AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಇಂದು ಊಟದ ವಿರಾಮ ನಿರಾಕರಿಸಿದ ಸ್ಪೀಕರ್ ಓಂ ಬಿರ್ಲಾ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ದೋಷಾರೋಪ ಪಟ್ಟಿ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಕಳೆದ ವಾರ ಲೋಕಸಭೆಯ ಕಲಾಪಗಳ ಮೇಲೆ ಭಾರೀ ಪರಿಣಾಮ ಬೀರಿತ್ತು.

ಲೋಕಸಭೆಯಲ್ಲಿ ಇಂದು ಊಟದ ವಿರಾಮ ನಿರಾಕರಿಸಿದ ಸ್ಪೀಕರ್ ಓಂ ಬಿರ್ಲಾ
ಸ್ಪೀಕರ್ ಓಂ ಬಿರ್ಲಾ
ಸುಷ್ಮಾ ಚಕ್ರೆ
|

Updated on: Dec 04, 2024 | 7:22 PM

Share

ನವದೆಹಲಿ: ಕಲಾಪ ಮುಂದೂಡಿಕೆಯಿಂದಾಗಿ ವ್ಯರ್ಥವಾದ ಸಮಯವನ್ನು ಸರಿದೂಗಿಸುವ ಉದ್ದೇಶದಿಂದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಇಂದು (ಡಿಸೆಂಬರ್ 4) ಸದನದಲ್ಲಿ ಸಂಸದರಿಗೆ ‘ಊಟದ ವಿರಾಮ’ ನೀಡಲಿಲ್ಲ. ಅದಾನಿ ದೋಷಾರೋಪ ಪಟ್ಟಿ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಕಳೆದ ವಾರ ಲೋಕಸಭೆಯ ಕಲಾಪಗಳಿಗೆ ಅಡ್ಡಿಯಾಗಿತ್ತು.

ಇಂದು ಸದನದಲ್ಲಿ ಭೋಜನ ವಿರಾಮ ಇರುವುದಿಲ್ಲ, ಇದರಿಂದ ಕಲಾಪದ ಮುಂದೂಡಿಕೆಯಿಂದ ಕಳೆದುಹೋದ ಸಮಯವನ್ನು ಸ್ವಲ್ಪಮಟ್ಟಿಗೆ ಸರಿದೂಗಿಸಬಹುದು ಎಂದು ಲೋಕಸಭೆ ಸ್ಪೀಕರ್ ಹೇಳಿದ್ದಾರೆ. ಒಂದುವೇಳೆ ಕಲಾಪ ಮುಂದೂಡಿಕೆಯಿಂದಾಗಿ ಸದನದ ಕಲಾಪ ಮತ್ತಷ್ಟು ಅಡ್ಡಿಯಾದರೆ ಸಮಯದ ಕೊರತೆಯನ್ನು ಸರಿದೂಗಿಸಲು ವಾರಾಂತ್ಯದಲ್ಲಿ ಕಲಾಪವನ್ನು ಕರೆಯಬೇಕಾಗುತ್ತದೆ ಎಂದು ನಿನ್ನೆ ಸ್ಪೀಕರ್ ಸಂಸದರಿಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Parliament Winter Session: ವಕ್ಫ್​ನಿಂದ ಬ್ಯಾಂಕಿಂಗ್ ಕಾನೂನು ತಿದ್ದುಪಡಿವರೆಗೆ, ಸಂಸತ್​ ಚಳಿಗಾಲದ ಅಧಿವೇಶನದಲ್ಲೇನೇನು ನಡೆಯುತ್ತೆ?

ಸದನವು ಡಿಸೆಂಬರ್ 14, ಶನಿವಾರ ಬೆಳಿಗ್ಗೆ 11 ಗಂಟೆಗೆ ಸೇರಲಿದೆ. ನೀವು ಪ್ರಶ್ನೋತ್ತರ ಸಮಯದ ಮುಂದೂಡಿಕೆಯನ್ನು ಮುಂದುವರಿಸಿದರೆ, ಅದು ಎಷ್ಟು ದಿನಗಳು ಮುಂದೂಡಿಕೆಯಾಗುತ್ತವೆಯೋ ಅಷ್ಟು ದಿನಕ್ಕೆ ನೀವು ಶನಿವಾರ ಮತ್ತು ಭಾನುವಾರದಂದು ಸಹ ಕಲಾಪಕ್ಕೆ ಹಾಜರಾಗಬೇಕಾಗುತ್ತದೆ ಎಂದು ಬಿರ್ಲಾ ಹೇಳಿದ್ದಾರೆ.

ಈ ರೀತಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಗಲಾಟೆಗಳು ಮತ್ತು ಸದನವನ್ನು ಮುಂದೂಡುವುದರಿಂದ ಕಳೆದುಹೋದ ಸಮಯವನ್ನು ಸರಿದೂಗಿಸಲು ಸ್ಪೀಕರ್ ನಿರ್ಧರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ