AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಾಮರಿಗಾಗಿ ಮಾಡಿದ ಕಾನೂನುಗಳನ್ನು ಏಕೆ ಮುಂದುವರಿಸಬೇಕು?; 3 ಕ್ರಿಮಿನಲ್ ಕಾನೂನುಗಳಿಗೆ ಮೋದಿ ಚಾಲನೆ

ಹೊಸದಾಗಿ ಪರಿಚಯಿಸಲಾದ ನ್ಯಾಯ ಸಂಹಿತೆ "ಜನರಿಂದ, ಜನರಿಂದ, ಜನರಿಗಾಗಿ" ಎಂಬ ಪ್ರಜಾಸತ್ತಾತ್ಮಕ ತತ್ವಗಳನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎತ್ತಿ ತೋರಿಸಿದ್ದಾರೆ. ಚಂಡೀಗಢವು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳ ಸಂಪೂರ್ಣ ಅನುಷ್ಠಾನವನ್ನು ಮಾಡಿದ ಮೊದಲ ನಗರವಾಗಿದೆ.

ಗುಲಾಮರಿಗಾಗಿ ಮಾಡಿದ ಕಾನೂನುಗಳನ್ನು ಏಕೆ ಮುಂದುವರಿಸಬೇಕು?; 3 ಕ್ರಿಮಿನಲ್ ಕಾನೂನುಗಳಿಗೆ ಮೋದಿ ಚಾಲನೆ
ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on: Dec 03, 2024 | 8:02 PM

Share

ಚಂಡೀಗಢ: ಚಂಡೀಗಢದಲ್ಲಿ ಮೂರು ಮಹತ್ವದ ಕ್ರಿಮಿನಲ್ ಕಾನೂನುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಟಿಷ್ ವಸಾಹತುಶಾಹಿ ಯುಗದಲ್ಲಿ ರಚಿಸಲಾದ ಹಳೆಯ ಕ್ರಿಮಿನಲ್ ಕಾನೂನುಗಳು ಭಾರತೀಯರನ್ನು ಶಿಕ್ಷಿಸಲು ಮತ್ತು ಅವರನ್ನು ಅಧೀನದಲ್ಲಿಡಲು ವಿನ್ಯಾಸಗೊಳಿಸಲಾಗಿದೆ ಎಂದು ಮೋದಿ ಒತ್ತಿ ಹೇಳಿದ್ದಾರೆ.

“ಸ್ವತಂತ್ರ ದೇಶದಲ್ಲಿ ಗುಲಾಮರಿಗಾಗಿ ರಚಿಸಲಾದ ಕಾನೂನುಗಳನ್ನು ನಾವು ಏಕೆ ಮುಂದುವರಿಸಬೇಕು?” ಎಂದು ಮೋದಿ ಪ್ರಶ್ನಿಸಿದ್ದಾರೆ. ಈ ವಸಾಹತುಶಾಹಿ ಮನಸ್ಥಿತಿಯನ್ನು ತೊಡೆದುಹಾಕಲು ಮತ್ತು ದೇಶದ ಪ್ರಜಾಪ್ರಭುತ್ವದ ಆದರ್ಶಗಳೊಂದಿಗೆ ಹೊಂದಿಕೊಳ್ಳುವ ಕಾನೂನು ಚೌಕಟ್ಟಿಗೆ ಪರಿವರ್ತನೆಯ ಅಗತ್ಯವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ‘ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ, ದೇಶದ ವಿರುದ್ಧ ಸಂಚು ರೂಪಿಸುತ್ತಿವೆ’; ಒಡಿಶಾದಲ್ಲಿ ಪ್ರಧಾನಿ ಮೋದಿ ಗುಡುಗು

ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟಿಷ್ ಕ್ರಿಮಿನಲ್ ಕಾನೂನುಗಳ ಪರಂಪರೆಯ ಬಗ್ಗೆ ಮಾತನಾಡಿದ್ದಾರೆ. ಅದು ಭಾರತೀಯ ಜನರನ್ನು ಶೋಷಿಸಲು ಉದ್ದೇಶಿಸಿತ್ತು. ಭಾರತವು 1947ರಲ್ಲಿ ಸ್ವಾತಂತ್ರ್ಯವನ್ನು ಪಡೆದಾಗ ಜನರು ಈ ವಸಾಹತುಶಾಹಿ ಕಾನೂನುಗಳಿಂದ ಮುಕ್ತರಾಗುತ್ತಾರೆ ಎಂಬ ಭರವಸೆಯಲ್ಲಿದ್ದರು. ಆದರೆ, ಆ ಕಾನೂನುಗಳನ್ನು ನಿಯಂತ್ರಣ ಮತ್ತು ಅಧೀನತೆಯ ಸಾಧನಗಳಾಗಿ ಬಳಸಲಾಯಿತು ಎಂದಿದ್ದಾರೆ.

1857ರ ಸ್ವಾತಂತ್ರ್ಯ ಹೋರಾಟವು ಬ್ರಿಟಿಷರ ಆಳ್ವಿಕೆಯ ಬೇರುಗಳನ್ನು ಅಲುಗಾಡಿಸಿತು ಎಂದು ಮೋದಿ ಹೇಳಿದ್ದಾರೆ. 1860ರಲ್ಲಿ ಭಾರತೀಯ ದಂಡ ಸಂಹಿತೆ (IPC) ಅನ್ನು ಹೇಗೆ ಪರಿಚಯಿಸಲಾಯಿತು ಮತ್ತು ಸ್ವಲ್ಪ ಸಮಯದ ನಂತರ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಅನುಸರಿಸಲಾಯಿತು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಕಾನೂನುಗಳನ್ನು ಭಾರತೀಯರನ್ನು ಶಿಕ್ಷಿಸುವ ಮತ್ತು ಗುಲಾಮರನ್ನಾಗಿ ಇರಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ

ಭಾರತದ ಸ್ವಾತಂತ್ರ್ಯದ ಹೊರತಾಗಿಯೂ, ಬ್ರಿಟಿಷ್ ಆಳ್ವಿಕೆಯಲ್ಲಿ ಸ್ಥಾಪಿಸಲಾದ ಅದೇ ದಂಡ ಸಂಹಿತೆಯ ಅಡಿಯಲ್ಲಿ ದೇಶವು ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದೆ ಎಂದು ಪ್ರಧಾನಿ ಮೋದಿ ಬೇಸರ ಹೊರಹಾಕಿದ್ದಾರೆ. ಕಳೆದ ವರ್ಷಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಲಾಗಿದ್ದರೂ, ಕಾನೂನುಗಳ ಸ್ವರೂಪವು ಬದಲಾಗದೆ ಉಳಿಯಿತು. ಅದು ವಸಾಹತುಶಾಹಿ ಮನಸ್ಥಿತಿಯನ್ನು ಮುಂದುವರೆಸಿತು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ