AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು

Madhya Pradesh Divorce Case: ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ - ಭನ್ವಾರ್​​ಕುವಾ ಪೊಲೀಸ್ ಠಾಣೆಯ ಡಿಸಿಪಿ ರಾಜೇಶ್ ಸಿಂಗ್

Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು
ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ
ಸಾಧು ಶ್ರೀನಾಥ್​
|

Updated on:Jun 12, 2023 | 1:38 PM

Share

ಇತ್ತೀಚೆಗೆ ಪತಿ-ಪತ್ನಿಯರ ಸಂಬಂಧ ಬಿಗಡಾಯಿಸಿ, ಸಣ್ಣಪುಟ್ಟ ಕಾರಣಗಳಿಗಾಗಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ವೈವಾಹಿಕ ಸಂಬಂಧವು ಸುಲಭವಾಗಿ ಮುರಿದುಹೋಗುತ್ತಿದೆ. ಈ ಪ್ರಕರಣದಲ್ಲೂ ಹಾಗೆಯೇ ಪತಿ-ಪತ್ನಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಈ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬಂದಾಗ ಪತ್ನಿ ಒಂದು ಹೆಜ್ಜೆ ಮುಂದಿಟ್ಟು, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆಯಿಟ್ಟು (alimony) ಪತಿಯಿಂದ ವಿಚ್ಛೇದನಕ್ಕೆ ಯತ್ನಿಸಿದ್ದಾಳೆ. ಕೋಟಿಗಟ್ಟಲೆ ಜೀವನಾಂಶ ನೀಡುವಂತೆ ಬೆದರಿಕೆ ಹಾಕಿದ್ದಾಳೆ ಎಂದು ಹೆಂಡತಿಯ ವಿರುದ್ಧ ಗಂಡ ಪೊಲೀಸ್ ದೂರು ದಾಖಲಿಸಿದ್ದಾರೆ. ವಿವರಗಳನ್ನು ನೋಡುವುದಾದರೆ…

ಪತಿಯಿಂದ ವಿಚ್ಛೇದನಕ್ಕೆ ರೂ. 6 ಕೋಟಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಪತ್ನಿಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಸಿರುವ ಪ್ರಕರಣ (Intimidation) ದಾಖಲಿಸಿಕೊಂಡಿದ್ದಾರೆ. ಇಬ್ಬರ ನಡುವಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಏತನ್ಮಧ್ಯೆ, ಜೀವನಾಂಶಕ್ಕಾಗಿ ಪತ್ನಿ ತನ್ನ ಪತಿಗೆ ಬೆದರಿಕೆ ಹಾಕಿದ್ದಾಳೆ ಎಂಬ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ನಾನಾ ಸೆಕ್ಷನ್ ಅಡಿಯಲ್ಲಿ ಪತ್ನಿ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Also Read: ಉಚಿತ ಯೋಜನೆಗಳ ಖುಷಿಯಲ್ಲಿ ಕಳೆದು ಹೋಗಬೇಡಿ, ಪಂಜಾಬ್​ನ ಸ್ಥಿತಿ ಒಮ್ಮೆ ನೋಡಿ

ಈ ಬಗ್ಗೆ ಭನ್ವಾರ್​​ಕುವಾ ಪೊಲೀಸ್ ಠಾಣೆಯ (Bhanwarkuwa police station) ಡಿಸಿಪಿ ರಾಜೇಶ್ ಸಿಂಗ್ ಮಾತನಾಡಿ, ಲಲಿತ್‌ಪುರದಲ್ಲಿ ವಾಸಿಸುವ ರಾಮ್ ರಜಪೂತ್ ದಂಪತಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:36 pm, Mon, 12 June 23

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು