AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ?- ಕೊನೆಗೂ ಈ ಪ್ರಶ್ನೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ

Prashant Kishor: ಕಳೆದಬಾರಿ ಪ್ರಶಾಂತ್ ಕಿಶೋರ್​, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಹಲವು ಸುತ್ತುಗಳ ಮಾತುಕತೆಯ ಬಳಿಕವೂ ಪ್ರಶಾಂತ್ ಕಿಶೋರ್​ಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ?- ಕೊನೆಗೂ ಈ ಪ್ರಶ್ನೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಶಾಂತ್ ಕಿಶೋರ್​ ಮತ್ತು ಪ್ರಿಯಾಂಕಾ ಗಾಂಧಿ
TV9 Web
| Updated By: Lakshmi Hegde|

Updated on:Jan 22, 2022 | 12:27 PM

Share

ದೆಹಲಿ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor )ಕಾಂಗ್ರೆಸ್ (Congress Party) ಸೇರುತ್ತಾರೆ ಎಂಬುದೊಂದು ಚರ್ಚೆ 2021ರ ಜುಲೈ-ಆಗಸ್ಟ್​ ತಿಂಗಳಲ್ಲಿ ಜೋರಾಗಿತ್ತು. ಅವರು ದೆಹಲಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮತ್ತು ರಾಹುಲ್​ ಗಾಂಧಿಯವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ, ಕೆಲವೇ ದಿನಗಳಲ್ಲಿ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ನಂತರ ಅದು ಅಲ್ಲಿಗೇ ನಿಂತುಹೋಯಿತು. ಅವರು ಕಾಂಗ್ರೆಸ್ ಪಕ್ಷ ಸೇರಿಯೇ ಇಲ್ಲ. ಇನ್ನು ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ ಎಂಬ ಪ್ರಶ್ನೆಗ ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಉತ್ತರ ಕೊಟ್ಟಿದ್ದಾರೆ. ಕಳೆದ ವರ್ಷ ಪ್ರಶಾಂತ್ ಕಿಶೋರ್​ ಕಾಂಗ್ರೆಸ್ ಸೇರಬೇಕು ಎಂದುಕೊಂಡಿದ್ದು, ಅದಕ್ಕಾಗಿ ಪ್ರಯತ್ನ ಪಟ್ಟಿದ್ದೂ ಹೌದು. ಆದರೆ ನಂತರ ಹಲವು ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. 

ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ಗೆ ಸೇರದೆ ಇರಲು ಒಂದಷ್ಟು ಅವರದ್ದೇ ಆದ ಕಾರಣಗಳಿವೆ..ಇನ್ನೊಂದಿಷ್ಟು ನಮ್ಮ ಕಾರಣಗಳಿವೆ. ನಾನು ಅದನ್ನೆಲ್ಲ ಸಂಪೂರ್ಣವಾಗಿ ವಿವರಿಸಿ ಹೇಳಲು ಸಾಧ್ಯವಾಗುವುದಿಲ್ಲ. ಸ್ಥೂಲವಾಗಿ ಅನೇಕ ವಿಚಾರಗಳನ್ನು ಒಪ್ಪಿಕೊಳ್ಳಲು ಕಷ್ಟವಾಯಿತು. ಕೆಲವು ಅಸಮರ್ಥತೆಗಳು ಚರ್ಚೆಯನ್ನು ಮುಂದುವರಿಸಲೇ ಅಡ್ಡಿಪಡಿಸಿದವು. ಈ ಎಲ್ಲ ಕಾರಣಗಳಿಂದಾಗಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.  ಕಾಂಗ್ರೆಸ್​ಗೆ ಹೊರಗಿನವರನ್ನು ತರಲು ಯಾವುದೇ ಹಿಂಜರಿಕೆ ಇಲ್ಲ. ಹಾಗೊಮ್ಮೆ ನಮಗೆ ಹಿಂಜರಿಕೆ ಇದ್ದಿದ್ದರೆ, ಅಷ್ಟೊಂದು ಚರ್ಚೆ, ಮಾತುಕತೆಗಳನ್ನು ನಡೆಸುತ್ತಲೇ ಇರಲಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಕಳೆದಬಾರಿ ಪ್ರಶಾಂತ್ ಕಿಶೋರ್​, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಹಲವು ಸುತ್ತುಗಳ ಮಾತುಕತೆಯ ಬಳಿಕವೂ ಪ್ರಶಾಂತ್ ಕಿಶೋರ್​ಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ನ್ನು ಮುನ್ನಡೆಸುವುದು ಯಾರೊಬ್ಬರ ದೈವಿಕ ಹಕ್ಕು ಅಲ್ಲ. ಹಾಗೆಂದು ಯಾರೂ ಭಾವಿಸಲೂ ಬಾರದು. ಅದರಲ್ಲೂ ಕಾಂಗ್ರೆಸ್ ಕಳೆದ 10 ವರ್ಷಗಳಲ್ಲಿ ಬಹುತೇಕ ಶೇ.90ರಷ್ಟು ಅಸ್ವಿತ್ವವನ್ನೇ ಕಳದುಕೊಂಡಿದೆ ಎಂದು ಹೇಳಿದ್ದರು. 2024ರ ಲೋಕಸಭೆ ಚುನಾವಣೆಯೊಳಗಾದರೂ ಕಾಂಗ್ರೆಸ್​ ತನ್ನ ವಿರೋಧ ಪಕ್ಷದ ಅಸ್ವಿತ್ವ ಉಳಿಸಿಕೊಳ್ಳಬೇಕು. ಆದರೆ ಈಗಿರುವ ನಾಯಕತ್ವದಡಿ ಅದು ಸಾಧ್ಯವಿಲ್ಲ ಎಂದೂ ಹೇಳಿದ್ದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 10:43 am, Sat, 22 January 22

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್