ಲೋಕಸಭೆಯಲ್ಲಿ ಇಂದು ಊಟದ ವಿರಾಮ ನಿರಾಕರಿಸಿದ ಸ್ಪೀಕರ್ ಓಂ ಬಿರ್ಲಾ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ದೋಷಾರೋಪ ಪಟ್ಟಿ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಕಳೆದ ವಾರ ಲೋಕಸಭೆಯ ಕಲಾಪಗಳ ಮೇಲೆ ಭಾರೀ ಪರಿಣಾಮ ಬೀರಿತ್ತು.

ಲೋಕಸಭೆಯಲ್ಲಿ ಇಂದು ಊಟದ ವಿರಾಮ ನಿರಾಕರಿಸಿದ ಸ್ಪೀಕರ್ ಓಂ ಬಿರ್ಲಾ
ಸ್ಪೀಕರ್ ಓಂ ಬಿರ್ಲಾ
Follow us
ಸುಷ್ಮಾ ಚಕ್ರೆ
|

Updated on: Dec 04, 2024 | 7:22 PM

ನವದೆಹಲಿ: ಕಲಾಪ ಮುಂದೂಡಿಕೆಯಿಂದಾಗಿ ವ್ಯರ್ಥವಾದ ಸಮಯವನ್ನು ಸರಿದೂಗಿಸುವ ಉದ್ದೇಶದಿಂದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಇಂದು (ಡಿಸೆಂಬರ್ 4) ಸದನದಲ್ಲಿ ಸಂಸದರಿಗೆ ‘ಊಟದ ವಿರಾಮ’ ನೀಡಲಿಲ್ಲ. ಅದಾನಿ ದೋಷಾರೋಪ ಪಟ್ಟಿ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಕಳೆದ ವಾರ ಲೋಕಸಭೆಯ ಕಲಾಪಗಳಿಗೆ ಅಡ್ಡಿಯಾಗಿತ್ತು.

ಇಂದು ಸದನದಲ್ಲಿ ಭೋಜನ ವಿರಾಮ ಇರುವುದಿಲ್ಲ, ಇದರಿಂದ ಕಲಾಪದ ಮುಂದೂಡಿಕೆಯಿಂದ ಕಳೆದುಹೋದ ಸಮಯವನ್ನು ಸ್ವಲ್ಪಮಟ್ಟಿಗೆ ಸರಿದೂಗಿಸಬಹುದು ಎಂದು ಲೋಕಸಭೆ ಸ್ಪೀಕರ್ ಹೇಳಿದ್ದಾರೆ. ಒಂದುವೇಳೆ ಕಲಾಪ ಮುಂದೂಡಿಕೆಯಿಂದಾಗಿ ಸದನದ ಕಲಾಪ ಮತ್ತಷ್ಟು ಅಡ್ಡಿಯಾದರೆ ಸಮಯದ ಕೊರತೆಯನ್ನು ಸರಿದೂಗಿಸಲು ವಾರಾಂತ್ಯದಲ್ಲಿ ಕಲಾಪವನ್ನು ಕರೆಯಬೇಕಾಗುತ್ತದೆ ಎಂದು ನಿನ್ನೆ ಸ್ಪೀಕರ್ ಸಂಸದರಿಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Parliament Winter Session: ವಕ್ಫ್​ನಿಂದ ಬ್ಯಾಂಕಿಂಗ್ ಕಾನೂನು ತಿದ್ದುಪಡಿವರೆಗೆ, ಸಂಸತ್​ ಚಳಿಗಾಲದ ಅಧಿವೇಶನದಲ್ಲೇನೇನು ನಡೆಯುತ್ತೆ?

ಸದನವು ಡಿಸೆಂಬರ್ 14, ಶನಿವಾರ ಬೆಳಿಗ್ಗೆ 11 ಗಂಟೆಗೆ ಸೇರಲಿದೆ. ನೀವು ಪ್ರಶ್ನೋತ್ತರ ಸಮಯದ ಮುಂದೂಡಿಕೆಯನ್ನು ಮುಂದುವರಿಸಿದರೆ, ಅದು ಎಷ್ಟು ದಿನಗಳು ಮುಂದೂಡಿಕೆಯಾಗುತ್ತವೆಯೋ ಅಷ್ಟು ದಿನಕ್ಕೆ ನೀವು ಶನಿವಾರ ಮತ್ತು ಭಾನುವಾರದಂದು ಸಹ ಕಲಾಪಕ್ಕೆ ಹಾಜರಾಗಬೇಕಾಗುತ್ತದೆ ಎಂದು ಬಿರ್ಲಾ ಹೇಳಿದ್ದಾರೆ.

ಈ ರೀತಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಗಲಾಟೆಗಳು ಮತ್ತು ಸದನವನ್ನು ಮುಂದೂಡುವುದರಿಂದ ಕಳೆದುಹೋದ ಸಮಯವನ್ನು ಸರಿದೂಗಿಸಲು ಸ್ಪೀಕರ್ ನಿರ್ಧರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ