AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಪಾನಿಪುರಿ
TV9 Web
| Updated By: Lakshmi Hegde|

Updated on: Sep 01, 2021 | 12:41 PM

Share

ಪತಿ ತನ್ನನ್ನು ಕೇಳದೆ ಪಾನಿಪುರಿ (Panipuri) ತಂದ ಎಂದು ಕೋಪಗೊಂಡ ಪತ್ನಿ ಆತನೊಂದಿಗೆ ಸಿಕ್ಕಾಪಟೆ ಜಗಳ ಆಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಹಾರಾಷ್ಟ್ರ (Maharashtra)ದಲ್ಲಿ ನಡೆದಿದೆ. ತನ್ನನ್ನು ಕೇಳದೆ ಪಾನಿಪುರಿ ತಂದ ಎಂಬ ಕಾರಣಕ್ಕೆ ಆಕೆ ಜಗಳ ಶುರು ಮಾಡಿದ್ದರು. ಇಬ್ಬರ ನಡುವಿನ ವಾಗ್ವಾದ ತೀವ್ರರೂಪಕ್ಕೆ ಏರಿ, ಕೊನೆಗೆ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಇದೀಗ ಭಾರತಿ ಯೂನಿವರ್ಸಿಟಿ ಪೊಲೀಸ್​ ಠಾಣೆಯಲ್ಲಿ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತೀಕ್ಷಾ ಸರ್ವದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಆಕೆಯ ಪತಿ ಗಹಿನಿನಾಥ್​ ಸರ್ವದೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಗಹಿನಿನಾಥ್​ ಅವರ ಹುಟ್ಟೂರು ಸೋಲಾಪುರ. 2019ರಲ್ಲಿ ಇವರಿಬ್ಬರೂ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ. ಗಹಿನಿನಾಥ್​ ಶಿಕ್ಷಣವಂತರಾಗಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹಿನಿನಾಥ್​ ಮತ್ತು ಪ್ರತೀಕ್ಷಾ ಇಬ್ಬರೂ ಮದುವೆಯಾದ ನಂತರ ಪದೇಪದೆ ಜಗಳವಾಡುತ್ತಿದ್ದರು. ಇತ್ತೀಚೆಗಷ್ಟೇ ಇವರಿಬ್ಬರೂ ಅಂಬೇಗಾಂವ್​ ಏರಿಯಾದಲ್ಲಿ ವಾಸಿಸಲು ಶುರು ಮಾಡಿದ್ದರು.

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು. ಅಷ್ಟೇ ಅಲ್ಲ ಜಗಳವನ್ನೂ ಪ್ರಾರಂಭಿಸಿದ್ದಲ್ಲದೆ, ಆ ಪಾನಿಪುರಿಯನ್ನು ತಿನ್ನಲೂ ಇಲ್ಲ. ಮರುದಿನ ಬೆಳಗ್ಗೆ ಗಹಿನಿನಾಥ್​ ಕೆಲಸಕ್ಕೆ ಹೋಗುವಾಗ ತಿಂಡಿಯನ್ನೂ ಮಾಡಿಕೊಡಲಿಲ್ಲ. ಆಕೆ ಅದಾಗಲೇ ವಿಷಯುಕ್ತ ಮಾತ್ರೆ ಸೇವಿಸಿದ್ದಳು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇಷ್ಟಾದ ಮೇಲೆ ಪ್ರತೀಕ್ಷಾಳ ತಂದೆ ಪ್ರಕಾಶ್​ ಪಿಸೆ ಗಹಿನಿನಾಥ್​ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಂಪೈರ್ ವೈಡ್ ನೀಡದೇ ಇರುವುದಕ್ಕೆ ಕೋಪಗೊಂಡು ಪಿಚ್​ನಿಂದ ದೂರ ಹೋಗಿ ನಿಂತ ಪೊಲಾರ್ಡ್; ವಿಡಿಯೊ ನೋಡಿ

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?