AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 25, 2021 | 12:39 PM

Share

ದೆಹಲಿ: ಆಗಸ್ಟ್​ 27ರವರೆಗೆ ದೇಶಾದ್ಯಂತ ಅನೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಅದರಲ್ಲೂ ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ಅಸ್ಸಾಂ, ಬಿಹಾರ್​, ಉತ್ತರಾಖಂಡ್​, ಉತ್ತರಪ್ರದೇಶ, ಕೇರಳ, ತಮಿಳುನಾಡು ಪುದುಚೇರಿಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡಿದೆ.

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ. ಈ ಕಾರಣದಿಂದ ಇಂದು ಮತ್ತು ನಾಳೆ (ಆಗಸ್ಟ್​ 25) ಮೇಘಾಲಯ-ಅಸ್ಸಾಂಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಹಾಗೇ, ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ, ಸಿಕ್ಕಿಂಗಳಲ್ಲಿ ಆಗಸ್ಟ್​ 27ರವರೆಗೂ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.

ಪೂರ್ವ ಭಾರತದಲ್ಲೂ ಕೂಡ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ವಾಯುವ್ಯ, ಮಧ್ಯ ಭಾರತ ಹಾಗೂ ಪಶ್ಚಿಮ ಕರಾವಳಿಯಲ್ಲಿ ಮಳೆ ಕಡಿಮೆಯಾಗಲಿದೆ ಎಂದೂ ಐಎಂಡಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಕಾಲೇಜಿನ ಬಳಿ 2 ದಿನದ ಹೆಣ್ಣು ಶಿಶು ಬಿಟ್ಟುಹೋಗಿರುವ ದುರುಳರು

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Published On - 12:38 pm, Wed, 25 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ