AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ

ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ
ಅಮಿತ್ ಶಾ
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 05, 2022 | 7:28 PM

Share

ಬರಾಮುಲ್ಲಾ: ಪಾಕಿಸ್ತಾನದೊಂದಿಗೆ (Pakistan) ಯಾವುದೇ ಮಾತುಕತೆ ನಡೆಸುವ ಯೋಜನೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಕಿತ್ತೊಗೆಯುತ್ತದೆ. ಇದನ್ನು ದೇಶದ ಶಾಂತಿಯುತ ಪ್ರದೇಶವನ್ನಾಗಿ ಮಾಡಲಾಗುವುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಹೆಚ್ಚಳದಿಂದಾಗಿ ಇಲ್ಲಿನ ಯುವಕರಿಗೆ ಕೆಲಸ ಸಿಕ್ಕಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳ ಮೇಲೆ ಟೀಕಾ ಪ್ರಹಾರ ನಡೆಸಿದ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಅವ್ಯವಸ್ಥೆ ಸೃಷ್ಟಿಸಿದ್ದಕ್ಕಾಗಿ ಅಬ್ದುಲ್ಲಾ, ಮುಫ್ತಿ ಮತ್ತು ಗಾಂಧಿ ಕುಟುಂಬವನ್ನು ದೂಷಿಸಬೇಕು ಎಂದು ಹೇಳಿದ್ದಾರೆ. ಕಳೆದ 70 ವರ್ಷಗಳಲ್ಲಿ ಮುಫ್ತಿ ಮತ್ತು ಅವರ ಸಂಗಡಿಗರು, ಅಬ್ದುಲ್ಲಾ ಮತ್ತು ಅವರ ಮಗ  ಇಲ್ಲಿ ಅಧಿಕಾರದಲ್ಲಿದ್ದರು. ಆದರೆ 1 ಲಕ್ಷ ವಸತಿರಹಿತ ಜನರಿಗೆ ಮನೆ ನೀಡಲು ಸಾಧ್ಯವಾಗಿಲ್ಲ, 2014- 2022ರ ಅವಧಿಯಲ್ಲಿ ಮೋದಿಜಿ ಈ 1 ಲಕ್ಷ ಜನರಿಗೆ ವಸತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮೋದಿಜೀ ಅವರ ಆಡಳಿತದ ಮಾಡೆಲ್ ಅ ಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್​​ಗೂ ಗುಪ್ಕಾರ್ ಮಾಡೆಲ್​​ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಮೋದಿಜೀ ಅವರ ಆಡಳಿತದ ಮಾಡೆಲ್ಅಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್ ಗೂ ಗುಪ್ಕಾರ್ ಮಾಡೆಲ್ ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಬಗ್ಗೆ ಮಾತನಾಡಿದ ಗೃಹ ಸಚಿವರು, ಮತದಾರರ ಪಟ್ಟಿಯನ್ನು ಕಂಪೈಲ್ ಮಾಡುವುದನ್ನು ಪೂರ್ಣಗೊಳಿಸಿದ ತಕ್ಷಣ, ಜಮ್ಮು ಮತ್ತು ಕಾಶ್ಮೀರದಲ್ಲಿ “ಸಂಪೂರ್ಣ ಪಾರದರ್ಶಕತೆಯೊಂದಿಗೆ” ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಶ್ರೀನಗರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇಂದು ಅವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಕೊನೆಯ ದಿನವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಅಮಿತಾ ಶಾ ಅವರದ್ದು ಇದು ಎರಡನೇ ಭೇಟಿಯಾಗಿದೆ.

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ