AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ ಪುರುಷರ ಜತೆ ಮಾತನಾಡಬೇಡ ಎಂದಿದ್ದಕ್ಕೆ ಪತಿ ಕುಡಿಯುವ ಕಾಫಿಗೆ ವಿಷ ಬೆರೆಸಿದ ಮಹಿಳೆ

ಪರ ಪುರುಷರ ಜತೆ ಮಾತನಾಡಬೇಡ ಎಂದಿದ್ದಕ್ಕೆ ಪತ್ನಿಯೊಬ್ಬಳು ಪತಿ ಕುಡಿಯುವ ಕಾಫಿಯಲ್ಲಿ ವಿಷ ಬೆರೆಸಿರುವ ಘಟನೆ ಆಗ್ರಾದ ಮುಜಾಫರ್​ನಗರದಲ್ಲಿ ನಡೆದಿದೆ. ಗುರುವಾರ ಇಬ್ಬರ ಮಧ್ಯೆ ಕಲಹ ನಡೆದಿದೆ. ಆಗ ಪತ್ನಿ ಪತಿಯ ಕಾಫಿಯಲ್ಲಿ ವಿಷ ಬೆರೆಸಿ ಕುಡಿಯಲು ಕೊಟ್ಟಿದ್ದಾಳೆ. ಆತನ ಆರೋಗ್ಯ ತಕ್ಷಣವೇ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪರ ಪುರುಷರ ಜತೆ ಮಾತನಾಡಬೇಡ ಎಂದಿದ್ದಕ್ಕೆ ಪತಿ ಕುಡಿಯುವ ಕಾಫಿಗೆ ವಿಷ ಬೆರೆಸಿದ ಮಹಿಳೆ
ನಯನಾ ರಾಜೀವ್
|

Updated on: Mar 28, 2025 | 12:30 PM

Share

ಮುಜಾಫರ್​ನಗರ, ಮಾರ್ಚ್​ 28: ಪರ ಪುರುಷರ ಜತೆ ಮಾತನಾಡಬೇಡ ಎಂದಿದ್ದಕ್ಕೆ ಪತ್ನಿಯೊಬ್ಬಳು ಪತಿ ಕುಡಿಯುವ ಕಾಫಿಯಲ್ಲಿ ವಿಷ ಬೆರೆಸಿರುವ ಘಟನೆ ಆಗ್ರಾದ ಮುಜಾಫರ್​ನಗರದಲ್ಲಿ ನಡೆದಿದೆ. ಗುರುವಾರ ಇಬ್ಬರ ಮಧ್ಯೆ ಕಲಹ ನಡೆದಿದೆ. ಆಗ ಪತ್ನಿ ಪತಿಯ ಕಾಫಿಯಲ್ಲಿ ವಿಷ ಬೆರೆಸಿ ಕುಡಿಯಲು ಕೊಟ್ಟಿದ್ದಾಳೆ. ಆತನ ಆರೋಗ್ಯ ತಕ್ಷಣವೇ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇವರಿಬ್ಬರು 2 ವರ್ಷಗಳ ಹಿಂದೆ ವಿವಾಹವಾಗಿದ್ದರು. ಖಾಟೌಲಿಯ ನಿವಾಸಿ ಅನುಜ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯಲ್ಲಿ ಆಫೀಸ್​ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಟೌಲಿ ಪೊಲೀಸ್ ಠಾಣೆಯಲ್ಲಿ ಅನುಜ್ ಅವರ ಕುಟುಂಬದವರು ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಪತ್ನಿ ಪ್ರೀತಿಸಿದವನ ಜತೆ ಮದುವೆ ಮಾಡಿಸಿದ ಪತಿ ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ

ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ. ಬಬ್ಲೂ ಎಂಬ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ತಾನು ನೋಡಿಕೊಳ್ಳುವುದಾಗಿ ಹೇಳಿದನು. ಹೆಂಡತಿ ಆ ಬೇಡಿಕೆಯನ್ನು ಒಪ್ಪಿಕೊಂಡಳು.

ಮೀರತ್ ಕೊಲೆ ಪ್ರಕರಣ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬಾತನನ್ನು ಪತ್ನಿ ಮುಸ್ಕಾನ್ ಪ್ರಿಯಕರ ಸಾಹಿಲ್ ಜತೆ ಸೇರಿ ಕೊಲೆ ಮಾಡಿ 15 ತುಂಡುಗಳಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕಿ ಸಿಮೆಂಟ್​ನೊಂದಿಗೆ ಸೀಲ್ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು