AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ

ಪಶ್ಚಿಮ ಬಂಗಾಳದಲ್ಲಿ ಯಾಕೆ 'ದಿ ಕೇರಳ ಸ್ಟೋರಿ'ನ್ನು (The Kerala Story) ನಿಷೇಧಿಸಬೇಕು? ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದರ ಜತೆಗೆ ತಮಿಳುನಾಡು ಸರ್ಕಾರಕ್ಕೂ ನೋಟಿಸ್ ನೀಡಿದೆ.

The Kerala Story: 'ದಿ ಕೇರಳ ಸ್ಟೋರಿ' ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:May 12, 2023 | 3:53 PM

ದೆಹಲಿ: ಭಾರೀ ವಿವಾದವನ್ನು ಸೃಷ್ಟಿಸಿರುವ ದಿ ಕೇರಳ ಸ್ಟೋರಿಯನ್ನು  ನಮ್ಮ ರಾಜ್ಯದಲ್ಲಿ  ಪ್ರದರ್ಶನ ಮಾಡಬಾರದು ಎಂದು ಪಶ್ಚಿಮ ಬಂಗಾಳ ಹೇಳಿತ್ತು, ಆದರೆ ಇದೀಗ  ಪಶ್ಚಿಮ ಬಂಗಾಳದಲ್ಲಿ ಯಾಕೆ ‘ದಿ ಕೇರಳ ಸ್ಟೋರಿ‘ನ್ನು (The Kerala Story) ನಿಷೇಧಿಸಬೇಕು? ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದರ ಜತೆಗೆ ತಮಿಳುನಾಡು ಸರ್ಕಾರಕ್ಕೂ ನೋಟಿಸ್ ನೀಡಿದೆ. ಈ ಎರಡು ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ನೋಟಿಸ್​​ನ್ನು ನೀಡಿದೆ. ಪಶ್ಚಿಮ ಬಂಗಾಳದ ಜತೆಗೆ ತಮಿಳುನಾಡು ಕೂಡ  ದಿ ಕೇರಳ ಸ್ಟೋರಿಯನ್ನು ಪ್ರದರ್ಶನ ಮಾಡದಂತೆ ಆದೇಶವನ್ನು ನೀಡಿತ್ತು ಇದೀಗ ಸುಪ್ರೀಂ ಎರಡು ರಾಜ್ಯಕ್ಕೂ ಯಾಕೆ ಸಿನಿಮಾವನ್ನು ನೀಡಬೇಕು, ಇದಕ್ಕೆ ಸಂಬಂಧಿಸಿದಂತೆ ಸರಿಯಾದ ಕಾರಣ ತಿಳಿಸುವಂತೆ ನೋಟಿಸ್​​ ನೀಡಿದೆ.

ತಮಿಳುನಾಡು ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿಲ್ಲ ಆದರೆ ಥಿಯೇಟರ್ ಮಾಲೀಕರು ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಅದನ್ನು ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ. ದಿ ಕೇರಳ ಸ್ಟೋರಿಯನ್ನು ನಿಷೇಧಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳ, ನಿಷೇಧಕ್ಕೆ ಕಾರಣ ನೀಡಿದೆ   ಇದು  ಪಶ್ಚಿಮ ಬಂಗಾಳದಲ್ಲಿ “ಶಾಂತಿ ಭಂಗವನ್ನು ಉಂಟುಮಾಡುವ ಸಾಧ್ಯತೆಯಿದೆ” ಎಂದು ಹೇಳಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಯಾವುದೇ ದ್ವೇಷ ಅಥವಾ ಹಿಂಸಾಚಾರದ ಘಟನೆಯನ್ನು ತಪ್ಪಿಸಲು ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ಸೋಮವಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದಲ್ಲಿ ನಮ್ಮ ಸಿನಿಮಾವನ್ನು ಸರ್ಕಾರ ನಿಷೇಧಿಸಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದರು, ಇದರಿಂದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದೆ.  ಕೇರಳದ 32,000 ಮಹಿಳೆಯರು ಐಸಿಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಂಬಿಸಿರುವ ಚಲನಚಿತ್ರವನ್ನು  ಬಿಜೆಪಿಯೇತರ ರಾಜ್ಯಗಳಲ್ಲಿ  ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ ಬಿಜೆಪಿ ಆಡಳಿತ ಇರುವ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯಿತಿಗಳನ್ನು ಪಡೆದುಕೊಂಡಿದೆ.

ಸುದೀಪ್ತೋ ಸೇನ್ ನಿರ್ದೇಶನದ ಮತ್ತು ವಿಪುಲ್ ಶಾ ನಿರ್ಮಿಸಿದ ‘ದಿ ಕೇರಳ ಸ್ಟೋರಿ’, ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಹೇಗೆ ಒತ್ತಾಯಿಸಲಾಯಿತು ಮತ್ತು ಐಸಿಸ್ ಭಯೋತ್ಪಾದಕ ಗುಂಪಿನಿಂದ ಹೇಗೆ ಸೇರಿಸಿಕೊಳ್ಳತ್ತಾರೆ ಎಂಬುದನ್ನು ಇದರಲ್ಲಿ ತಿಳಿಸಲಾಗಿದೆ. ಇದೀಗ ಈ ಸಿನಿಮಾ ರಾಜಕೀಯದಲ್ಲಿ ಭಾರೀ  ಬಿರುಗಾಳಿಯನ್ನು ಎಬ್ಬಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Fri, 12 May 23

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ