AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ

Farmers Protest: ಸರ್ಕಾರ ಪಾರ್ಲಿಮೆಂಟ್ ಸದನದ ಬಳಿ ಕೃಷಿ ಸಂಶೋಧನಾ ಕೇಂದ್ರವನ್ನು ಯಾಕೆ ಸ್ಥಾಪಿಸಬಾರದು. ಅಲ್ಲಿ ಬೆಳೆ ಬೆಳೆದು, ಫಸಲು ಪಡೆದ ನಂತರ ಲಾಭ, ನಷ್ಟದ ಲೆಕ್ಕಾಚಾರ ಮಾಡಿ ಸೂಕ್ತ ಬೆಲೆ ನಿರ್ಧರಿಸಬಹುದಲ್ಲವೇ?

ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ
ಸಂಸತ್ ಭವನ
TV9 Web
| Edited By: |

Updated on:Apr 06, 2022 | 7:43 PM

Share

ದೆಹಲಿ: ಕೇಂದ್ರ ಸರ್ಕಾರವು ಕೃಷಿ ವಿಜ್ಞಾನಿ ಸ್ವಾಮಿನಾಥನ್ ವರದಿಯನ್ನು ಕಡೆಗಣಿಸುತ್ತಿದೆ ಮತ್ತು ರೈತರು ಭಾರೀ ಪ್ರಮಾಣದಲ್ಲಿ ಬೆಂಬಲ ಬೆಲೆಯನ್ನು (MSP) ಅಪೇಕ್ಷಿಸುತ್ತಿದ್ದಾರೆ ಎಂದು ತಿಳಿದುಕೊಂಡಿದೆ. ಈ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳಲು, ಸರ್ಕಾರ ಪಾರ್ಲಿಮೆಂಟ್ ಸದನದ ಬಳಿ ಕೃಷಿ ಸಂಶೋಧನಾ ಕೇಂದ್ರವನ್ನು ಯಾಕೆ ಸ್ಥಾಪಿಸಬಾರದು? ಅಲ್ಲಿ ಬೆಳೆ ಬೆಳೆದು, ಫಸಲು ಪಡೆದ ನಂತರ ಲಾಭ, ನಷ್ಟದ ಲೆಕ್ಕಾಚಾರ ಮಾಡಿ ಸೂಕ್ತ ಬೆಲೆ ನಿರ್ಧರಿಸಬಹುದಲ್ಲವೇ? ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಆಪೇಕ್ಷಿಸಿದ್ದಾರೆ.

ANI ಸುದ್ದಿ ಸಂಸ್ಥೆಯ ಜತೆ ಮಾತನಾಡಿದ ಟಿಕಾಯತ್, ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ ರೈತ ಹೋರಾಟಗಾರರು ಪಾರ್ಲಿಮೆಂಟ್​ಗೆ ಘೆರಾವ್ ಹಾಕುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ (BKU) ರಾಕೇಶ್ ಟಿಕಾಯತ್ ನಿನ್ನೆ ಎಚ್ಚರಿಕೆ ನೀಡಿದ್ದರು. ದೆಹಲಿ ಮಾರ್ಚ್​ಗೆ ಯಾವಾಗಲಾದರೂ ಕರೆ ನೀಡಬಹುದು. ರೈತರು ತಯಾರಾಗಿರಬೇಕು ಎಂದು ಟಿಕಾಯತ್ ಹೇಳಿದ್ದರು. ರಾಜಸ್ಥಾನದ ಸಿಕರ್ ಎಂಬಲ್ಲಿ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಂಗಳವಾರ (ಫೆ.23) ರಾಕೇಶ್ ಟಿಕಾಯತ್ ಮಾತನಾಡಿದ್ದರು.

ಇಂಡಿಯಾ ಗೇಟ್ ಬಳಿಯ ಪಾರ್ಕ್​ನಲ್ಲಿ ನೇಗಿಲು ಹಿಡಿದು ನೆಲ ಉತ್ತು, ಬೆಳೆ ಬೆಳೆಯುತ್ತೇವೆ. ಯುನೈಟೆಡ್ ಫ್ರಂಟ್​ನ ರೈತ ಚಳುವಳಿಗಾರರು ಪಾರ್ಲಿಮೆಂಟ್ ಘೆರಾವ್​ಗೆ ದಿನಾಂಕ ನಿಗಧಿ ಮಾಡುತ್ತಾರೆ ಎಂದೂ ಟಿಕಾಯತ್ ತಿಳಿಸಿದ್ದರು. ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಚಳುವಳಿಗೆ ಕೆಟ್ಟ ಹೆಸರು ತರುವಂತೆ ಷಡ್ಯಂತ್ರ ಹೂಡಲಾಗಿದೆ. ಜನವರಿ 26ರ ಹಿಂಸಾಚಾರವನ್ನು ರೈತರ ಮೇಲೆ ಹೊರಿಸಲಾಗುತ್ತಿದೆ. ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ರೈತರು ರಾಜಕೀಯ ನಾಯಕರಂತಲ್ಲ ಎಂದು ಟಿಕಾಯತ್ ಗುಡುಗಿದ್ದರು.

ರಾಕೇಶ್ ಟಿಕಾಯತ್ ಪಾರ್ಲಿಮೆಂಟ್​ ಮಾರ್ಚ್

ಇದನ್ನೂ ಓದಿ: ಕೃಷಿ ಕಾಯ್ದೆಗಳ ಹಿಂಪಡೆಯದೇ ಹೋದರೆ ಪಾರ್ಲಿಮೆಂಟ್​ಗೆ ಘೇರಾವ್: ರಾಕೇಶ್ ಟಿಕಾಯತ್ ಎಚ್ಚರಿಕೆ

ಛೇ! ರೈತ ನಾಯಕ ರಾಕೇಶ್ ಟಿಕಾಯತ್ ಭಾಷಣ ಕೇಳಿ ತಾವೇ ಬೆಳೆದ ಬೆಳೆಯನ್ನು ಕೈಯಾರೆ ನಾಶಪಡಿಸಿದ ರೈತ ಕುಟುಂಬ

Published On - 1:39 pm, Wed, 24 February 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ