AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಮೇಲೆ ಅನುಮಾನ, ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಹೆಂಡತಿ ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಘಟನೆ ನಡೆದಿದೆ. ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಹೆಂಡತಿ ಈ ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಹೀನಾ ಕೃತ್ಯ ಎಸೆದ ಮಹಿಳೆಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪತಿಯ ಮೇಲೆ ಅನುಮಾನ, ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
Boiling Oil
ಅಕ್ಷತಾ ವರ್ಕಾಡಿ
|

Updated on:May 31, 2025 | 1:54 PM

Share

ಚೆನ್ನೈ: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ ಹಲವು ಬಾರಿ ಜಗಳ ಮಾಡಿದ್ದಾಳೆ. ಇತ್ತೀಚಿಗಷ್ಟೇ 25 ದಿನಗಳ ಹಿಂದೆಯೂ ಮುತ್ತುಲಕ್ಷ್ಮಿ ಜಗಳವಾಡಿ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು.

ಈ ಸಂಬಂಧ ನೆಲ್ಲೈ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಾದ ನಂತರ, ಪೊಲೀಸರು ಇಬ್ಬರನ್ನೂ ಕರೆಸಿ ರಾಜಿ ಮಾತುಕತೆ ಮಾಡಿಸಿದ್ದಾರೆ. ಅದರಂತೆ ಮುತ್ತುಲಕ್ಷ್ಮಿ ನಾಲ್ಕು ದಿನಗಳ ಹಿಂದೆ ತನ್ನ ಗಂಡನ ಮನೆಗೆ ಹೋಗಿದ್ದಾಳೆ. ಈ ಪರಿಸ್ಥಿತಿಯಲ್ಲಿ, ನಿನ್ನೆ ಬೆಳಿಗ್ಗೆ, ಮೇ 30 ರಂದು ಮತ್ತೆ ಗಂಡ ಹೆಂಡತಿ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ತಾರಕಕ್ಕೇರಿದ್ದು, ಏಕಾಏಕಿ ಅಡುಗೆ ಮನೆಗೆ ಹೋದ ಮುತ್ತುಲಕ್ಷ್ಮಿ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ತದ್ದು ಸುಬ್ರಮಣಿಯನ್ ಮೇಲೆ ಹಾಕಿದ್ದಾಳೆ.

ಇದನ್ನೂ ಓದಿ: ಹೆಂಡ್ತಿಗೆ ಹೆರಿಗೆ ನೋವು : ಪತ್ನಿ ನೋವು ಅನುಭವಿಸುವುದನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತ ಪತಿ

ಪರಿಣಾಮವಾಗಿ, ನೋವಿನಿಂದ ಕಿರುಚುತ್ತಿದ್ದ ಬಾಲಸುಬ್ರಮಣಿಯನ್​​ಯನ್ನು ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಂತಿಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುತ್ತುಲಕ್ಷ್ಮಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲಿ, ಬಾಲಸುಬ್ರಮಣಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಮುತ್ತುಲಕ್ಷ್ಮಿ ಹೇಳಿಕೊಂಡಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Sat, 31 May 25

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ