AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು

Madhya Pradesh Divorce Case: ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ - ಭನ್ವಾರ್​​ಕುವಾ ಪೊಲೀಸ್ ಠಾಣೆಯ ಡಿಸಿಪಿ ರಾಜೇಶ್ ಸಿಂಗ್

Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು
ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ
Follow us
ಸಾಧು ಶ್ರೀನಾಥ್​
|

Updated on:Jun 12, 2023 | 1:38 PM

ಇತ್ತೀಚೆಗೆ ಪತಿ-ಪತ್ನಿಯರ ಸಂಬಂಧ ಬಿಗಡಾಯಿಸಿ, ಸಣ್ಣಪುಟ್ಟ ಕಾರಣಗಳಿಗಾಗಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ವೈವಾಹಿಕ ಸಂಬಂಧವು ಸುಲಭವಾಗಿ ಮುರಿದುಹೋಗುತ್ತಿದೆ. ಈ ಪ್ರಕರಣದಲ್ಲೂ ಹಾಗೆಯೇ ಪತಿ-ಪತ್ನಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಈ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬಂದಾಗ ಪತ್ನಿ ಒಂದು ಹೆಜ್ಜೆ ಮುಂದಿಟ್ಟು, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆಯಿಟ್ಟು (alimony) ಪತಿಯಿಂದ ವಿಚ್ಛೇದನಕ್ಕೆ ಯತ್ನಿಸಿದ್ದಾಳೆ. ಕೋಟಿಗಟ್ಟಲೆ ಜೀವನಾಂಶ ನೀಡುವಂತೆ ಬೆದರಿಕೆ ಹಾಕಿದ್ದಾಳೆ ಎಂದು ಹೆಂಡತಿಯ ವಿರುದ್ಧ ಗಂಡ ಪೊಲೀಸ್ ದೂರು ದಾಖಲಿಸಿದ್ದಾರೆ. ವಿವರಗಳನ್ನು ನೋಡುವುದಾದರೆ…

ಪತಿಯಿಂದ ವಿಚ್ಛೇದನಕ್ಕೆ ರೂ. 6 ಕೋಟಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಪತ್ನಿಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಸಿರುವ ಪ್ರಕರಣ (Intimidation) ದಾಖಲಿಸಿಕೊಂಡಿದ್ದಾರೆ. ಇಬ್ಬರ ನಡುವಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಏತನ್ಮಧ್ಯೆ, ಜೀವನಾಂಶಕ್ಕಾಗಿ ಪತ್ನಿ ತನ್ನ ಪತಿಗೆ ಬೆದರಿಕೆ ಹಾಕಿದ್ದಾಳೆ ಎಂಬ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ನಾನಾ ಸೆಕ್ಷನ್ ಅಡಿಯಲ್ಲಿ ಪತ್ನಿ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Also Read: ಉಚಿತ ಯೋಜನೆಗಳ ಖುಷಿಯಲ್ಲಿ ಕಳೆದು ಹೋಗಬೇಡಿ, ಪಂಜಾಬ್​ನ ಸ್ಥಿತಿ ಒಮ್ಮೆ ನೋಡಿ

ಈ ಬಗ್ಗೆ ಭನ್ವಾರ್​​ಕುವಾ ಪೊಲೀಸ್ ಠಾಣೆಯ (Bhanwarkuwa police station) ಡಿಸಿಪಿ ರಾಜೇಶ್ ಸಿಂಗ್ ಮಾತನಾಡಿ, ಲಲಿತ್‌ಪುರದಲ್ಲಿ ವಾಸಿಸುವ ರಾಮ್ ರಜಪೂತ್ ದಂಪತಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:36 pm, Mon, 12 June 23

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ