AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು.

Maharashtra: ಪತಿ ಆಫೀಸಿನಿಂದ ಬರುವಾಗ ಪಾನಿಪುರಿ ತಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಪಾನಿಪುರಿ
TV9 Web
| Edited By: |

Updated on: Sep 01, 2021 | 12:41 PM

Share

ಪತಿ ತನ್ನನ್ನು ಕೇಳದೆ ಪಾನಿಪುರಿ (Panipuri) ತಂದ ಎಂದು ಕೋಪಗೊಂಡ ಪತ್ನಿ ಆತನೊಂದಿಗೆ ಸಿಕ್ಕಾಪಟೆ ಜಗಳ ಆಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಹಾರಾಷ್ಟ್ರ (Maharashtra)ದಲ್ಲಿ ನಡೆದಿದೆ. ತನ್ನನ್ನು ಕೇಳದೆ ಪಾನಿಪುರಿ ತಂದ ಎಂಬ ಕಾರಣಕ್ಕೆ ಆಕೆ ಜಗಳ ಶುರು ಮಾಡಿದ್ದರು. ಇಬ್ಬರ ನಡುವಿನ ವಾಗ್ವಾದ ತೀವ್ರರೂಪಕ್ಕೆ ಏರಿ, ಕೊನೆಗೆ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಇದೀಗ ಭಾರತಿ ಯೂನಿವರ್ಸಿಟಿ ಪೊಲೀಸ್​ ಠಾಣೆಯಲ್ಲಿ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತೀಕ್ಷಾ ಸರ್ವದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಆಕೆಯ ಪತಿ ಗಹಿನಿನಾಥ್​ ಸರ್ವದೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಗಹಿನಿನಾಥ್​ ಅವರ ಹುಟ್ಟೂರು ಸೋಲಾಪುರ. 2019ರಲ್ಲಿ ಇವರಿಬ್ಬರೂ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ. ಗಹಿನಿನಾಥ್​ ಶಿಕ್ಷಣವಂತರಾಗಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹಿನಿನಾಥ್​ ಮತ್ತು ಪ್ರತೀಕ್ಷಾ ಇಬ್ಬರೂ ಮದುವೆಯಾದ ನಂತರ ಪದೇಪದೆ ಜಗಳವಾಡುತ್ತಿದ್ದರು. ಇತ್ತೀಚೆಗಷ್ಟೇ ಇವರಿಬ್ಬರೂ ಅಂಬೇಗಾಂವ್​ ಏರಿಯಾದಲ್ಲಿ ವಾಸಿಸಲು ಶುರು ಮಾಡಿದ್ದರು.

ಈಗೆರಡು ದಿನಗಳ ಹಿಂದೆ ಗಹಿನಿನಾಥ್​ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್​ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು. ಅಷ್ಟೇ ಅಲ್ಲ ಜಗಳವನ್ನೂ ಪ್ರಾರಂಭಿಸಿದ್ದಲ್ಲದೆ, ಆ ಪಾನಿಪುರಿಯನ್ನು ತಿನ್ನಲೂ ಇಲ್ಲ. ಮರುದಿನ ಬೆಳಗ್ಗೆ ಗಹಿನಿನಾಥ್​ ಕೆಲಸಕ್ಕೆ ಹೋಗುವಾಗ ತಿಂಡಿಯನ್ನೂ ಮಾಡಿಕೊಡಲಿಲ್ಲ. ಆಕೆ ಅದಾಗಲೇ ವಿಷಯುಕ್ತ ಮಾತ್ರೆ ಸೇವಿಸಿದ್ದಳು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇಷ್ಟಾದ ಮೇಲೆ ಪ್ರತೀಕ್ಷಾಳ ತಂದೆ ಪ್ರಕಾಶ್​ ಪಿಸೆ ಗಹಿನಿನಾಥ್​ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಂಪೈರ್ ವೈಡ್ ನೀಡದೇ ಇರುವುದಕ್ಕೆ ಕೋಪಗೊಂಡು ಪಿಚ್​ನಿಂದ ದೂರ ಹೋಗಿ ನಿಂತ ಪೊಲಾರ್ಡ್; ವಿಡಿಯೊ ನೋಡಿ

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್