ಲ. ಆದರೆ ನಾವು ದೇಶದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಶ್ರಮಿಸಿದೆವು.
  •  ನಾನು ಈ ಸಂಸದರಿಗೆ (ಪ್ರತಿಪಕ್ಷದ ಸಂಸದರಿಗೆ) ಹೇಳಬಯಸುವುದೇನೆಂದರೆನೀವು ಎಷ್ಟೇ  ಕೆಸರು ಎಸೆದರೂ ಅಷ್ಟೇ ಚೆನ್ನಾಗಿ ಕಮಲ ಅರಳುತ್ತದೆ.
  •  ನಾವು ದೇಶದಲ್ಲಿ 110 ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಗುರುತಿಸಿದ್ದೇವೆ. ನಿರಂತರ ಗಮನ ಮತ್ತು ಕಾರ್ಯಕ್ಷಮತೆಯ ಪರಿಶೀಲನೆಯಿಂದಾಗಿ ಈ ಜಿಲ್ಲೆಗಳಲ್ಲಿ ಶಿಕ್ಷಣ, ಮೂಲಸೌಕರ್ಯ ಮತ್ತು ಆರೋಗ್ಯ ಸುಧಾರಿಸಿದೆ. ಇದರಿಂದ ಮೂರು ಕೋಟಿಗೂ ಹೆಚ್ಚು ಬುಡಕಟ್ಟು ಜನಾಂಗದವರಿಗೆ ಅನುಕೂಲವಾಗಿದೆ.
  •  ನಾವು ತಂತ್ರಜ್ಞಾನದ ಶಕ್ತಿಯೊಂದಿಗೆ ಕಾರ್ಮಿಕ ಸಂಸ್ಕೃತಿಯನ್ನು ಪರಿವರ್ತಿಸಿದ್ದೇವೆ. ನಮ್ಮ ಗಮನವು ವೇಗವನ್ನು ಹೆಚ್ಚಿಸುವುದು ಮತ್ತು ಪ್ರಮಾಣವನ್ನು ಹೆಚ್ಚಿಸುವುದು.
  • ಕೆಲವರಿಗೆ ಸರ್ಕಾರದ ಯೋಜನೆಗಳ ಹೆಸರುಗಳು ಮತ್ತು ಸಂಸ್ಕೃತ ಪದಗಳ ಹೆಸರುಗಳಲ್ಲಿ ಸಮಸ್ಯೆಗಳಿದ್ದವು. 600 ಸರ್ಕಾರಿ ಯೋಜನೆಗಳು ಗಾಂಧಿ-ನೆಹರು ಕುಟುಂಬದ ಹೆಸರಿನಲ್ಲಿವೆ ಎಂದು ನಾನು ವರದಿಯಲ್ಲಿ ಓದಿದ್ದೇನೆ. ಅವರ ತಲೆಮಾರಿನ ಜನರು ನೆಹರು ಸರ್​​ನೇಮ್ ಯಾಕೆ ಇಟ್ಟುಕೊಳ್ಳುವುದಿಲ್ಲ ಎಂದು ನನಗೆ ಅರ್ಥವಾಗುತ್ತಿಲ್ಲ.
  • ಲಸಿಕೆಯನ್ನು ನಮ್ಮ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತೆ ಜಗತ್ತಿನ ಜನರಿಂದ ಒತ್ತಡವಿತ್ತು, ಲೇಖನಗಳನ್ನು ಬರೆಯಲಾಗಿದೆ, ಟಿವಿ ಸಂದರ್ಶನಗಳನ್ನು ನೀಡಲಾಯಿತು. ನಿನ್ನೆಯವರೆಗೂ ನಮ್ಮ ವಿಜ್ಞಾನಿಗಳನ್ನು ಅವಮಾನಿಸುವ ಪ್ರಯತ್ನಗಳು ನಡೆದಿವೆ. ಆದರೆ ನನ್ನ ದೇಶದ ವಿಜ್ಞಾನಿಗಳು ಲಸಿಕೆಗಳನ್ನು ತಯಾರಿಸಿದ್ದಾರೆ ಮತ್ತು ಅದನ್ನು ಅಂಗೀಕರಿಸಲಾಗಿದೆ. ಇದರಿಂದ 150 ದೇಶಗಳಿಗೆ ಪ್ರಯೋಜನವಾಗಿದೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Thu, 9 February 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು