AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆ ಸೇರಿ ಪತಿಗೆ ಹಾವು ಕಚ್ಚಿಸಿ ಕೊಂದ ಪತ್ನಿ, ತನಿಖೆ ವೇಳೆ ಬಯಲಾಯ್ತು ನಾಲ್ಕು ತಿಂಗಳ ಸ್ಕೆಚ್

ಉತ್ತರ ಪ್ರದೇಶದ ಮೀರತ್‌ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ವಿಷಪೂರಿತ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆರಂಭದಲ್ಲಿ ಸಹಜ ಸಾವು ಎಂದು ಭಾವಿಸಲಾಗಿದ್ದರೂ, ಪೊಲೀಸರ ತನಿಖೆಯಿಂದ ಇದು ಪೂರ್ವಯೋಜಿತ ಕೊಲೆ ಎಂದು ಬಯಲಾಗಿದೆ. ಅಕ್ರಮ ಸಂಬಂಧ ಮತ್ತು ಆಸ್ತಿಗಾಗಿ ನಡೆದ ಈ ಕೃತ್ಯದಲ್ಲಿ ಪತ್ನಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ಕು ತಿಂಗಳ ಸುದೀರ್ಘ ಪಿತೂರಿಯ ಬಳಿಕ ಮೂರನೇ ಪ್ರಯತ್ನದಲ್ಲಿ ಹತ್ಯೆ ನಡೆಸಲಾಗಿದೆ.

ಪ್ರಿಯಕರನ ಜತೆ ಸೇರಿ ಪತಿಗೆ ಹಾವು ಕಚ್ಚಿಸಿ ಕೊಂದ ಪತ್ನಿ, ತನಿಖೆ ವೇಳೆ ಬಯಲಾಯ್ತು ನಾಲ್ಕು ತಿಂಗಳ ಸ್ಕೆಚ್
ಹಾವು
ನಯನಾ ರಾಜೀವ್
|

Updated on: Jul 18, 2026 | 3:21 PM

Share

ಮೀರತ್, ಜುಲೈ 18: ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ (Murder)ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​ನ ಹಸ್ತಿನಾಪುರ ಪ್ರದೇಶದಲ್ಲಿ ನಡೆದಿದೆ. ಅತುಲ್ ಪವಾರ್ ಎಂಬ ಯುವಕನ ಸಾವಿನ ಹಿಂದೆ ಬೆಚ್ಚಿ ಬೀಳಿಸುವ ಪಿತೂರಿ ಕೂಡ ಇದೆ ಎಂದು ತಿಳಿದುಬಂದಿದೆ. ಆರಂಭದಲ್ಲಿ ಕೇವಲ ಹಾವಿನ ಕಡಿತದಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿತ್ತು. ಆದರೆ ಪೊಲೀಸರು ನಡೆಸಿದ ತೀಕ್ಷ್ಣ ತನಿಖೆಯಲ್ಲಿ, ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ವಿಷಪೂರಿತ ಹಾವಿನಿಂದ ಕಚ್ಚಿಸಿ ಪತಿಯನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಕೂಲ್ ವ್ಯಾನ್ ಡ್ರೈವರ್ ಜೊತೆ ಅಕ್ರಮ ಸಂಬಂಧ ಪೊಲೀಸ್ ವಿಚಾರಣೆಯ ವೇಳೆ ಬಯಲಾದ ಮಾಹಿತಿ ಪ್ರಕಾರ, ಮೃತ ಅತುಲ್ ಪವಾರ್ ಅವರ ಪತ್ನಿ ದಾಮಿನಿ ಸುಮಾರು ಒಂದು ವರ್ಷದ ಹಿಂದೆ ತುಷಾರ್ (ನಿಕ್ಕಿ) ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ವಿಶೇಷವೆಂದರೆ, ಈ ಪ್ರಿಯಕರ ತುಷಾರ್ ಬೇರಾರೂ ಅಲ್ಲ, ಅತುಲ್ ನಡೆಸುತ್ತಿದ್ದ ಶಾಲಾ ವ್ಯಾನ್‌ನ ಚಾಲಕನಾಗಿದ್ದ. ಇವರಿಬ್ಬರ ಪ್ರೇಮ ಸಂಬಂಧಕ್ಕೆ ಅತುಲ್ ಅಡ್ಡಿಯಾಗಿದ್ದರಿಂದ ಮತ್ತು ಆತನ ಆಸ್ತಿಯನ್ನು ಲೂಟಿ ಮಾಡುವ ಉದ್ದೇಶದಿಂದ ಇಬ್ಬರೂ ಸೇರಿ ಅತುಲ್‌ನನ್ನು ಮುಗಿಸಲು ನಿರ್ಧರಿಸಿದ್ದರು.

4 ತಿಂಗಳಲ್ಲಿ 2 ಬಾರಿ ಫೇಲ್, 3ನೇ ಬಾರಿ ಹಾವಿನಿಂದ ಅಟ್ಯಾಕ್ ಕೊಲೆಯನ್ನು ಯಾರಿಗೂ ಅನುಮಾನ ಬಾರದಂತೆ ಸಹಜ ಸಾವಿನಂತೆ ತೋರಿಸಲು ಈ ಜೋಡಿ ಸ್ಕೆಚ್ ಹಾಕಿತ್ತು. ಇದಕ್ಕಾಗಿ ಕಳೆದ ನಾಲ್ಕು ತಿಂಗಳಿನಿಂದ ನಿರಂತರ ಪಿತೂರಿ ನಡೆದಿತ್ತು. ಅತುಲ್‌ನನ್ನು ಕೊಲ್ಲಲು ಆರೋಪಿಗಳು ಈ ಹಿಂದೆ ಎರಡು ಬಾರಿ ಪ್ರಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಅತುಲ್ ಎರಡೂ ಬಾರಿ ಬದುಕುಳಿದಿದ್ದ.

ಮತ್ತಷ್ಟು ಓದಿ: ಪತ್ನಿಯಿಂದಲೇ ವೈದ್ಯನ ಕೊಲೆ ಪ್ರಕರಣ: ಆರೋಪಿ ಡಾ. ಪ್ರಿಯಾಂಕಾ ಎರಡನೇ ಪತ್ನಿ!; ಬಗೆದಷ್ಟೂ ಬಯಲಾಗ್ತಿದೆ ಅಚ್ಚರಿಯ ಮಾಹಿತಿ

ಮೂರನೇ ಪ್ರಯತ್ನದಲ್ಲಿ ಆರೋಪಿಗಳು ಅತ್ಯಂತ ವಿಷಪೂರಿತವಾದ ಹಾವನ್ನು ತಂದು, ಅತುಲ್ ಮಲಗಿದ್ದಾಗ ಅದರಿಂದ ಕಚ್ಚಿಸಿದ್ದಾರೆ. ತೀವ್ರ ವಿಷದ ಪ್ರಭಾವದಿಂದ ಅತುಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುಟುಂಬಸ್ಥರು ಆಘಾತ, ಎಸ್‌ಎಸ್‌ಪಿ ಖಡಕ್ ಭರವಸೆ ಪತಿ ಸತ್ತ ತಕ್ಷಣವೇ ದಾಮಿನಿ ನಾಟಕವಾಡಿದ್ದಳಾದರೂ, ಅತುಲ್ ಕುಟುಂಬಸ್ಥರ ಅನುಮಾನದ ಮೇರೆಗೆ ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಇಡೀ ಜಾಲ ಪತ್ತೆಯಾಗಿದೆ. ಸದ್ಯ ಅತುಲ್ ಕುಟುಂಬಸ್ಥರು ತೀವ್ರ ಆಘಾತದಲ್ಲಿದ್ದಾರೆ.

ಈ ಅಪರಾಧದ ಕುರಿತು ಮಾತನಾಡಿರುವ ಮೀರತ್ ಎಸ್‌ಎಸ್‌ಪಿ (SSP) ಅವಿನಾಶ್ ಪಾಂಡೆ, “ಪೊಲೀಸರ ತ್ವರಿತ ಮತ್ತು ಚಾಣಾಕ್ಷ ಕ್ರಮದಿಂದಾಗಿ ಈ ಇಡೀ ಪಿತೂರಿ ಬಯಲಾಗಿದೆ. ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಕರಾರುವಕ್ಕಾಗಿ ಬಂಧಿಸಲಾಗಿದೆ. ಇಂತಹ ಕ್ರೂರ ಕೃತ್ಯ ಎಸಗಿದ ಯಾವುದೇ ಒಬ್ಬ ಆರೋಪಿಯನ್ನೂ ಸುಮ್ಮನೆ ಬಿಡುವುದಿಲ್ಲ, ನ್ಯಾಯಾಲಯದ ಮೂಲಕ ಕಠಿಣ ಶಿಕ್ಷೆ ಕೊಡಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್