AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 25, 2021 | 12:39 PM

Share

ದೆಹಲಿ: ಆಗಸ್ಟ್​ 27ರವರೆಗೆ ದೇಶಾದ್ಯಂತ ಅನೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಅದರಲ್ಲೂ ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ಅಸ್ಸಾಂ, ಬಿಹಾರ್​, ಉತ್ತರಾಖಂಡ್​, ಉತ್ತರಪ್ರದೇಶ, ಕೇರಳ, ತಮಿಳುನಾಡು ಪುದುಚೇರಿಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡಿದೆ.

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ. ಈ ಕಾರಣದಿಂದ ಇಂದು ಮತ್ತು ನಾಳೆ (ಆಗಸ್ಟ್​ 25) ಮೇಘಾಲಯ-ಅಸ್ಸಾಂಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಹಾಗೇ, ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ, ಸಿಕ್ಕಿಂಗಳಲ್ಲಿ ಆಗಸ್ಟ್​ 27ರವರೆಗೂ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.

ಪೂರ್ವ ಭಾರತದಲ್ಲೂ ಕೂಡ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ವಾಯುವ್ಯ, ಮಧ್ಯ ಭಾರತ ಹಾಗೂ ಪಶ್ಚಿಮ ಕರಾವಳಿಯಲ್ಲಿ ಮಳೆ ಕಡಿಮೆಯಾಗಲಿದೆ ಎಂದೂ ಐಎಂಡಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಕಾಲೇಜಿನ ಬಳಿ 2 ದಿನದ ಹೆಣ್ಣು ಶಿಶು ಬಿಟ್ಟುಹೋಗಿರುವ ದುರುಳರು

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Published On - 12:38 pm, Wed, 25 August 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ