AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಪಾನಿಪುರಿ
TV9 Web
| Edited By: |

Updated on: Sep 01, 2021 | 12:41 PM

Share

ಪತಿ ತನ್ನನ್ನು ಕೇಳದೆ ಪಾನಿಪುರಿ (Panipuri) ತಂದ ಎಂದು ಕೋಪಗೊಂಡ ಪತ್ನಿ ಆತನೊಂದಿಗೆ ಸಿಕ್ಕಾಪಟೆ ಜಗಳ ಆಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಹಾರಾಷ್ಟ್ರ (Maharashtra)ದಲ್ಲಿ ನಡೆದಿದೆ. ತನ್ನನ್ನು ಕೇಳದೆ ಪಾನಿಪುರಿ ತಂದ ಎಂಬ ಕಾರಣಕ್ಕೆ ಆಕೆ ಜಗಳ ಶುರು ಮಾಡಿದ್ದರು. ಇಬ್ಬರ ನಡುವಿನ ವಾಗ್ವಾದ ತೀವ್ರರೂಪಕ್ಕೆ ಏರಿ, ಕೊನೆಗೆ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಇದೀಗ ಭಾರತಿ ಯೂನಿವರ್ಸಿಟಿ ಪೊಲೀಸ್​ ಠಾಣೆಯಲ್ಲಿ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತೀಕ್ಷಾ ಸರ್ವದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಆಕೆಯ ಪತಿ ಗಹಿನಿನಾಥ್​ ಸರ್ವದೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಗಹಿನಿನಾಥ್​ ಅವರ ಹುಟ್ಟೂರು ಸೋಲಾಪುರ. 2019ರಲ್ಲಿ ಇವರಿಬ್ಬರೂ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ. ಗಹಿನಿನಾಥ್​ ಶಿಕ್ಷಣವಂತರಾಗಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹಿನಿನಾಥ್​ ಮತ್ತು ಪ್ರತೀಕ್ಷಾ ಇಬ್ಬರೂ ಮದುವೆಯಾದ ನಂತರ ಪದೇಪದೆ ಜಗಳವಾಡುತ್ತಿದ್ದರು. ಇತ್ತೀಚೆಗಷ್ಟೇ ಇವರಿಬ್ಬರೂ ಅಂಬೇಗಾಂವ್​ ಏರಿಯಾದಲ್ಲಿ ವಾಸಿಸಲು ಶುರು ಮಾಡಿದ್ದರು.

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು. ಅಷ್ಟೇ ಅಲ್ಲ ಜಗಳವನ್ನೂ ಪ್ರಾರಂಭಿಸಿದ್ದಲ್ಲದೆ, ಆ ಪಾನಿಪುರಿಯನ್ನು ತಿನ್ನಲೂ ಇಲ್ಲ. ಮರುದಿನ ಬೆಳಗ್ಗೆ ಗಹಿನಿನಾಥ್​ ಕೆಲಸಕ್ಕೆ ಹೋಗುವಾಗ ತಿಂಡಿಯನ್ನೂ ಮಾಡಿಕೊಡಲಿಲ್ಲ. ಆಕೆ ಅದಾಗಲೇ ವಿಷಯುಕ್ತ ಮಾತ್ರೆ ಸೇವಿಸಿದ್ದಳು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇಷ್ಟಾದ ಮೇಲೆ ಪ್ರತೀಕ್ಷಾಳ ತಂದೆ ಪ್ರಕಾಶ್​ ಪಿಸೆ ಗಹಿನಿನಾಥ್​ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಂಪೈರ್ ವೈಡ್ ನೀಡದೇ ಇರುವುದಕ್ಕೆ ಕೋಪಗೊಂಡು ಪಿಚ್​ನಿಂದ ದೂರ ಹೋಗಿ ನಿಂತ ಪೊಲಾರ್ಡ್; ವಿಡಿಯೊ ನೋಡಿ

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ