AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯಿಂದ ಪ್ರಾಣ ಉಳೀತು, ಅಂದು ಏರ್​ ಇಂಡಿಯಾ ಹತ್ತಿದ್ರೆ ನಾನೇ ಇರ್ತಿರ್ಲಿಲ್ಲ: ಡಾ.ಉಮಂಗ್ ಪಟೇಲ್

ಗುಜರಾತ್​​ನಿಂದ ಲಂಡನ್​​ಗೆ ಹೊರಡಬೇಕಿದ್ದ ಡಾ. ಉಮಂಗ್ ಅಂದು ಪತ್ನಿಯ ಒತ್ತಾಯದ ಮೇರೆಗೆ ಉಳಿದುಕೊಂಡಿದ್ದರು. ಜೂನ್ 12ರಂದು ಅದೇ ಏರ್ ಇಂಡಿಯಾ ವಿಮಾನವನ್ನು ಅವರು ಏರಬೇಕಿತ್ತು. ಅಂದು ತನ್ನನ್ನು ಹೋಗದಂತೆ ತಡೆದ ಪತ್ನಿಗೆ ಧನ್ಯವಾದ ತಿಳಿಸಿದ್ದಾರೆ. ಉಮಂಗ್ ಪಟೇಲ್ ವೃತ್ತಿಯಲ್ಲಿ ವೈದ್ಯ.ಅವರು ಕಳೆದ ಐದು ವರ್ಷಗಳಿಂದ ಲಂಡನ್​​ನ ನಾರ್ಥಾಂಪ್ಟನ್​ನಲ್ಲಿ ವಾಸವಿದ್ದಾರೆ. ಉಮಂಗ್ ಅವರ ತಂದೆ ಕೂಡ ವೈದ್ಯರೇ ಆದರೆ ಅವರು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕಾರಣ ಅನಿವಾರ್ಯವಾಗಿ ಭಾರತಕ್ಕೆ ಮರಳಬೇಕಾಗಿತ್ತು.

ಹೆಂಡತಿಯಿಂದ ಪ್ರಾಣ ಉಳೀತು, ಅಂದು ಏರ್​ ಇಂಡಿಯಾ ಹತ್ತಿದ್ರೆ ನಾನೇ ಇರ್ತಿರ್ಲಿಲ್ಲ: ಡಾ.ಉಮಂಗ್ ಪಟೇಲ್
ಉಮಂಗ್
ನಯನಾ ರಾಜೀವ್
|

Updated on:Jun 16, 2025 | 12:54 PM

Share

ನವದೆಹಲಿ, ಜೂನ್ 16: ‘‘ಹೆಂಡತಿಯಿಂದ ಇಂದು ನಾನು ಜೀವಂತವಾಗಿದ್ದೇನೆ ಆಕೆಗೆ ಎಷ್ಟು ಧನ್ಯವಾದ ಹೇಳಿದ್ರೂ ಸಾಲ್ದು’’ ಎಂದು ಡಾ. ಉಮಂಗ್ ಪಟೇಲ್ ಹೇಳಿದ್ದಾರೆ. ಉಮಂಗ್ ಪಟೇಲ್ ವೃತ್ತಿಯಲ್ಲಿ ವೈದ್ಯ.ಅವರು ಕಳೆದ ಐದು ವರ್ಷಗಳಿಂದ ಲಂಡನ್​​ನ ನಾರ್ಥಾಂಪ್ಟನ್​ನಲ್ಲಿ ವಾಸವಿದ್ದಾರೆ. ಉಮಂಗ್ ಅವರ ತಂದೆ ಕೂಡ ವೈದ್ಯರೇ ಆದರೆ ಅವರು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕಾರಣ ಅನಿವಾರ್ಯವಾಗಿ ಭಾರತಕ್ಕೆ ಮರಳಬೇಕಾಗಿತ್ತು.

ಮೇ 24ರಂದು ಅವರು ಲಂಡನ್​​ನಿಂದ ತಮ್ಮ ಪತ್ನಿಯೊಂದಿಗೆ ಲಂಡನ್​ನಿಂದ ಬಂದಿದ್ದರು. ಜೂನ್ 12ರಂದು ಪತ್ನಿಯನ್ನು ಇಲ್ಲೇ ಬಿಟ್ಟು ಲಂಡನ್​​ಗೆ ಹೋಗಲು ಟಿಕೆಟ್ ಬುಕ್ ಮಾಡಿದ್ದರು. ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್‌ ಬುಕ್ ಮಾಡಿದ್ದರು. ಅದು ಟೇಕ್ ಆಫ್ ಆದ ತಕ್ಷಣ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿತು, ವಿಮಾನದಲ್ಲಿ 241 ಜನರು ಹಾಗೂ ಉಳಿದವರು ಸೇರಿ 270 ಮಂದಿ ಸಾವನ್ನಪ್ಪಿದ್ದರು.

ಡಾ. ಉಮಂಗ್ ಯುಕೆಯಿಂದ ತಮ್ಮ ಪತ್ನಿ, ಪುತ್ರರು ಹಾಗೂ ಅಜ್ಜಿಯೊಂದಿಗೆ ಬಂದಿದ್ದರು. ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಕೊಯ್ಡಮ್ ಗ್ರಾಮದಲ್ಲಿರುವ ತಮ್ಮ ಪೂರ್ವಜರ ಮನೆಗೆ ಬಂದಿದ್ದರು.ಜೂನ್ 9ರಂದು ತಮ್ಮ ಪತ್ನಿಯನ್ನು ಅವರ ತಾಯಿಯ ಮನೆಗೆ ಬಿಟ್ಟು ತಾವೊಬ್ಬರೇ ಹೊರಡುವ ನಿರ್ಧಾರ ಮಾಡಿದ್ದರು. ಟಿಕೆಟ್ ಬುಕ್ ಕೂಡ ಆಗಿತ್ತು. ಆದರೆ ಅತ್ತೆಯ ಮನೆಗೆ ಹೋಗುವಷ್ಟರ ಹೊತ್ತಿಗೆ ತೀವ್ರ ಜ್ವರವಿತ್ತು, ನಡೆದಾಡುವುದೂ ಕಷ್ಟವಾಗಿತ್ತು.

ಇದನ್ನೂ ಓದಿ
Image
ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ
Image
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
Image
ಅಪಘಾತ ನಡೆದ ಹಾಸ್ಟೆಲ್ ಮೇಲ್ಭಾಗದಲ್ಲಿ ವಿಮಾನದ 1 ಬ್ಲಾಕ್ ಬಾಕ್ಸ್ ಪತ್ತೆ
Image
ಬದುಕುಳಿದ ಏಕೈಕ ಪ್ರಯಾಣಿಕ ಮೋದಿ ಬಳಿ ಹೇಳಿದ್ದೇನು? ಇಲ್ಲಿದೆ ವಿವರ

ಮತ್ತಷ್ಟು ಓದಿ: ಏರ್​ ಇಂಡಿಯಾ ವಿಮಾನ ಬಿದ್ದ ರಭಸಕ್ಕೆ ಅಹಮದಾಬಾದ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ

ಹೀಗಾಗಿ ಜೂನ್ 12ರಂದು ನೀವು ಯುಕೆಗೆ ಹೋಗುವುದು ಬೇಡ ಟಿಕೆಟ್ ಕ್ಯಾನ್ಸಲ್ ಮಾಡಿಬಿಡಿ ಎಂದು ಪತ್ನಿ ತುಂಬಾ ಒತ್ತಾಯ ಮಾಡಿದ್ದರು. ಕೊನೆಗೂ ಉಮಂಗ್ ಅದಕ್ಕೆ ಒಪ್ಪಿ ಅಂದು ಲಂಡನ್​​ಗೆ ಪ್ರಯಾಣ ಬೆಳೆಸಿರಲಿಲ್ಲ. ಹೀಗಾಗಿ ಅವರು ಜೀವಂತವಾಗಿದ್ದಾರೆ. ತಾನು ಜೂನ್ 12 ರ ಟಿಕೆಟ್ ಅನ್ನು ರದ್ದುಗೊಳಿಸಿ, ಜೂನ್ 15 ಕ್ಕೆ ಇನ್ನೊಂದು ಟಿಕೆಟ್ ಬುಕ್ ಮಾಡಿದ್ದೆ, ಅದಾದ ಬಳಿಕ ವಿಮಾನ ಅಪಘಾತದ ಸುದ್ದಿ ಕೇಳಿದೆ. ದೇವರೇ ಹೆಂಡತಿಯ ರೂಪದಲ್ಲಿ ಬಂದು ನನ್ನನ್ನು ರಕ್ಷಿಸಿದ್ದಾನೆ ಎಂದು ಉಮಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 16 June 25

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ