AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಪಾನಿಪುರಿ
TV9 Web
| Edited By: |

Updated on: Sep 01, 2021 | 12:41 PM

Share

ಪತಿ ತನ್ನನ್ನು ಕೇಳದೆ ಪಾನಿಪುರಿ (Panipuri) ತಂದ ಎಂದು ಕೋಪಗೊಂಡ ಪತ್ನಿ ಆತನೊಂದಿಗೆ ಸಿಕ್ಕಾಪಟೆ ಜಗಳ ಆಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಹಾರಾಷ್ಟ್ರ (Maharashtra)ದಲ್ಲಿ ನಡೆದಿದೆ. ತನ್ನನ್ನು ಕೇಳದೆ ಪಾನಿಪುರಿ ತಂದ ಎಂಬ ಕಾರಣಕ್ಕೆ ಆಕೆ ಜಗಳ ಶುರು ಮಾಡಿದ್ದರು. ಇಬ್ಬರ ನಡುವಿನ ವಾಗ್ವಾದ ತೀವ್ರರೂಪಕ್ಕೆ ಏರಿ, ಕೊನೆಗೆ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಇದೀಗ ಭಾರತಿ ಯೂನಿವರ್ಸಿಟಿ ಪೊಲೀಸ್​ ಠಾಣೆಯಲ್ಲಿ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತೀಕ್ಷಾ ಸರ್ವದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಆಕೆಯ ಪತಿ ಗಹಿನಿನಾಥ್​ ಸರ್ವದೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಗಹಿನಿನಾಥ್​ ಅವರ ಹುಟ್ಟೂರು ಸೋಲಾಪುರ. 2019ರಲ್ಲಿ ಇವರಿಬ್ಬರೂ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ. ಗಹಿನಿನಾಥ್​ ಶಿಕ್ಷಣವಂತರಾಗಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹಿನಿನಾಥ್​ ಮತ್ತು ಪ್ರತೀಕ್ಷಾ ಇಬ್ಬರೂ ಮದುವೆಯಾದ ನಂತರ ಪದೇಪದೆ ಜಗಳವಾಡುತ್ತಿದ್ದರು. ಇತ್ತೀಚೆಗಷ್ಟೇ ಇವರಿಬ್ಬರೂ ಅಂಬೇಗಾಂವ್​ ಏರಿಯಾದಲ್ಲಿ ವಾಸಿಸಲು ಶುರು ಮಾಡಿದ್ದರು.

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು. ಅಷ್ಟೇ ಅಲ್ಲ ಜಗಳವನ್ನೂ ಪ್ರಾರಂಭಿಸಿದ್ದಲ್ಲದೆ, ಆ ಪಾನಿಪುರಿಯನ್ನು ತಿನ್ನಲೂ ಇಲ್ಲ. ಮರುದಿನ ಬೆಳಗ್ಗೆ ಗಹಿನಿನಾಥ್​ ಕೆಲಸಕ್ಕೆ ಹೋಗುವಾಗ ತಿಂಡಿಯನ್ನೂ ಮಾಡಿಕೊಡಲಿಲ್ಲ. ಆಕೆ ಅದಾಗಲೇ ವಿಷಯುಕ್ತ ಮಾತ್ರೆ ಸೇವಿಸಿದ್ದಳು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇಷ್ಟಾದ ಮೇಲೆ ಪ್ರತೀಕ್ಷಾಳ ತಂದೆ ಪ್ರಕಾಶ್​ ಪಿಸೆ ಗಹಿನಿನಾಥ್​ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಂಪೈರ್ ವೈಡ್ ನೀಡದೇ ಇರುವುದಕ್ಕೆ ಕೋಪಗೊಂಡು ಪಿಚ್​ನಿಂದ ದೂರ ಹೋಗಿ ನಿಂತ ಪೊಲಾರ್ಡ್; ವಿಡಿಯೊ ನೋಡಿ

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ