AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ

ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ
ಅಮಿತ್ ಶಾ
TV9 Web
| Edited By: |

Updated on: Oct 05, 2022 | 7:28 PM

Share

ಬರಾಮುಲ್ಲಾ: ಪಾಕಿಸ್ತಾನದೊಂದಿಗೆ (Pakistan) ಯಾವುದೇ ಮಾತುಕತೆ ನಡೆಸುವ ಯೋಜನೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಕಿತ್ತೊಗೆಯುತ್ತದೆ. ಇದನ್ನು ದೇಶದ ಶಾಂತಿಯುತ ಪ್ರದೇಶವನ್ನಾಗಿ ಮಾಡಲಾಗುವುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಹೆಚ್ಚಳದಿಂದಾಗಿ ಇಲ್ಲಿನ ಯುವಕರಿಗೆ ಕೆಲಸ ಸಿಕ್ಕಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳ ಮೇಲೆ ಟೀಕಾ ಪ್ರಹಾರ ನಡೆಸಿದ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಅವ್ಯವಸ್ಥೆ ಸೃಷ್ಟಿಸಿದ್ದಕ್ಕಾಗಿ ಅಬ್ದುಲ್ಲಾ, ಮುಫ್ತಿ ಮತ್ತು ಗಾಂಧಿ ಕುಟುಂಬವನ್ನು ದೂಷಿಸಬೇಕು ಎಂದು ಹೇಳಿದ್ದಾರೆ. ಕಳೆದ 70 ವರ್ಷಗಳಲ್ಲಿ ಮುಫ್ತಿ ಮತ್ತು ಅವರ ಸಂಗಡಿಗರು, ಅಬ್ದುಲ್ಲಾ ಮತ್ತು ಅವರ ಮಗ  ಇಲ್ಲಿ ಅಧಿಕಾರದಲ್ಲಿದ್ದರು. ಆದರೆ 1 ಲಕ್ಷ ವಸತಿರಹಿತ ಜನರಿಗೆ ಮನೆ ನೀಡಲು ಸಾಧ್ಯವಾಗಿಲ್ಲ, 2014- 2022ರ ಅವಧಿಯಲ್ಲಿ ಮೋದಿಜಿ ಈ 1 ಲಕ್ಷ ಜನರಿಗೆ ವಸತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮೋದಿಜೀ ಅವರ ಆಡಳಿತದ ಮಾಡೆಲ್ ಅ ಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್​​ಗೂ ಗುಪ್ಕಾರ್ ಮಾಡೆಲ್​​ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಮೋದಿಜೀ ಅವರ ಆಡಳಿತದ ಮಾಡೆಲ್ಅಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್ ಗೂ ಗುಪ್ಕಾರ್ ಮಾಡೆಲ್ ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಬಗ್ಗೆ ಮಾತನಾಡಿದ ಗೃಹ ಸಚಿವರು, ಮತದಾರರ ಪಟ್ಟಿಯನ್ನು ಕಂಪೈಲ್ ಮಾಡುವುದನ್ನು ಪೂರ್ಣಗೊಳಿಸಿದ ತಕ್ಷಣ, ಜಮ್ಮು ಮತ್ತು ಕಾಶ್ಮೀರದಲ್ಲಿ “ಸಂಪೂರ್ಣ ಪಾರದರ್ಶಕತೆಯೊಂದಿಗೆ” ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಶ್ರೀನಗರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇಂದು ಅವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಕೊನೆಯ ದಿನವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಅಮಿತಾ ಶಾ ಅವರದ್ದು ಇದು ಎರಡನೇ ಭೇಟಿಯಾಗಿದೆ.

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್