ಪ್ರಧಾನಿ ಮೋದಿಯನ್ನು ಹೊಗಳಿ ಮತ್ತೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
ಶಶಿ ತರೂರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ರಾಮನಾಥ್ ಗೋಯೆಂಕಾ ಉಪನ್ಯಾಸವು ಆರ್ಥಿಕ ದೃಷ್ಟಿಕೋನ ಮತ್ತು ಕ್ರಿಯೆಗೆ ಸಾಂಸ್ಕೃತಿಕ ಕರೆಯಾಗಿ ಕಾರ್ಯನಿರ್ವಹಿಸಿತು ಎಂದು ಹೇಳಿದ್ದರು. ಹೀಗೆ ಆಗಾಗ ಪ್ರಧಾನಿ ಮೋದಿಯನ್ನು ಹೊಗಳುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್ ಪಕ್ಷದವರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇರುತ್ತಾರೆ. ಈ ಬಾರಿ ಕೂಡ ಹಲವು ಕಾಂಗ್ರೆಸ್ ನಾಯಕರು ಶಶಿ ತರೂರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ, ನೀವೇಕೆ ಇನ್ನೂ ಕಾಂಗ್ರೆಸ್ನಲ್ಲಿದ್ದೀರಿ? ಬಿಜೆಪಿಗೆ ಸೇರಬಹುದಲ್ಲ ಎಂದು ಟೀಕಿಸಿದ್ದಾರೆ.

ನವದೆಹಲಿ, ನವೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭಾಷಣವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹೊಸ ಉದ್ವಿಗ್ನತೆ ಮತ್ತು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್ ಅವರು ಮೋದಿ ಅವರ ಭಾಷಣದ ಅಂಶಗಳನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತವನ್ನು ‘ಉದಯೋನ್ಮುಖ ಮಾದರಿ’ ಎಂದು ಚಿತ್ರಿಸಿದ್ದಕ್ಕಾಗಿ ಶಶಿ ತರೂರ್ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದರು. ಈ ಕಾರಣದಿಂದಾಗಿ ಹಲವಾರು ಕಾಂಗ್ರೆಸ್ ನಾಯಕರು ಶಶಿ ತರೂರ್ ಅವರನ್ನು ಬಹಿರಂಗವಾಗಿ ಟೀಕಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ಶಶಿ ತರೂರ್ ಅವರ ಪಕ್ಷದ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ. ಶಶಿ ತರೂರ್ ಅವರನ್ನು ಕಪಟ ಎಂದು ಕರೆದಿರುವ ಅವರು “ನೀವು ಕಾಂಗ್ರೆಸ್ನಲ್ಲಿ ಏಕೆ ಇದ್ದೀರಿ?” ಎಂದು ಕೇಳಿದ್ದಾರೆ. ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್ ಕೂಡ ಶಶಿ ತರೂರ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮೋದಿಯವರ ಭಾಷಣವನ್ನು ಕ್ಷುಲ್ಲಕವೆಂದು ಟೀಕಿಸಿದ್ದಾರೆ.
ಇದನ್ನೂ ಓದಿ: ವಿಜ್ಞಾನಿಗಳು ರೈತರ ಹೊಲಗಳನ್ನೇ ಪ್ರಯೋಗಾಲಯವಾಗಿ ಪರಿವರ್ತಿಸಬೇಕು; ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ಕರೆ
ಜಾಗತಿಕ ಸವಾಲುಗಳ ನಡುವೆಯೂ ಭಾರತವನ್ನು “ಉದಯೋನ್ಮುಖ ಮಾರುಕಟ್ಟೆ”ಯಿಂದ “ಉದಯೋನ್ಮುಖ ಮಾದರಿ”ಯಾಗಿ ಪರಿವರ್ತಿಸುವ ಪ್ರಧಾನಿ ಮೋದಿ ಅವರ ದೃಷ್ಟಿಕೋನದ ಮೇಲೆ ಶಶಿ ತರೂರ್ ಅವರ ಹೊಗಳಿಕೆ ಕೇಂದ್ರೀಕೃತವಾಗಿತ್ತು. ವಸಾಹತುಶಾಹಿ ಗುಲಾಮ ಮನಸ್ಥಿತಿಯನ್ನು ತೆಗೆದುಹಾಕುವ ಮತ್ತು ಭಾಷೆ, ಸಂಸ್ಕೃತಿ, ಪರಂಪರೆಯ ಮೂಲಕ ರಾಷ್ಟ್ರೀಯ ಹೆಮ್ಮೆಯನ್ನು ಉತ್ತೇಜಿಸುವತ್ತ ಪಿಎಂ ಮೋದಿ ಅವರ ಗಮನವನ್ನು ಅವರು ಶ್ಲಾಘಿಸಿದ್ದರು. ಹಾಗೇ, ಶಶಿ ತರೂರ್ ಕಾಂಗ್ರೆಸ್ ತೊರೆಯುವ ಯೋಜನೆಗಳನ್ನು ನಿರಾಕರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




